ಬೆಂಗಳೂರು: ವಿಷ್ಣು ಸ್ಮಾರಕ ಸ್ಥಾಪನೆಯಲ್ಲಿ ಉಂಟಾಗಿರುವ ಗೊಂದಲ ಬೆನ್ನಲ್ಲೇ ನಟ ಜಗ್ಗೇಶ್ ಮುಂದಿನ ತಲೆಮಾರಿನ ಯಾವುದೇ ನಟರಿಗೆ ಸರ್ಕಾರ ವತಿಯಿಂದ ಸ್ಮಾರಕ ನಿರ್ಮಾಣ ಕಾರ್ಯ ಬೇಡ ಎಂದು ಹೇಳಿದ್ದು, ಈ ಹೇಳಿಕೆ ನಟ ಉಪೇಂದ್ರ ಸಹಮತ ನೀಡಿ ಚಪ್ಪಾಳೆ ತಟ್ಟಿದ್ದಾರೆ.
ಈ ಕುರಿತು ಉಪೇಂದ್ರ ತಮ್ಮ ಟ್ವಿಟ್ಟರ್ ನಲ್ಲಿ ಫೋಟೋವೊಂದನ್ನು ಟ್ವೀಟ್ ಮಾಡಿದ್ದು, ಡಾ. ರಾಜ್ಕುಮಾರ್, ಡಾ. ವಿಷ್ಣುವರ್ಧನ್ ಮತ್ತು ಡಾ. ಅಂಬರೀಶ್ ಅವರಿಗೆ ಸ್ಮಾರಕ ಸಾಕು. ಮುಂದಿನ ಪೀಳಿಗೆಯವರಿಗೆ ಸ್ಮಾರಕ ಬೇಂಕು ಅಂದರೆ ನಮ್ಮ ಜಾಗದಲ್ಲೇ ಅಥವಾ ಅದಕ್ಕಾಗಿಯೇ ಒಂದು ಎಕರೆ ಜಾಗ ತಗೊಂಡು ಅಲ್ಲಿ ಸ್ಮಾರಕ ಮಾಡಿಕೊಳ್ಳಿ ಹಾಗೂ ನಮಗೇ ಸ್ಮಾರಕ ಮಾಡಿಕೊಡಿ ಎಂದು ಯಾವ ಕಲಾವಿದನೂ ಸರ್ಕಾರದ ಮುಂದೆ ಹೋಗಿ ಭಿಕ್ಷೆ ಬೇಡಬೇಡಿ ಬರೆಯಲಾಗಿದೆ.
???????????????????? pic.twitter.com/HxmXOsg0NX
— Upendra (@nimmaupendra) December 1, 2018
ಈ ಫೋಟೋ ಪೋಸ್ಟ್ ಮಾಡಿರುವ ಉಪೇಂದ್ರ ಅವರು, ಚಪ್ಪಾಳೆ ತಟ್ಟುವ ಇಮೋಜಿ ಹಾಕಿ ಬೆಂಬಲ ಸೂಚಿಸಿದ್ದಾರೆ. ಉಪೇಂದ್ರ ಅವರ ಈ ಟ್ವೀಟ್ಗೆ ನಟ ಜಗ್ಗೇಶ್ ಕೂಡ ಧನ್ಯವಾದ ತಿಳಿಸಿ, ಲವ್ ಯೂ ಎಂದು ಹೇಳಿದ್ದಾರೆ.
ಇತ್ತ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್, ಅಪ್ಪಾಜಿ ಶಾರೀರಕವಾಗಿ ದೂರವಾಗಿ ಒಂಭತ್ತು ವರ್ಷಗಳು ಕಳೆದಿವೆ. ಇದೂವರೆಗೆ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಬೆಂಗಳೂರಲ್ಲಿ ಪುಣೆ ಫಿಲ್ಮ್ ಇನ್ಸ್ಟಿಟ್ಯೂಷನ್ ರೀತಿ ಸಿನಿಮಾ ಮತ್ತು ಟಿಲಿವಿಷನ್ ಸಂಸ್ಥೆಯ ಶಾಖೆ ತೆರೆಯಬೇಕು. ಶುಕ್ರವಾರ ನಡೆದ ಸಭೆಯಲ್ಲಿ ಮೈಸೂರಿನಲ್ಲಿ ಅಂಬರೀಶ್ ಅವರ ಹೆಸರಲ್ಲಿ ಫಿಲ್ಮ್ ಸಿಟಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಅಪ್ಪಾಜಿ ಹೆಸರಲ್ಲಿ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಕೇವಲ ಬೇರೆ ಇಬ್ಬರ ನಾಯಕರ ಹೆಸರನ್ನು ತೆಗೆದುಕೊಳ್ಳುತ್ತಾರೆ. ಹಾಗಾದ್ರೆ ಅಪ್ಪಾಜಿ ಕನ್ನಡ ಚಲನಚಿತ್ರಕ್ಕೆ ಸೇವೆ ಸಲ್ಲಿಸಿಲ್ಲವೇ ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
Thnk u dear..love you… https://t.co/r4UGpq63na
— ನವರಸನಾಯಕ ಜಗ್ಗೇಶ್ (@Jaggesh2) December 1, 2018
https://www.facebook.com/publictv/videos/1198614446982932/
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv