ರೈತರು ವಿದ್ಯುತ್ ಬಿಲ್ ಪಾವತಿಸುವ ಅಗತ್ಯವಿಲ್ಲ: ಅಮಿತ್ ಶಾ ಭರವಸೆ

Public TV
1 Min Read
amith shah

ಲಕ್ನೋ: ಬಿಜೆಪಿ ಪುನಃ ಅಧಿಕಾರಕ್ಕೆ ಬಂದರೆ ಮುಂದಿನ 5 ವರ್ಷಗಳ ಕಾಲ ರೈತರು ವಿದ್ಯುತ್ ಬಿಲ್‌ನ್ನು ಪಾವತಿಸುವ ಅವಶ್ಯಕತೆಯಿಲ್ಲ ಎಂದು ಗೃಹಸಚಿವ ಅಮಿತ್ ಶಾ ಭರವಸೆ ನೀಡಿದರು.

ಉತ್ತರಪ್ರದೇಶದ ದಿಬಿಯಾಪುರದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ, ಮಾರ್ಚ್ 18ರಂದು ಉಚಿತ ಗ್ಯಾಸ್ ಸಿಲಿಂಡರ್‌ಗಳು ನಿಮ್ಮ ಮನೆಗೆ ತಲುಪುತ್ತವೆ. ಇಲ್ಲದಿದ್ದರೆ ಮುಂದಿನ ಐದು ವರ್ಷಗಳವರೆಗೆ ರೈತರು ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದರು.

web bjp logo 1538503012658

ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ ಅವರು, ಮೊದಲ ಹಾಗೂ ಎರಡನೇ ಹಂತದ ಚುನಾವಣೆಯಿಂದ ಸಮಾಜವಾದಿ ಪಕ್ಷವನ್ನು ನಿರ್ನಾಮ ಮಾಡಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆ

yogi adityanath

ಪಶ್ಚಿಮ ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಬಿಜೆಪಿ ಸರ್ಕಾರ ರಚಿಸಲು ಮುನ್ನುಡಿ ಹಾಕಿದ್ದೇವೆ. ಮೂರನೇ ಹಂತದಲ್ಲಿ ಈ ಬಹುಮತವನ್ನು ಇನ್ನಷ್ಟು ಹೆಚ್ಚಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಈಶಾನ್ಯ ಭಾರತದವರ ಜೀವನ ಶೈಲಿಯ ಮೇಲೆ ಬಿಜೆಪಿ ಹಸ್ತಕ್ಷೇಪ: ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಎರಡನೇ ಹಂತದ ವಿಧಾನಸಭೆ ಚುನಾವಣೆ ಸೋಮವಾರ ಮುಕ್ತಾಯಗೊಂಡಿದೆ. ಇನ್ನೂ 5 ಹಂತದ ಮತದಾನ ಬಾಕಿಯಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *