ತೆಲುಗಿನ ಹೆಸರಾಂತ ನಟ ರಾಮ್ ಚರಣ್ ಪತ್ನಿ ಉಪಾಸನಾ (Upasana) ತಮ್ಮ ತಾತನ ಜೊತೆ ಅಯೋಧ್ಯೆಗೆ (Ayodhya) ತೆರಳಿ ರಾಮಲಲ್ಲಾ (Ramlalla) ದರ್ಶನ ಪಡೆದಿದ್ದಾರೆ. ರಾಮಲಲ್ಲಾ ಪ್ರತಿಷ್ಠಾಪನೆ ದಿನ ಪತಿ ರಾಮ್ ಚರಣ್ ಮತ್ತು ಮಾವ ಚಿರಂಜೀವಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆಗ ಉಪಾಸನಾ ಹೋಗಿರಲಿಲ್ಲ.
ಇಂದು ತಾತ ಮತ್ತು ಕುಟುಂಬದ ಕೆಲ ಸದಸ್ಯರ ಜೊತೆ ಅಯೋಧ್ಯೆಗೆ ಬಂದಿದ್ದ ಉಪಾಸನಾ, ದೇವರ ದರ್ಶನ ಪಡೆದಿದ್ದಾರೆ. ನಂತರ ಕೆಲವು ವಿಷಯಗಳನ್ನೂ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಂಚಿಕೊಂಡಿದ್ದಾರೆ.
ಅಯೋಧ್ಯೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎನ್ನುವುದು ಉಪಾಸನಾ ಕನಸಂತೆ. ಅದಕ್ಕಾಗಿ ಅವರು ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದಾರೆ. ತಮ್ಮ ಕನಸಿನ ಪ್ರಾಜೆಕ್ಟ್ ಬಗ್ಗೆ ಅವರ ಗಮನಕ್ಕೂ ತಂದಿದ್ದಾರೆ. ಸದ್ಯದಲ್ಲೇ ಆಸ್ಪತ್ರೆಯ ಕೆಲಸವನ್ನು ಶುರು ಕೂಡ ಮಾಡಲಿದ್ದಾರಂತೆ.