ನವದೆಹಲಿ: ರಫೇಲ್ ಒಪ್ಪಂದದ ಬಗ್ಗೆ ಪ್ರತಿಪಕ್ಷ ನಾಯಕರು ಮಾತನಾಡುವ ಮುನ್ನ ಕಾಮನ್ ಸೆನ್ಸ್ ಬಳಸಿ. ಸುಮ್ಮನೆ ಮನಬಂದಂತೆ ಮಾತನಾಡಬೇಡಿ ಅಂತ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
ನಾನು ಹೇಳಿದ್ದು ನಮ್ಮ ವಾಯುಪಡೆ ಬಳಿ ರಫೇಲ್ ಜೆಟ್ ಇದ್ದಿದ್ದರೇ, ಶತ್ರುಗಳ ಮೇಲೆ ನಡೆಸಿದ ದಾಳಿಯಲ್ಲಿ ನಾವು ಯಾವ ಜೆಟ್ಗಳನ್ನು ಕಳೆದುಕೊಳ್ಳುತ್ತಿರಲಿಲ್ಲ. ಹಾಗೆಯೇ ಉಗ್ರರು ಉಳಿಯಲು ಬಿಡುತ್ತಿರಲಿಲ್ಲ ಅಂತ. ಆದ್ರೆ ವಿರೋಧ ಪಕ್ಷಗಳು ನನ್ನ ಹೇಳಿಕೆಯನ್ನು ಅಪಾರ್ಥ ಮಾಡಿಕೊಂಡು ಸುಮ್ಮನೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇನ್ಮುಂದೆ ರಫೇಲ್ ಬಗ್ಗೆ ಮಾತನಾಡುವ ಮುನ್ನ ದಯವಿಟ್ಟು ಸ್ವಲ್ಪ ಕಾಮನ್ ಸೆನ್ಸ್ ಬಳಸಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ನಾಚಿಕೆಯಾಗಲ್ವೇ, ರಫೇಲ್ ಖರೀದಿ ವಿಳಂಬಕ್ಕೆ ನೀವೇ ನೇರ ಹೊಣೆ: ಪ್ರಧಾನಿ ವಿರುದ್ಧ ರಾಹುಲ್ ಕಿಡಿ
ನಾವು ಸೇನೆಯನ್ನು ನಂಬಿ ಅದರ ಬಗ್ಗೆ ಹೆಮ್ಮೆ ಪಡುವುದು ಸಹಜ. ಆದ್ರೆ ಸೇನೆಯ ಮೇಲೆಯೇ ಯಾಕೆ ಕೆಲವರು ಶಂಕಿಸುತ್ತಿದ್ದಾರೆ ಅಂತ ಗೊತ್ತಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಹಾಗೆಯೆ ಉಗ್ರರು ಹಾಗೂ ಭಯೋತ್ಪಾದನೆಯನ್ನು ಮಟ್ಟಹಾಕಲು ಭಾರತ ಪ್ರಯತ್ನಿಸುತ್ತಿದೆ. ಅದನ್ನು ಹೇಗೆ ಮಾಡಬೇಕು ಅಂತ ಯೋಚಿಸುತ್ತಿದೆ. ಭಯೋತ್ಪಾದನೆ ವಿಚಾರದಲ್ಲಿ ಭಾರತ ಸುಮ್ಮನೆ ಕೂರಲ್ಲ. ಭಯೋತ್ಪಾದನೆಯನ್ನು ಬುಡದಿಂದ ಕಿತ್ತೆಸೆಯುವ ಕೆಲಸ ನಾವು ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv