ಕಲಬುರಗಿ: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ (Ladle Mashak Dargah) ಮುಸ್ಲಿಮರು ನಿರ್ವಿಘ್ನವಾಗಿ ಉರುಸ್ (Urus) ಆಚರಿಸಿದರೆ ಹಿಂದೂಗಳು ಯಾವುದೇ ಅಡೆತಡೆ ಇಲ್ಲದೇ ಶ್ರೀರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ (Shivaratri Pooja) ಸಲ್ಲಿಸಿದ್ದಾರೆ.
ವಕ್ಫ್ ಟ್ರಿಬ್ಯುನಲ್ ಕೋರ್ಟ್ ಮತ್ತು ಕಲಬುರಗಿ ಹೈಕೋರ್ಟ್ ಪೀಠ ಅನುಮತಿ ನೀಡಿದ ಹಿನ್ನಲೆಯಲ್ಲಿ ಬಿಗಿ ಭದ್ರತೆಯಲ್ಲಿ 15 ಜನರ ತಂಡ ದರ್ಗಾದಲ್ಲಿನ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ (Raghava Chaitanya Shivalinga) ಪೂಜೆ ಸಲ್ಲಿಸಿತು.
ದರ್ಗಾಕ್ಕೆ ತೆರಳುವ ಮುನ್ನ ಆಳಂದ ಪಟ್ಟಣದ ಹೊರವಲಯದಲ್ಲಿ ಗಣಪತಿ ಪೂಜೆ, ಗಂಗಾ ಪೂಜೆ, ಮಹಾರುದ್ರಾಭಿಷೇಕ ಪೂಜೆ, ಸಹಸ್ರ ಬಿಲ್ವಾರ್ಚನೆ ಪೂಜೆ ಮತ್ತು ಮಹಾಮಂಗಳಾರತಿ ಪೂಜೆ ನೆರವೇರಿಸಲಾಯಿತು. ಶಿವರಾತ್ರಿ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಹಲವಾರು ಪೂಜಾ ಕೈಂಕರ್ಯಗಳಲ್ಲಿ ಕಡಗಂಚಿ ಶ್ರೀ, ಸಿದ್ದಲಿಂಗ ಶ್ರೀ ಸೇರಿದಂತೆ ಹಲವು ಬಿಜೆಪಿ ಶಾಸಕರು ಮತ್ತು ಮೂರು ಸಾವಿರಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು.
ಪೂಜೆ ಕೈಂಕರ್ಯಗಳು ಮುಗಿದ ಬಳಿಕ ಕಡಗಂಚಿ ಶ್ರೀಗಳು ಮತ್ತು ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ 15 ಜನ ಹಿಂದೂಗಳ ತಂಡ ಬಿಗಿ ಭದ್ರತೆಯಲ್ಲಿ ಲಾಡ್ಲೇ ಮಶಾಕ್ ದರ್ಗಾ ಪ್ರವೇಶ ಮಾಡಿದರು. ಪ್ರತಿಯೊಬ್ಬರ ವಿಳಾಸ ಪರಿಶೀಲಿಸಿ ದರ್ಗಾ ಪ್ರವೇಶಿಸಲು ಅನುಮತಿ ನೀಡಲಾಯಿತು. ಈ ವೇಳೆ ಒಳಗಡೆ ಮೊಬೈಲ್ ತೆಗೆದುಕೊಂಡು ಹೋಗಲು ಅನುಮತಿ ನೀಡಿರಲಿಲ್ಲ. ಇದನ್ನೂ ಓದಿ: ಯೋಗಿಯಿಂದಲೇ ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಬಿಜೆಪಿ ಪ್ಲಾನ್
ಮುಸ್ಲಿಮರಿಂದ ಪ್ರಾರ್ಥನೆ:
ಹಿಂದೂಗಳ ಪೂಜೆಗೂ ಮುನ್ನ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಮತ್ತು ಹೈಕೋರ್ಟ್ ಪೀಠದ ತೀರ್ಪಿನಂತೆ ಬೆಳಗ್ಗೆ 8 ಗಂಟೆಗೆ 15 ಜನ ಮುಸ್ಲಿಂ ಮುಖಂಡರು ಪೊಲೀಸ್ ಬಿಗಿ ಭದ್ರತೆಯಲ್ಲಿ ಲಾಡ್ಲೇ ಮಶಾಕ್ ದರ್ಗಾಕ್ಕೆ ಆಗಮಿಸಿದರು.
ಕಳೆದ ವರ್ಷ ನಡೆದ ಕೋಮು ಗಲಭೆ ಮರುಕಳಿಸದಂತೆ ಈ ಬಾರಿ ಕಲಬುರಗಿ ಜಿಲ್ಲಾ ಪೊಲೀಸರು ವ್ಯಾಪಕ ಬಂದೋಬಸ್ತ್ ಕೈಗೊಂಡ ಹಿನ್ನಲೆಯಲ್ಲಿ ಎರಡು ಧರ್ಮದ ಜನ ನಿರ್ವಿಘ್ನವಾಗಿ ಲಾಡ್ಲೇ ಮಶಾಕ್ ದರ್ಗಾದಲ್ಲಿ ಪೂಜೆ ಸಲ್ಲಿಸಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k