Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸಿಎಂ ಆದ ಬಳಿಕ ಅರ್ಬನ್ ನಕ್ಸಲರು ಹೊರಗೆ ಬಂದಿದ್ದಾರೆ: ಸಿಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಸಿಎಂ ಆದ ಬಳಿಕ ಅರ್ಬನ್ ನಕ್ಸಲರು ಹೊರಗೆ ಬಂದಿದ್ದಾರೆ: ಸಿಟಿ ರವಿ

Bengaluru City

ಸಿದ್ದರಾಮಯ್ಯ ಸಿಎಂ ಆದ ಬಳಿಕ ಅರ್ಬನ್ ನಕ್ಸಲರು ಹೊರಗೆ ಬಂದಿದ್ದಾರೆ: ಸಿಟಿ ರವಿ

Public TV
Last updated: May 30, 2023 7:03 pm
Public TV
Share
3 Min Read
ct ravi
SHARE

ಬೆಂಗಳೂರು: ನಕ್ಸಲ್ (Naxals) ಚಟುವಟಿಕೆ ಒಡಿಶಾ ಕಡೆ ಸೀಮಿತ ಆಗಿತ್ತು. ಈಗ ಕರ್ನಾಟಕದಲ್ಲಿ ಶುರು ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ (Siddaramaiah) ಅವರು ಸಿಎಂ ಆದ ಬಳಿಕ ಅರ್ಬನ್ ನಕ್ಸಲರು ಹೊರಗೆ ಬಂದಿದ್ದಾರೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಸಿಟಿ ರವಿ, ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ನಕ್ಸಲರು ಇದ್ದರು. ಗುಳೆ ಹೋಗಿದ್ದ ನಕ್ಸಲರು, ಈಗ ಸಮೃದ್ಧಿ ಕಾಲ ಅಂತ ಬಂದಿರೋ ತರ ಇದೆ. ನಕ್ಸಲರು ಸಂವಿಧಾನ ವಿರೋಧಿಗಳು. ಈಗ ಅವರಿಗೆ ಹಾಲು ಕುಡಿದಂತಾಗಿದೆ. ಅವರಿಗೆ ಸಂವಿಧಾನದ ಮೇಲೆ ಅಲ್ಲ, ಗುಂಡಿನ ಮೇಲೆ ನಂಬಿಕೆ ಇದೆ ಎಂದು ವಾಗ್ದಾಳಿ ನಡೆಸಿದರು.

CT RAVI CONGRESS

ಪಠ್ಯ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಅವರು, ಹೆಡ್ಗೆವಾರ್ ಅವರು ಆರ್‌ಎಸ್‌ಎಸ್ ಸಂಸ್ಥಾಪಕರು. ಅವರ ಬಗ್ಗೆ ಪಠ್ಯ ಇದೆ. ಅವರನ್ನು ವಿರೋಧಿಸಿ, ಪಠ್ಯದಿಂದ ಹೇಗೆ ತೆಗೆಯುತ್ತಾರೆ ನೋಡೋಣ. ಅವರು ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದವರು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಆಗಿದ್ದರು. ಅನುಭವದ ಆಧಾರದ ಮೇಲೆ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳುತ್ತಾರೆ ಅಂದುಕೊAಡಿದ್ದೇನೆ. ಯಾರದ್ದೋ ಮಾತು ಕೇಳಿದರೆ ಮತ್ತೆ ಮನೆಗೆ ಹೋಗುತ್ತಾರೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಬಿಜೆಪಿ Vs ಡಿಎಂಕೆ – ಬಿಜೆಪಿ ಕಾರ್ಯಕರ್ತ ಜಡೇಜಾ ಆಟದಿಂದ ಚೆನ್ನೈಗೆ ಜಯ ಎಂದ ಅಣ್ಣಾಮಲೈ

ಉಚಿತ ಕೊಡುಗೆ ವಿಚಾರವಾಗಿ ಮಾತನಾಡಿ, ಚುನಾವಣೆಗೆ ಮೊದಲು ಮಹದೇವಪ್ಪ ನಿನಗೂ ಫ್ರೀ, ನನಗೂ ಫ್ರೀ ಅಂದಿದ್ದರು. ಉಚಿತ, ನಿಶ್ಚಿತ, ಖಂಡಿತ, ಖಚಿತ ಹೀಗೆ ಹೇಳಿದ್ದರು. ಮೊದಲು ಯಾವುದೇ ಷರತ್ತು ಇರಲಿಲ್ಲ. ಈಗ ಎಲ್ಲಾ ಷರತ್ತು ಬಂದಿದೆ. ಇವರು ಲೋಕಸಭೆ ಚುನಾವಣೆಯವರೆಗೂ ಕೊಡಬಹುದು. ನೋಡೋಣ ಏನು ಮಾಡುತ್ತಾರೆ ಎಂದು ಸವಾಲು ಹಾಕಿದರು.

DKShivakumar 1

ಈಗಾಗಲೇ ಊರುಗಳಲ್ಲಿ ಢಂಗೂರ ಸಾರುತ್ತಿದ್ದಾರೆ. ಲೈಟ್ ಬಿಲ್ ಕಟ್ಟಲ್ಲ, ಟಿಕೆಟ್ ತಗೋಳಲ್ಲ ಅಂತಿದ್ದಾರೆ. ಇವರು ಒಳ್ಳೆಯ ಕೆಲಸ ಮಾಡಿದ್ರೆ ಬೆಂಬಲ ಕೊಡುತ್ತೇವೆ. ಇಲ್ಲವೆ ಅರ್ಬನ್ ನಕ್ಸಲರ ಮಾತು ಕೇಳಿದ್ರೆ ಅನುಭವಿಸುತ್ತಾರೆ. ನಾವೂ ಕೂಡ 36% ಮತಗಳನ್ನು ಪಡೆದಿದ್ದೇವೆ. ಕಡಿಮೆ ಸೀಟುಗಳು ಬಂದಿರಬಹುದು. ಮುಂದೆ ಏನಾಗುತ್ತೆ ನೋಡೋಣ ಎಂದರು.

ಮಹದೇವಪ್ಪ, ಸಿದ್ದರಾಮಯ್ಯ, ಕಾಕಾ ಪಾಟೀಲ್ ಎಲ್ಲರೂ ಬಿಪಿಎಲ್ ಕಾರ್ಡ್ ಇರೋರಾ? ಅವರು ಮೊದಲೇ ಹೇಳಬೇಕಿತ್ತು ಇಂತವರಿಗೆ ಫ್ರೀ ಅಂತ. ಕಾಂಗ್ರೆಸ್ ಏನು ನಿನ್ನೆ ಮೊನ್ನೆ ಬಂದ ಪಕ್ಷವಾ? ಸಿದ್ದರಾಮಯ್ಯ, ಮಹದೇವಪ್ಪ ಯಾರೂ ಟ್ಯಾಕ್ಸ್ ಕಟ್ಟೋದಿಲ್ವಾ? ಎನ್‌ಇಪಿ ಕಿತ್ತಾಕ್ತೀವಿ ಅಂತ ಹೇಳ್ತಾರೆ. ನೈತಿಕ ಮೌಲ್ಯ ಶಿಕ್ಷಣ ಇವರಿಗೆ ಬೇಕಿಲ್ಲ. ಆಧುನಿಕ ಶಿಕ್ಷಣ ಇವರಿಗೆ ಬೇಕಿಲ್ಲ. ಒಂದು ಪೂರ್ವಾಗ್ರಹ ಮನಸ್ಥಿತಿಗೆ ಬಲಿಯಾಗಿದ್ದಾರೆ. ಮಾತೃಭಾಷೆ ವಿರೋಧಿಸುತ್ತಾರೆ, ಆಧುನಿಕ ಶಿಕ್ಷಣ ವಿರೋಧಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ನಾನು ಯಾವುದೇ ಹುದ್ದೆಯ ರೇಸ್‌ನಲ್ಲಿ ಇಲ್ಲ. ಪಕ್ಷ ಕೊಟ್ಟಿರೋ ಜವಾಬ್ದಾರಿಯಲ್ಲಿ ಕೆಲಸ ಮಾಡುತ್ತೇನೆ. ಕಳೆದ ಬಾರಿಗಿಂತ 9 ಸಾವಿರ ಮತ ಪಡೆದು ಸೋತಿದ್ದೇನೆ. ಅತಿ ಹೆಚ್ಚು ಕೆಲಸ ಮಾಡಿದ್ದು ಈ ಬಾರಿ. ಆದರೂ ಸೋತಿದ್ದೇನೆ. ನಾನು ಯಾವುದೇ ಅಧಿಕಾರಕ್ಕೆ ಬೇಡಿಕೆ ಇಟ್ಟಿಲ್ಲ. ಎಲ್ಲರನ್ನೂ ಜೋಡಿಸಿಕೊಂಡು ಕೆಲಸ ಮಾಡಬೇಕಿದೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕಿದೆ. ಕೊರೊನಾದಿಂದ ದೇಶಗಳ ಜಿಡಿಪಿ ಕುಸಿದಿದೆ. ನಮ್ಮದು 4.5 ಜಿಡಿಪಿ ಇದೆ. ಪ್ರಧಾನಿ ಮೋದಿ ಮಾತು ಜಗತ್ತು ಕೇಳುತ್ತಿದೆ. 2047ಕ್ಕೆ ಭಾರತ ಅಭಿವೃದ್ಧಿಶೀಲ ರಾಷ್ಟ್ರ ಮಾಡಬೇಕು ಅಂತಿದೆ. ಆದರೆ ಕೆಲ ಜಿಹಾದಿ ಮನಸ್ಥಿತಿ ಮುಸ್ಲಿಂ ರಾಷ್ಟ್ರ ಮಾಡಲು ಹೊರಟಿದೆ. ಪಕ್ಷ ಈಗ ಸೋತಿದೆ. ಆದರೆ ಲೋಕಸಭೆ ಚುನಾವಣೆ ಹೊತ್ತಿಗೆ ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

ವಿಪಕ್ಷ ನಾಯಕ ಸ್ಥಾನದ ಕುರಿತು ಮಾತನಾಡಿದ ಸಿಟಿ ರವಿ, ಪಕ್ಷದ ಶಾಸಕಾಂಗ ಸಭೆ ಕರೆದು ಚರ್ಚೆ ಮಾಡಲಾಗುತ್ತದೆ. ಪ್ರತಿಯೊಬ್ಬರನ್ನು ಕರೆದು ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಬಿಜೆಪಿಗೆ ಸೋಲು ಹೊಸದೇನಲ್ಲ. ಶೀಘ್ರವೇ ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

TAGGED:bjpcongressCT RaviGuaranteenaxalssiddaramaiahtextbookಕಾಂಗ್ರೆಸ್ಗ್ಯಾರಂಟಿನಕ್ಸಲರುಪಠ್ಯ ಪುಸ್ತಕಬಿಜೆಪಿಸಿಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
30 minutes ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
39 minutes ago
BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
1 hour ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
2 hours ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
2 hours ago
Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?