Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೆರೇಸ್ ಮೇಲೆ ಮಗುವಿನ ರುಂಡ ಪತ್ತೆ ಪ್ರಕರಣ – ಶಿಶು ಬಲಿ ನೀಡಿದ್ದು ಈ ಕಾರಣಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಟೆರೇಸ್ ಮೇಲೆ ಮಗುವಿನ ರುಂಡ ಪತ್ತೆ ಪ್ರಕರಣ – ಶಿಶು ಬಲಿ ನೀಡಿದ್ದು ಈ ಕಾರಣಕ್ಕೆ

Latest

ಟೆರೇಸ್ ಮೇಲೆ ಮಗುವಿನ ರುಂಡ ಪತ್ತೆ ಪ್ರಕರಣ – ಶಿಶು ಬಲಿ ನೀಡಿದ್ದು ಈ ಕಾರಣಕ್ಕೆ

Public TV
Last updated: February 16, 2018 4:36 pm
Public TV
Share
3 Min Read
infant head
SHARE

ಹೈದರಾಬಾದ್: ಅಪರಿಚಿತ ಮಗುವಿನ ರುಂಡ ಮನೆಯ ಟೆರೇಸ್ ಮೇಲೆ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದು ಮಾನವ ಬಲಿ ಎಂದು ರಾಚಕೊಂಡ ಪೊಲೀಸರು ದೃಢಪಡಿಸಿದ್ದಾರೆ.

baby head case 1

ಫೆಬ್ರವರಿ 1ರಂದು ಇಲ್ಲಿನ ಉಪ್ಪಲ್ ಪ್ರದೇಶದ ಮನೆಯೊಂದರ ಮಹಡಿಯ ಮೇಲೆ ಮಗುವಿನ ರುಂಡ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 40 ವರ್ಷದ ಕ್ಯಾಬ್ ಚಾಲಕ ಕೆ. ರಾಜಶೇಖರ್ ಹಾಗೂ ಆತನ ಪತ್ನಿ ಶ್ರೀಲತಾ(35) ಳನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಆರೋಪಿ ರಾಜಶೇಖರ್ ನ ಪತ್ನಿಗೆ ದೀರ್ಘಕಾಲದ ಅನಾರೋಗ್ಯ ಇದ್ದು, ಅದನ್ನ ವಾಸಿ ಮಾಡಲು ನರಬಲಿ ಕೊಡಬೇಕು ಎಂದು ಯಾರೋ ಹೇಳಿದ್ದರಿಂದ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

infant head 2

ಅನಾಥ ಹೆಣ್ಣುಮಗು ಕಿಡ್ನಾಪ್: ರಾಜಶೇಖರ್ ಜನವರಿ 31ರಂದು ಬೋಯಗುಡ ಪ್ರದೇಶದಲ್ಲಿ ರಸ್ತೆಬದಿಯಿಂದ 3 ತಿಂಗಳ ಅನಾಥ ಹೆಣ್ಣುಮಗುವನ್ನ ಅಪಹರಿಸಿಕೊಂಡು ಬಂದಿದ್ದ ಎಂದು ರಾಚಕೊಂಡ ಪೊಲೀಸ್ ಆಯುಕ್ತರಾದ ಮಹೇಶ್ ಎಂ ಭಾಗ್ವತ್ ಹೇಳಿದ್ದಾರೆ.

infant head 2 1

ಮಗುವಿನ ದೇಹ, ಚಾಕುವನ್ನ ನದಿಗೆ ಎಸೆದಿದ್ದ: ರಾಜಶೇಖರ್ ಮಧ್ಯರಾತ್ರಿ ಮಗುವಿನ ರುಂಡ ಕಡಿದು, ಅದರ ದೇಹ ಮತ್ತು ಕೃತ್ಯಕ್ಕೆ ಬಳಸಿದ ಚಾಕುವನ್ನ ನದಿಗೆ ಎಸೆದಿದ್ದ. ನಂತರ ತನ್ನ ಹೆಂಡತಿ ಶ್ರೀಲತಾ ಜೊತೆಗೂಡಿ ಚಿಲುಕನಗರದ ತನ್ನ ಮನೆಯಲ್ಲಿ ಮಗುವಿನ ರುಂಡವನ್ನ ಇಟ್ಟು ಕ್ಷುದ್ರ ಪೂಜೆ ಕೈಗೊಂಡಿದ್ದ. ನಂತರ ತನಗೆ ಹೇಳಿದಂತೆ ಮಗುವಿನ ರುಂಡವನ್ನ ಮನೆಯ ಟೆರೇಸ್ ಮೇಲೆ ನೈಋತ್ಯ ಭಾಗದಲ್ಲಿ ಇಟ್ಟು ಚಂದ್ರಗ್ರಹಣದ ಬೆಳಕು ಹಾಗೂ ಬೆಳಗ್ಗೆ ಸುಮಾರು 4 ಗಂಟೆಯ ಸೂರ್ಯೋದಯದ ಬೆಳಕು ಅದರ ಮೇಲೆ ಬೀಳುವಂತೆ ಇಟ್ಟಿದ್ದ ಎಂದು ಮಹೇಶ್ ತಿಳಿಸಿದ್ದಾರೆ.

infant head 5

ಜನವರಿ 31ರಂದು ಸಂಪೂರ್ಣ ಚಂದ್ರಗ್ರಹಣ ಸಂಭವಿಸಿತ್ತು. ಮರುದಿನ ಬೆಳಗ್ಗೆ ರಾಜಶೇಖರ್ ಎಂದಿನಂತೆ ಕೆಲಸಕ್ಕೆ ಹೋಗಿದ್ದ. ಆದ್ರೆ ಆತನ ಅತ್ತೆ ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಮಗುವಿನ ರುಂಡವನ್ನ ನೋಡಿ ಕಿರುಚಿಕೊಂಡಾಗ ಎಲ್ಲರಿಗೂ ವಿಚಾರ ಗೊತ್ತಾಗಿ, ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಪ್ರಕರಣದ ತನಿಖೆ ವೇಳೆ 122 ಮೊಬೈಲ್ ಕಾಲ್ ರೆಕಾಡ್ರ್ಸ್ ಪರಿಶೀಲಿಸಲಾಗಿತ್ತು, 45 ಜನರನ್ನ ವಿಚಾರಣೆಗೊಳಪಡಿಸಿ 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನ ತಪಾಸಣೆ ಮಾಡಲಾಗಿತ್ತು ಎಂದು ಮಹೇಶ್ ಹೇಳಿದ್ದಾರೆ.

infant head 1

ರಾಜಶೇಖರ್ ಮನೆಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿದ್ದು, ಟೆರೇಸ್ ಮೇಲೆ ಪತ್ತೆಯಾದ ಮಗುವಿನ ರುಂಡದ ಡಿಎನ್‍ಎ ಮಾದರಿ ಜೊತೆ ಹೊಂದಾಣಿಕೆ ಇರುವುದು ವಿಧಿವಿಜ್ಞಾನ ಪರೀಕ್ಷೆಯ ವರದಿಯಿಂದ ತಿಳಿದುಬಂದಿತ್ತು. ಹೀಗಾಗಿ ಪೊಲೀಸರು ವಿಚಾರಣೆ ಮಾಡಿದಾಗ ರಾಜಶೇಖರ್ ತನ್ನ ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

infant head 4

ದುಷ್ಟಶಕ್ತಿ ಓಡಿಸಲು ನರಬಲಿ ಕೊಟ್ರಂತೆ: ಆರೋಪಿ ರಾಜಶೇಖರ್ ಪತ್ನಿಯ ಕಾಯಿಲೆ ಗುಣಪಡಿಸಲು 4 ವರ್ಷದಿಂದ ವೈದ್ಯರು, ಜ್ಯೋತಿಷಿಗಳು ಹಾಗೂ ಮಾಂತ್ರಿಕರನ್ನ ಸಂಪರ್ಕಿಸಿದ್ದ. ಇತ್ತೀಚೆಗೆ ಸಮ್ಮಕ್ಕ ಸರಳಮ್ಮ ಜಾತ್ರೆಗೆ ಹೋದಾಗ ಬುಡಕಟ್ಟು ವ್ಯಕ್ತಿಯೊಬ್ಬರನ್ನ ಭೇಟಿಯಾಗಿದ್ದ. ಆಗ ಅವರು, ಮನೆಯಲ್ಲಿ ದುಷ್ಟಶಕ್ತಿ ಇದೆ. ಪತ್ನಿಯ ಕಾಯಿಲೆ ವಾಸಿ ಮಾಡಲು ಮಗುವನ್ನ ಬಲಿ ಕೊಡಬೇಕೆಂದು ಹೇಳಿದ್ದರು. ವಾಪಸ್ ಬಂದ ನಂತರ ರಾಜಶೇಖರ್ ಮೂವರು ಮಾಂತ್ರಿಕರನ್ನ ಭೇಟಿಯಾಗಿದ್ದ. ಅವರು ಕೆಲವು ಪೂಜೆಗಳನ್ನ ಮಾಡಿದ್ದರೂ ಪತ್ನಿಯ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ದಂಪತಿ ನರಬಲಿ ಕೊಡಲು ನಿರ್ಧರಿಸಿದ್ದರು.

infant head 3

ಶ್ರೀಲತಾ ಕಳೆದ 4 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಹೀಗಾಗಿ ಅಕೆಯಿಂದ ದುಷ್ಟಶಕ್ತಿಗಳನ್ನ ದೂರ ಮಾಡಲು ಹೆಣ್ಣುಮಗುವನ್ನ ತಂದು ನರ ಬಲಿ ಕೊಡುವಂತೆ ಯಾರೋ ಸಲಹೆ ನೀಡಿದ್ದರು ಎಂದು ರಾಜಶೇಖರ್ ಪೊಲೀಸರಿಗೆ ಹೇಳಿದ್ದಾನೆ.

baby head case 3

ಅನಾಥ ಮಗುವನ್ನ ಅಪಹರಣ ಮಾಡಿದ್ರೆ ಅದು ಕಾಣೆಯಾದ್ರೂ ಯಾರಿಗೂ ಗೊತ್ತಾಗುವುದಿಲ್ಲ ಎಂದುಕೊಂಡು ರಾಜಶೇಖರ್ ಅನಾಥ ಮಗುವನ್ನೇ ಹುಡುಕಲು ನಿರ್ಧರಿಸಿದ್ದ ಎಂದು ಆಯುಕ್ತರಾದ ಮಹೇಶ್ ಹೇಳಿದ್ದಾರೆ.

baby head case 2

ಆರೋಪಿಗಳ ವಿರುದ್ಧ ಕೊಲೆ, ಅಪಹರಣ ಹಾಗೂ ಐಪಿಸಿ ಸೆಕ್ಷನ್ ನ ಇನ್ನಿತರೆ ಸಂಬಂಧಿತ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಮೃತ ಮಗುವಿನ ಗುರುತು ಪತ್ತೆಹಚ್ಚಲು ಮುಂದೆ ಬರುವಂತೆ ಜನರನ್ನು ಭಾಗ್ವತ್ ಮನವಿ ಮಾಡಿದ್ದಾರೆ.

baby head case

baby head case house accused

TAGGED:Babyheadhuman sacrificeHyderabadPublic TVterraceಚಂದ್ರಗ್ರಹಣಟೆರೇಸ್ನರಬಲಿಪಬ್ಲಿಕ್ ಟಿವಿಮಗುರುಂಡಹೈದರಾಬಾದ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
6 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
13 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
58 minutes ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
1 hour ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
1 hour ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?