Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ

Bengaluru City

ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ

Public TV
Last updated: December 27, 2021 8:49 pm
Public TV
Share
3 Min Read
THAVAR CHAND GEHLOT
SHARE

ಬೆಂಗಳೂರು: ಖಾದಿ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ನೇಕಾರರು ತಯಾರಿಸುವ ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವವಿದ್ಯಾಲಯಗಳ ಘಟಿಕೋತ್ಸವ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿ ಖಾದಿ ಧಿರಿಸು ಅಥವಾ ದೇಸಿ ಉಡುಪು ಬಳಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಲಹೆ ನೀಡಿದರು.

THAVAR CHANDH GEHLOT

ಇಂದು ನಗರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನ-2021 ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸಾಮಾಜಿಕ ಮೌಲ್ಯಗಳನ್ನು ಮನದಟ್ಟು ಮಾಡಿಸುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಮಹತ್ವದ್ದಾಗಿರುತ್ತದೆ. ಎಲ್ಲಾ ವಿಶ್ವವಿದ್ಯಾಲಯಗಳು ಸಾಮಾಜಿಕ ವಿಷಯಗಳನ್ನು ಅಧ್ಯಯನ ಮಾಡಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ದೇಸಿ ಉಡುಪು ಬಳಕೆ ಮಾಡುವ ಮೂಲಕ ದೇಶದ ಉತ್ಪನ್ನಗಳಿಗೆ ಉತ್ತೇಜನ ನೀಡಬೇಕು. ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ವಿಶ್ವವಿದ್ಯಾಲಯಗಳಲ್ಲಿ ದಿವ್ಯಾಂಗರಿಗೆ, ಅಶಕ್ತರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು. ಕಾನೂನು ವಿಶ್ವವಿದ್ಯಾಲಯವು ಬಡವರಿಗೆ ಉಚಿತವಾಗಿ ಕಾನೂನಿನ ಸಲಹೆ ನೀಡಲು ಮುಂದಾಗಬೇಕು. ಒಟ್ಟಾರೆ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಜೊತೆ ಜೊತೆಗೆ ಉತ್ತಮ ಪರಿಸರ ನಿರ್ಮಾಣ ಮಾಡುವ ಜವಾಬ್ದಾರಿ ಕುಲಪತಿಗಳದ್ದಾಗಿರುತ್ತದೆ ಎಂದರು. ಇದನ್ನೂ ಓದಿ: ಜ.2ರಂದು ಅನಿವಾಸಿ ಕನ್ನಡಿಗರಿಂದ ಟ್ವಿಟ್ಟರ್, ಇ-ಮೇಲ್ ಅಭಿಯಾನ

ಇಡೀ ದೇಶದಲ್ಲಿ ಉನ್ನತ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ರಾಜ್ಯ ಅಗ್ರ ಸ್ಥಾನದಲ್ಲಿದೆ. ಇದಕ್ಕೆ ವಿಶ್ವವಿದ್ಯಾಲಯಗಳ ಕೊಡುಗೆ ಅಪಾರ. ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನದಲ್ಲೂ ಇಡೀ ದೇಶದಲ್ಲಿ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಮತ್ತು ವಿಶ್ವವಿದ್ಯಾಲಯಗಳಿಗೆ ಅಭಿನಂದಿಸುತ್ತೇನೆ ಎಂದರು.

ನಗರದ ಕೆಎಸ್ ಹೆಚ್ಇಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನ-2021ವನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು. ಈ ವೇಳೆ ವಿವಿಧ ವಿವಿ ಕುಲಪತಿಗಳು, ರಿಜಿಸ್ಟ್ರಾರ್ ಗಳು, ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. pic.twitter.com/vnUs5iyd2U

— Thaawarchand Gehlot Office (@TcGehlotOffice) December 27, 2021

ವಿಶ್ವವಿದ್ಯಾಲಯಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ರಕ್ಷಣೆ ಮಾಡುವುದು, ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಶಿಕ್ಷಣ ಅರಿವು ಮೂಡಿಸುವುದು, ಶಿಕ್ಷಣ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳನ್ನು ಕಾರ್ಯರೂಪಗೊಳಿಸುವುದು, ಕರ್ತವ್ಯದ ಜೊತೆಗೆ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನಾಳೆಯಿಂದ ಎರಡು ದಿನ ಕೇಸರಿ ಕಹಳೆ – ಕೆಲ ಸಚಿವರಿಗೆ ಢವಢವ, ಜೆ.ಪಿ.ನಡ್ಡಾ ಬರ್ತಾರಾ..?

ಕೇಂದ್ರ, ರಾಜ್ಯ ಸರ್ಕಾರದ ಜೊತೆ ವಿವಿಗಳು ಕೈಜೋಡಿಸಬೇಕು:

ಯುಜಿಸಿಯ ಮಾರ್ಗಸೂಚಿಗಳ ಆಧಾರದ ಮೇಲೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾರಿಗೊಳಿಸುವಂತೆ ಹಾಗೂ ರಾಜ್ಯಪಾಲರು ಸಭೆಗೆ ಸೂಚಿಸಿದರು. ವಿಶ್ವವಿದ್ಯಾಲಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜೊತೆ ವಿಶ್ವವಿದ್ಯಾಲಯಗಳು ಕೈಜೋಡಿಸಬೇಕು. ವಿಶ್ವವಿದ್ಯಾಲಯದ ಆಡಳಿತಾತ್ಮಕ ಅನುಭವಗಳೊಂದಿಗೆ ಕುಲಪತಿಗಳು ಸರ್ಕಾರಕ್ಕೆ ಸಲಹೆಗಳನ್ನು ನೀಡಬಹುದು. ಉನ್ನತ ಶಿಕ್ಷಣವನ್ನು ಸಮಾಜಕ್ಕೆ ಸಮಾನವಾಗಿ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಕಾರ್ಯಪ್ರವೃತ್ತರಾಗಿರಬೇಕು ಎಂದು ತಿಳಿಸಿದರು.

ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಸಾಧ್ಯವಿರುವಂತಹ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸಮಸ್ಯೆಗಳನ್ನು ಬಗೆಹರಿಸಬೇಕು. ಸರ್ಕಾರದ ಮಟ್ಟದಲ್ಲಾದರೆ, ಸರ್ಕಾರಕ್ಕೆ ಪತ್ರ ಬರೆದು, ರಾಜ್ಯಪಾಲರಿಗೆ ಪ್ರತಿಯನ್ನು ಸಲ್ಲಿಸಿ. ಕಾನೂನಿನಾತ್ಮಕವಾಗಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು. ಯಾವುದೇ ಸಮಸ್ಯೆಗಳಿದ್ದರೆ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತರುವ ಮೂಲಕ ತ್ವರಿತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ವಿಶ್ವವಿದ್ಯಾನಿಲಯಗಳು ಮತ್ತು ಅವರ ಸಾಧನೆಗಳ ಕುರಿತು, ರಾಷ್ಟ್ರೀಯ ಶಿಕ್ಷಣ ನೀತಿ-2021ರ ಅನುಷ್ಠಾನ, ಅನುಷ್ಠಾನದ ಸಮಯದಲ್ಲಿ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಸವಾಲುಗಳನ್ನು ಜಯಿಸಲು ವಿಶ್ವವಿದ್ಯಾಲಯಗಳ ಪ್ರಯತ್ನ ಮತ್ತು ಎನ್ ಇಪಿ-2020ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸರ್ಕಾರಕ್ಕೆ ಸಲಹೆಗಳ ಕುರಿತು ಪ್ರಸ್ತುತ ಪಡಿಸಿದರು. ಅಲ್ಲದೇ, ಸಭೆಯಲ್ಲಿ ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿ ರಾಜ್ಯಪಾಲರ ಭಾಷಣ ಸೇರ್ಪಡೆಗೊಳಿಸಲು ಮತ್ತು ಖಾದಿ ಧಿರಿಸು ಬಳಸಲು ತೀರ್ಮಾನಿಸಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರಾದ ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

TAGGED:karnatakaKhadi AttireThawarchand GehlotUniversity Convocationಥಾವರ್ ಚಂದ್ ಗೆಹ್ಲೋಟ್ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನವಿವಿ ಘಟಿಕೋತ್ಸವದಲ್ಲಿ ಖಾದಿ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
7 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
8 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
8 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
9 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
9 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?