ಲಕ್ನೋ: ಅಪ್ರಾಪ್ತ ದಲಿತ ಬಾಲಕಿಯೊಬ್ಬಳನ್ನು ಗ್ರಾಮದ ಸಮುದಾಯದ ಯುವಕನೊಬ್ಬ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಕುರಿತು ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅಪಹರಣದ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಬಾಲಕಿಯು ಮ್ಯಾಜಿಸ್ಟ್ರೆಟ್ ಮುಂದೆ ಸಂಪೂರ್ಣ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಶಿಕ್ಷಕನಿಂದ ಲೈಂಗಿಕ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ತಲೆಮರೆಸಿಕೊಂಡಿದ್ದ ಹುಡುಗ ಮತ್ತು ಆತನ ಇಬ್ಬರು ಸಹಚರರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಹೇಳಿಕೆ ಆಧರಿಸಿ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಘಟನೆಗೆ ಹಿಂದೂ ಸಂಘಟನೆಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳು ಮನವಿ ಪತ್ರವನ್ನೂ ಸಲ್ಲಿಸಿವೆ. ಇದನ್ನೂ ಓದಿ: ಹಸ್ತಮೈಥುನದ ವೀಡಿಯೋ ಕಳುಹಿಸಿ ಯುವತಿಯನ್ನು ಮಂಚಕ್ಕೆ ಕರೆದ ಎಂಬಿಎ ವಿದ್ಯಾರ್ಥಿ ಅರೆಸ್ಟ್
ಪಹಸು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 26 ರಂದು, ಗ್ರಾಮದ ಹುಡುಗನೊಬ್ಬ ಅಪ್ರಾಪ್ತ ದಲಿತ ಬಾಲಕಿಯನ್ನು ಮೋಹಿಸಿ ಕರೆದುಕೊಂಡು ಹೋಗಿದ್ದಾನೆ. ಇದಾದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವಿಚಾರ ತಿಳಿದ ಹಿಂದೂ ಸಂಘಟನೆಗಳು ಆಕ್ರೋಶಗೊಂಡು ಪಹಾಸು ಪೊಲೀಸ್ ಠಾಣೆಗೆ ಬಂದು ಮನವಿ ಪತ್ರ ಸಲ್ಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಸ್ಎಸ್ಪಿ ಸುರೇಂದ್ರ ತಿವಾರಿ ಮಾತನಾಡಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಸ್ಪಷ್ಟವಾಯಿತು. ಘಟನೆಯಲ್ಲಿ ಇನ್ನೂ ಇಬ್ಬರು ಭಾಗಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ.