Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಇಂದಿನಿಂದ ಮೂರು ದಿನ ಹಲವು ಕಾರ್ಯಕ್ರಮ

Public TV
Last updated: January 11, 2025 8:28 am
Public TV
Share
3 Min Read
Narendra Modi Ram Mandir
SHARE

ಲಕ್ನೋ: ಅಯೋಧ್ಯೆಯನ್ನು ಪ್ರಭು ಶ್ರೀರಾಮನ ಜನ್ಮಸ್ಥಳವೆಂದು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. 2024ರಲ್ಲಿ ಅಂದರೆ, ಕಳೆದ ವರ್ಷವಷ್ಟೇ ಅಯೋಧ್ಯೆಯಲ್ಲಿ ರಾಮ ದೇವಾಲಯದ (Ayodhya Ram temple) ನಿರ್ಮಾಣ ಕಾರ್ಯ ಪೂರ್ಣಗೊಂಡು ಲಕ್ಷಾಂತರ ಜನರು ಇಲ್ಲಿನ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಅಯೋಧ್ಯೆಯಲ್ಲಿನ ರಾಮ ಮಂದಿರವು ಹಿಂದೂ ಧರ್ಮೀಯರ ಜೀವಾಳವಾಗಿದೆ. ಇದೀಗ ಅಯೋಧ್ಯೆಯ ಬಾಲ ರಾಮನ ಪ್ರತಿಷ್ಠಾಪನೆಯಾಗಿ ವರ್ಷ ತುಂಬಿದೆ. ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂಭ್ರಮ ಇಂದಿನಿಂದ ಮೂರು ದಿನಗಳ ಕಾಲ ಜರುಗಲಿದೆ.

#WATCH | Uttar Pradesh: Devotees arrive at Ayodhya Ram temple on the occasion of the first anniversary of ‘Pran Pratishtha’ pic.twitter.com/G7fUpjpnaB

— ANI (@ANI) January 11, 2025

ಶುಭ ಯೋಗಗಳು ಹಾಗೂ ದ್ವಾದಶಿ ತಿಥಿಯು 2025ರಲ್ಲಿ ಜನವರಿ 11 ರಂದು ಬಂದಿರುವುದರಿಂದ ಅಯೋಧ್ಯೆ ರಾಮ ಮಂದಿರದ ವಾರ್ಷಿಕ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರ ಬದಲಾಗಿ ಜನವರಿ 11ರಂದು ಆಚರಿಸಲಾಗುತ್ತಿದೆ. ಈಗಾಗಲೇ ಅಯೋಧ್ಯೆಯ ರಾಮ ಮಂದಿರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಒಂದೊಂದೇ ಕಾರ್ಯಕ್ರಮಗಳು ನೆರವೇರುತ್ತಿವೆ. ಇದನ್ನೂ ಓದಿ: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗಳಿಗೆ ಬಾಂಬ್ ಬೆದರಿಕೆ – ವಿದ್ಯಾರ್ಥಿ ಅರೆಸ್ಟ್

Ayodhya Ram Mandir

ಇಂದಿನಿಂದ 3 ದಿನ ಏನೇನು ಕಾರ್ಯಕ್ರಮ?
* ಜ.11ರ ಮೊದಲ ದಿನ ಪ್ರತಿಷ್ಠಾ ದ್ವಾದಶಿಯ ಆರಂಭಿಕ ದಿನ, ಕಳೆದ ವರ್ಷದ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಂತೆಯೇ ಕಾರ್ಯಕ್ರಮ ಆರಂಭ
* ‘ಪಂಚಾಮೃತ’ ಮತ್ತು ಸರಯೂ ಜಲದ ಅಭಿಷೇಕವನ್ನು ಒಳಗೊಂಡಂತೆ ಅಭಿಷೇಕ ಸಮಾರಂಭ ಬೆಳಗ್ಗೆ 10 ಗಂಟೆಗೆ ಶುರು
* ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ರಾಮಲಲ್ಲಾಗೆ ಅಭಿಷೇಕ
* ಮಧ್ಯಾಹ್ನ 12.20ಕ್ಕೆ ಪ್ರಾಥಮಿಕ ಆರತಿ
* ಚಿನ್ನದ ಮತ್ತು ಬೆಳ್ಳಿಯ ಎಳೆಗಳಿಂದ ದೆಹಲಿಯಲ್ಲಿ ತಯಾರಿಸಿದ ವಿಶಿಷ್ಟ ಪೀತಾಂಬರಿಯಿಂದ ರಾಮಲಲ್ಲಾ ಮೂರ್ತಿಯ ಅಲಂಕಾರ
* ಬಳಿಕ 3 ದಿನ ಕಾಲ ಮಂಟಪ ಮತ್ತು ಯಜ್ಞಶಾಲೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಹೋಮಗಳು, ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳು ಏರ್ಪಾಡು
* 110 ಗಣ್ಯರು, ಜನಸಾಮಾನ್ಯರು ಸೇರಿ 5,000 ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ

AYODHYA

ವಾರ್ಷಿಕೋತ್ಸವ ಇಂದೇ ಏಕೆ?
2024ರಲ್ಲಿ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರಂದು ನಡೆಸಲಾಯಿತು. ಆದರೆ, ಈ ವರ್ಷ ಅಂದರೆ 2025ರಲ್ಲಿ ಅಯೋಧ್ಯೆ ರಾಮ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವವನ್ನು ಜನವರಿ 11 ರಂದು ಶನಿವಾರ ಆಚರಿಸಲಾಗುತ್ತಿದೆ. ಯಾಕೆಂದರೆ, ವೈದಿಕ ಸನಾತನ ಸಂಸ್ಕೃತಿಯ ಕ್ಯಾಲೆಂಡರ್‌ ಪ್ರಕಾರ, 2025ರಲ್ಲಿ ಪುಷ್ಯ ಮಾಸದ ಕೂರ್ಮ ದ್ವಾದಶಿಯು ಜನವರಿ 11 ರಂದು ಬರಲಿದೆ. ಕೂರ್ಮ ದ್ವಾದಶಿಯ ಆಧಾರದ ಮೇಲೆ ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನಾ ಮಹೋತ್ಸವವನ್ನು ಆಚರಿಸಲಾಗುವುದು. ಈ ವರ್ಷ ಅಂದರೆ 2025ರ ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆಯು ಸಂಪೂರ್ಣವಾಗಿ ಒಂದು ವರ್ಷವನ್ನು ಪೂರೈಸಲಿದೆ.

AYODHYA RAM MANDIR

ಪ್ರಾಣ ಪ್ರತಿಷ್ಠಾಪನೆಯ ದಿನ ರೂಪುಗೊಂಡ ಶುಭ ಯೋಗಗಳು:
2025ರ ಜನವರಿ 11ರಂದು ಶನಿವಾರ ಪುಷ್ಯ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿಯು ಇರಲಿದೆ. ಈ ದಿನ ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವ ಆಚರಿಸಲಾಗುವುದು. ಈ ಶುಭ ದ್ವಾದಶಿ ತಿಥಿಯಂದು ಹತ್ತು ಶುಭ ಯೋಗಗಳು ಏಕಕಾಲದಲ್ಲಿ ರೂಪುಗೊಳ್ಳುತ್ತಿವೆ. ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗಿಯಾಗ್ತಾರೆ ಆ್ಯಪಲ್ ಸಹ-ಸಂಸ್ಥಾಪಕ ಸ್ವೀವ್‌ ಜಾಬ್ಸ್‌ ಪತ್ನಿ

* ಈ ದಿನದ ನಕ್ಷತ್ರ – ಮೃಗಶಿರ ನಕ್ಷತ್ರ ಈ ದಿನದ ಶುಭ ಯೋಗಗಳು
* ಶುಕ್ಲಯೋಗ
* ಬ್ರಹ್ಮ ಯೋಗ
* ಬಾಲವ ಯೋಗ
* ಕೌಲವ ಯೋಗ
* ತೈತಿಲ ಯೋಗ
* ರೋಹಿಣಿ ಯೋಗ
* ಸರ್ವಾರ್ಥ ಸಿದ್ಧಿ ಯೋಗ
* ಅಮೃತ ಸಿದ್ಧಿ ಯೋಗ
* ಕೈಲಾಸ ಯೋಗ
* ನಂದಿ ಯೋಗ

TAGGED:Ayodhyadevoteesnarendra modiPran PratishthaRam Mandiruttar pradeshyogi adithyanathಅಯೋಧ್ಯೆಉತ್ತರ ಪ್ರದೇಶನರೇಂದ್ರ ಮೋದಿಯೋಗಿ ಆದಿತ್ಯನಾಥ್ರಾಮಮಂದಿರ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
4 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
5 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
5 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
7 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
44 minutes ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
44 minutes ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
59 minutes ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
2 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
2 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?