ಲಕ್ನೋ: ಕಾಲ್ ಸೆಂಟರ್ನಲ್ಲಿ (Call centre) ಕೆಲಸ ಮಾಡುತ್ತಿದ್ದ ಕಾನ್ಪುರದ ವ್ಯಕ್ತಿಯೊಬ್ಬ ಹೋಟೆಲ್ನಲ್ಲಿ (Hotel) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉತ್ತರಪ್ರದೇಶದ ನಾಕಾ ಹಿಂದೋಲಾ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಆಶಿಶ್ ಕುಮಾರ್ (28) ಎಂದು ಗುರುತಿಸಲಾಗಿದೆ. ಆಶಿಶ್ ಹೋಟೆಲ್ವೊಂದರಲ್ಲಿ ತಂಗಿದ್ದ. ಆತ ಒಂದು ದಿನ ಕಳೆದರೂ ರೂಮ್ನಿಂದಹೊರಗೆ ಬಾರದಿದ್ದನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಪಾಸಣೆಗೆಂದು ಹೋಗಿದ್ದಾರೆ. ನಂತರ ರೂಮ್ನ ಬಾಗಿಲನ್ನು ತಟ್ಟಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅದಾದ ಬಳಿಕ ಕಿಟಕಿಯಿಂದ ನೋಡಿದಾಗ ಆಶಿಶ್ ನೇಣು ಬಿಗಿದುಕೊಂಡಿರುವುದು ಕಂಡಿದೆ. ಘಟನೆಗೆ ಸಂಬಂಧಿಸಿ ಹೋಟೆಲ್ನವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು, ಆಶೀಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜೊತೆಗೆ ಆಶಿಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆತ ತನ್ನ ದೇಹವನ್ನು ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಗೆ ಹಸ್ತಾಂತರಿಸಬೇಕೇ ಹೊರತು ತನ್ನ ಕುಟುಂಬಕ್ಕಲ್ಲ (Family) ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಪತ್ನಿಯನ್ನು ಉಳಿಸೋ ಬದ್ಲು ವೀಡಿಯೋ ಮಾಡಿಕೊಂಡ ಪತಿ
ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆಶೀಶ್ ತನ್ನ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ಬೇಡ ಎನ್ನುವುದಕ್ಕೆ ಕಾರಣ ಏನು ಎನ್ನುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ