ಉತ್ತರ ಪ್ರದೇಶ ಸಿಎಂ ಭೇಟಿಯಾದ ಸೂರ್ಯ – ಮಿಸ್ಟರ್ 360 ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯೋಗಿ

Public TV
1 Min Read
Yogi Adityanath And Suryakumar Yadav

ಲಕ್ನೋ: ಟೀಂ ಇಂಡಿಯಾದ (Team India) ಆಟಗಾರ ಸೂರ್ಯ ಕುಮಾರ್ ಯಾದವ್ (Suryakumar Yadav) ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಲಕ್ನೋದ ಸಿಎಂ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Yogi Adityanath

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ (Atal Bihari Vajpayee Ekana Stadium) ಭಾನುವಾರ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಕೊನೆಯ ಒಂದು ಎಸೆತ ಬಾಕಿ ಇರುವಂತೆ 6 ವಿಕೆಟ್‍ಗಳ ರೋಚಕ ಜಯ ಸಾಧಿಸಿತ್ತು. ಈ ಪಂದ್ಯವನ್ನು ಮೈದಾನಕ್ಕೆ ಬಂದು ವೀಕ್ಷಿಸಿದ್ದ ಯೋಗಿ ಆದಿತ್ಯನಾಥ್ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದರು. ಇದನ್ನೂ ಓದಿ: ಬೌಲರ್‌ಗಳ ಆಟದಲ್ಲಿ ತಿಣುಕಾಡಿ ಗೆದ್ದ ಭಾರತ

Yogi Adityanath And Hardik Pandya

ಸೋಮವಾರ ಸೂರ್ಯಕುಮಾರ್ ಯಾದವ್ ಯೋಗಿ ಆದಿತ್ಯನಾಥ್ ಅವರ ಲಕ್ನೋದ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಯೋಗಿ ಆದಿತ್ಯನಾಥ್ ಫೋಟೋ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಯಂಗ್ & ಎನರ್ಜಿಟಿಕ್ ಸ್ಕೈ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಜೊತೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತದ ಮಹಿಳೆಯರಿಗೆ ಚೊಚ್ಚಲ ಅಂಡರ್‌ 19 ವಿಶ್ವಕಪ್‌

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ 19.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಸೂರ್ಯಕುಮಾರ್ ಯಾದವ್ ಔಟಾಗದೆ 26 ರನ್ (31 ಎಸೆತ, 1 ಬೌಂಡರಿ) ಸಿಡಿಸಿ 19.5ನೇ ಎಸೆತವನ್ನು ಬೌಂಡರಿಗಟ್ಟಿ ಭಾರತಕ್ಕೆ ಜಯ ತಂದು ಕೊಟ್ಟಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *