Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅದಾನಿ ಕಂಪನಿಗಳನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ – ಬಂದ್‌ ಆಗಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅದಾನಿ ಕಂಪನಿಗಳನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ – ಬಂದ್‌ ಆಗಿದ್ದು ಯಾಕೆ?

Latest

ಅದಾನಿ ಕಂಪನಿಗಳನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ – ಬಂದ್‌ ಆಗಿದ್ದು ಯಾಕೆ?

Public TV
Last updated: January 16, 2025 12:11 pm
Public TV
Share
3 Min Read
Hindenburg 1
SHARE

– ಯಾವುದೇ ಬೆದರಿಕೆಯಿಂದ ಮುಚ್ಚುತ್ತಿಲ್ಲ
– ವೈಯಕ್ತಿಕ ಕಾರಣಗಳಿಂದಾಗಿ ಸಂಸ್ಥೆಯನ್ನು ಮುಚ್ಚುತ್ತಿದ್ದೇವೆ

ವಾಷಿಂಗ್ಟನ್‌: ಅದಾನಿ ಸಮೂಹ ಕಂಪನಿಗಳನ್ನು (Adani Group) ಗುರಿಯಾಗಿ ವರದಿ ಪ್ರಕಟಿಸಿ ಸಂಚಲನ ಉಂಟುಮಾಡಿದ್ದ ಅಮೆರಿಕ ಶಾರ್ಟ್‌ ಸೆಲ್ಲಿಂಗ್‌ ಕಂಪನಿ ಹಿಂಡನ್‌ಬರ್ಗ್‌ ರಿಸರ್ಚ್‌ (Hindenburg Research) ಬಾಗಿಲು ಮುಚ್ಚಿದೆ.

ಹಿಂಡನ್‌ಬರ್ಗ್‌ ರಿಸರ್ಚ್‌ ಸಂಸ್ಥೆಯನ್ನು ವಿಸರ್ಜಿಸಲು ನಿರ್ಧರಿಸಿದ್ದೇನೆ ಎಂದು ಎಂದು ಸಂಸ್ಥಾಪಕ ನೇಟ್ ಆಂಡರ್ಸನ್ (Nate Anderson) ಹೇಳಿದ್ದಾರೆ.

ಅಚ್ಚರಿ ಏನೆಂದರೆ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಜ.20 ರಂದು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅಧಿಕಾರ ಸ್ವೀಕರಿಸಲು 4 ದಿನ ಮೊದಲೇ ಹಿಂಡನ್‌ಬರ್ಗ್‌ ಮುಚ್ಚುವ ನಿರ್ಧಾರ ಪ್ರಕಟವಾಗಿದೆ.

ಈ ವಿಚಾರದ ಬಗ್ಗೆಯೂ ಅಂಡರ್ಸನ್‌ ಪ್ರತಿಕ್ರಿಯಿಸಿ, ಈ ಶಾರ್ಟ್ ಸೆಲ್ಲರ್ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಂಸ್ಥೆಯನ್ನು ಮುಚ್ಚಲು ನಿರ್ದಿಷ್ಟ ಕಾರಣ ಏನು ಎನ್ನುವುದನ್ನು ಹೇಳಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಸಂಸ್ಥೆಯನ್ನು ಮುಚ್ಚುತ್ತಿದ್ದೇವೆ. ವೈಯಕ್ತಿಕ ಜೀವನಕ್ಕೆ ಹೆಚ್ಚು ಸಮಯ ನೀಡಲು ತಾನು ಈ ನಿರ್ಧಾರ ಮಾಡಿದ್ದಾಗಿ ಆಂಡರ್ಸನ್ ತಿಳಿಸಿದ್ದಾರೆ.

Nate Anderson Hindenburg Research

2017ರಲ್ಲಿ ಸ್ಥಾಪನೆಯಾದ ಹಿಂಡನ್‌ಬರ್ಗ್‌ ಬಹುರಾಷ್ಟ್ರೀಯ ಕಾರ್ಪೋರೇಟ್‌ ಕಂಪನಿಗಳ ಮೋಸವನ್ನು ಬಯಲು ಮಾಡುವುದು ತನ್ನ ಉದ್ದೇಶ ಎಂದು ಹೇಳಿಕೊಂಡಿತ್ತು. ಹಲವಾರು ಕಂಪನಿಗಳ ಬಗ್ಗೆ ವರದಿ ಪ್ರಕಟಿಸಿತ್ತು. ಇದರಿಂದ ಹಲವು ಕಂಪನಿಗಳಿಗೆ ಆರ್ಥಿಕವಾಗಿ ಬಹಳ ಸಮಸ್ಯೆಯಾಗಿತ್ತು. ಈ ಹಿಂಡನ್‌ಬರ್ಗ್‌  ಸಂಸ್ಥೆಯ ಮೇಲೆ ಕಂಪನಿಗಳು ಕೇಸ್‌ ಹಾಕಿದ್ದವು.

2023ರಲ್ಲಿ ಅದಾನಿ ಕಂಪನಿಯನ್ನು ಗುರಿಯಾಗಿಸಿದ್ದ ಹಿಂಡನ್‌ಬರ್ಗ್‌ ನಂತರ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ ವಿರುದ್ಧವೇ ವರದಿ ಪ್ರಕಟಿಸಿತ್ತು. ಈ ವರದಿಗಳು ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ರಕ್ತಪಾತವಾಗಿತ್ತು. ಅದಾನಿ ಕಂಪನಿಗಳ ಷೇರುಗಳ ಮೌಲ್ಯ ಭಾರೀ ಕುಸಿತಗೊಂಡಿತ್ತು.

Gautham Adani

ಅದಾನಿ ಕಂಪನಿಗಳ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಸಮಿತಿ ರಚನೆ ಮಾಡಿತ್ತು. ಈ ಸಮಿತಿ ಅದಾನಿ ಕಂಪನಿ ಕೃತಕವಾಗಿ ಷೇರುಗಳ ಬೆಲೆ ಹೆಚ್ಚಳ ಮಾಡಿಲ್ಲ ಎಂದು ವರದಿ ಸಲ್ಲಿಸಿತ್ತು.

ಲೋಕಸಭಾ ಅಧಿವೇಶನ ಆರಂಭಗೊಳ್ಳುವ ಸಮಯದಲ್ಲೇ ಹಿಂಡನ್‌ಬರ್ಗ್‌ ವರದಿ ಪ್ರಕಟ ಮಾಡುತ್ತಿತ್ತು. ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವು. ಇದಕ್ಕೆ ಬಿಜೆಪಿ ಪ್ರತಿಕ್ರಿಯಿಸಿ ಹಿಂಡನ್‌ಬರ್ಗ್‌ನಲ್ಲಿ ಜಾರ್ಜ್‌ ಸೊರೊಸ್ (George Soros) ಮುಖ್ಯ ಹೂಡಿಕೆದಾರ. ಭಾರತದ ಆರ್ಥಿಕ ಬೆಳವಣಿಗೆಯನ್ನು ಹಳಿತಪ್ಪಿಸಲು ವಿದೇಶದಿಂದ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿತ್ತು.

ಹಿಂಡನ್‌ಬರ್ಗ್‌ ಹೆಸರಿನಲ್ಲೇ ಶಾರ್ಟ್‌ ಸೆಲ್ಲಿಂಗ್‌ ಕಂಪನಿಯಾಗಿದೆ. ಉದ್ದೇಶಪೂರ್ವಕವಾಗಿ ತನ್ನ ಗ್ರಾಹಕರಿಗೆ ಲಾಭ ಮಾಡಲು ಈ ವರದಿ ಬಿಡುಗಡೆ ಮಾಡುತ್ತಿದೆ ಎಂಬ ಆರೋಪ ಬಂದಿತ್ತು.

ಏನಿದು ಶಾರ್ಟ್‌ಸೆಲ್ಲಿಂಗ್‌?
ಶಾರ್ಟ್ ಸೆಲ್ಲಿಂಗ್ ಎನ್ನುವುದು ಹೂಡಿಕೆಯ ತಂತ್ರವಾಗಿದ್ದು ಇದಕ್ಕೆ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಅವಕಾಶವಿದೆ. ಮುಂದಿನ ದಿನಗಳಲ್ಲಿ ಕಂಪನಿಯ ಷೇರು ಮೌಲ್ಯ ಕುಸಿಯಬಹುದು ಎಂಬುದನ್ನು ಮೊದಲೇ ಊಹಿಸಿ ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿ ನಂತರ ಆ ಕಂಪನಿಯ ಷೇರು ಮೌಲ್ಯ ಕುಸಿತಗೊಂಡಾಗ ಅವುಗಳನ್ನು ಕಡಿಮೆ ಬೆಲೆಗೆ ಮರು ಖರೀದಿಸಿ ಲಾಭ ಮಾಡುವುದಕ್ಕೆ ಶಾರ್ಟ್‌ ಸೆಲ್ಲಿಂಗ್‌ ಎಂದು ಕರೆಯಲಾಗುತ್ತದೆ. ಇದು ಒಂದು ರೀತಿಯಲ್ಲಿ ಅಪಾಯದ ಕಾರ್ಯಾಚರಣೆ. ಒಂದು ವೇಳೆ ಷೇರುಗಳ ಮೌಲ್ಯ ಕಡಿಮೆ ಆಗದೇ ಇದ್ದರೆ ಶಾರ್ಟ್‌ ಸೆಲ್ಲಿಂಗ್‌ ಟ್ರೇಡರ್‌ಗಳಿಗೆ ನಷ್ಟವಾಗುತ್ತದೆ.

 

ಅದಾನಿಯಿಂದ ಎಫ್‌ಪಿಒ ರದ್ದು:
20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿ 2023ರ ಜನವರಿಯಲ್ಲಿ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಿಂಡನ್‌ಬರ್ಗ್‌ ಅದಾನಿ ಕಂಪನಿ ವಿರುದ್ಧ ಸಂಶೋಧನಾ ವರದಿ ಬಿಡುಗಡೆ ಮಾಡಿತ್ತು. ವರದಿ ಬಳಿಕ ಅದಾನಿ ಕಂಪನಿಯ ಷೇರಿನ ಮೌಲ್ಯ ಕುಸಿತ ಕಂಡಿದ್ದರೂ ಎಫ್‌ಪಿಒ ಬಿಡ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿತ್ತು.

ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಂತರ 20 ಸಾವಿರ ಕೋಟಿ ರೂ. ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ಅದಾನಿ ಸಮೂಹ ರದ್ದು ಮಾಡಿತ್ತು. ನಮ್ಮ ಷೇರು ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಹೇಳಿ ಹೂಡಿಕೆದಾರರ ಹಣವನ್ನು ಮರಳಿಸಲಾಗುವುದು ಎಂದು ಗೌತಮ್‌ ಅದಾನಿ ತಿಳಿಸಿದ್ದರು.

 

TAGGED:adaniHindenburg ResearchindiaNate Andersonಅದಾನಿಅಮೆರಿಕ ಶಾರ್ಟ್‌ಸೆಲ್ಲಿಂಗ್‌ಹಿಂಡನ್‌ಬರ್ಗ್‌
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
56 minutes ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
1 hour ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
2 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
3 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
3 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?