ಬೆಂಗಳೂರು: ವಿಧಾನಸಭೆಯ ಸಭಾಂಗಣಕ್ಕೆ ಅಪರಿಚಿತ ವ್ಯಕ್ತಿ ಪ್ರವೇಶ ಬೆನ್ನಲ್ಲೇ ಸ್ಪೀಕರ್ ಖಾದರ್ (UT Kader) ಅಲರ್ಟ್ ಆಗಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭದ್ರತೆ ಬಿಗಿಗೊಳಿಸುವಂತೆ ಸೂಚನೆ ಕೊಟ್ಟು ಖುದ್ದಾಗಿ ಪರಿಶೀಲನೆ ನಡೆಸಿದ್ದಾರೆ. ಈ ಬೆನ್ನಲ್ಲೇ ಸಚಿವಾಲಯದ ಸಿಬ್ಬಂದಿಯ ವ್ಯಾನಿಟಿ ಬ್ಯಾಗ್ನಲ್ಲಿ ಚಾಕುವೊಂದು ಪತ್ತೆಯಾಗಿದೆ. ಚಾಕು ವಶಕ್ಕೆ ಪಡೆದು ಮಹಿಳಾ ಸಿಬ್ಬಂದಿಗೆ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಪೊಲೀಸರು ಕಳುಹಿಸಿ ಕೊಟ್ಟಿದ್ದಾರೆ.
ಕಲಾಪದಲ್ಲಿ ಎಲ್ಲರೂ ಐಡಿ ಕಾರ್ಡ್ (ID Card) ತೋರಿಸಿ ಸದನ ಪ್ರವೇಶಿಸಬೇಕೆಂದು ಸ್ಪೀಕರ್ ಸೂಚನೆ ಕೊಟ್ಟಿದ್ದಾರೆ. ಈ ವೇಳೆ ಸದಸ್ಯರ ಪ್ರವೇಶ ವೇಳೆ ಫೇಸ್ ಐಡೆಂಟಿಫಿಕೇಷನ್ ವ್ಯವಸ್ಥೆ ಜಾರಿಗೆ ತನ್ನಿ ಅಂತ ಬಸವರಾಜ ರಾಯರೆಡ್ಡಿ ಸಲಹೆ ನೀಡಿದ್ದಾರೆ. ಹಾಗೆಯೇ ಮತ್ತೊಬ್ಬ ಸದಸ್ಯ, ಬಾರ್ ಕೋಡ್ ವ್ಯವಸ್ಥೆ ಜಾರಿಗೆ ತನ್ನಿ ಅಂತ ಸಲಹೆ ನೀಡಿದ್ರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]