ಲಕ್ನೋ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದರು. ಬಿಜೆಪಿಗೆ ಸೇರಿದರೆ ಹೇಮಾ ಮಾಲಿನಿಯಾಗಿ ಮಾಡುತ್ತೇನೆ ಎಂದು ಹೇಳಿದ್ದರು ಎಂದು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ(ಆರ್ ಎಲ್ಡಿ) ಜಯಂತ್ ಚೌಧರಿ ವಿವಾದಾತ್ಮಕ ಹೇಳಿಕೆ ನೀಡಿದರು.
ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನನ್ನ ಮೇಲೆ ಯಾವುದೇ ಪ್ರೀತಿಯೂ ಇಲ್ಲ. ನಾನು ಹೇಮಾಮಾಲಿನಿಯಂತೆ ಆಗಲು ಇಷ್ಟಪಡುವುದಿಲ್ಲ ಎಂದ ಅವರು, ನನ್ನನ್ನು ಸಮಾಧಾನಪಡಿಸುವುದರಿಂದ ನೀವು ಏನು ಪಡೆಯುತ್ತೀರಿ? ಜನರಿಗಾಗಿ ನೀವು ಏನು ಮಾಡುದ್ದೀರಿ? ಏಳು ರೈತರ ಕುಟುಂಬಗಳಿಗೆ ಏನು ಮಾಡಿದ್ದೀರಿ? ಅಜಯ್ ಮಿಶ್ರಾ ಇನ್ನೂ ಏಕೆ ಸಚಿವರಾಗಿದ್ದಾರೆ? ಎಂದು ಇದೇ ವೇಳೆ ಪ್ರಶ್ನಿಸಿದರು.
ಅಕ್ಟೋಬರ್ನಲ್ಲಿ ಲಖಿಂಪುರ ಖೇರಿಯಲ್ಲಿ ನಡೆದ ಪ್ರತಿಭಟನೆ ವೇಳೆ ರೈತರ ಮೇಲೆ ಹರಿಹಾಯ್ದ ಆರೋಪದ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಜೈಲು ಸೇರಿದ್ದಾರೆ. ಅವರನ್ನು ಸಚಿವ ವಜಾಗೊಳಿಸಲು ವಿರೋಧ ಪಕ್ಷ ಮುಖಂಡರು ಒತ್ತಾಯಿಸಿದರೂ ಬಿಜೆಪಿ ತಮ್ಮ ಸಂಪುಟದಲ್ಲಿ ಉಳಿಸಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಜೊತೆ ಆರ್ಎಲ್ಡಿ ಪಕ್ಷ ಮೈತ್ರಿ ಮಾಡಿಕೊಂಡಿದೆ. ಇತ್ತ ಉತ್ತರ ಪ್ರದೇಶದಲ್ಲಿ ಜಾಟ್ ಸಮುದಾಯದ ಬೆಂಬಲವನ್ನು ಮರಳಿ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಜನವರಿ 26ರಂದು ಜಾಟ್ ನಾಯಕರೊಂದಿಗೆ ಅಮಿತ್ ಶಾ ಸಭೆ ನಡೆಸಿ ಜಯಂತ್ ಚೌಧರಿ ಅವರು ತಪ್ಪು ದಾರಿ ಹಿಡಿದಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 7 ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ. ಇದನ್ನೂ ಓದಿ: ಜಯಲಲಿಲಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ – ಪೊಲೀಸರಿಗೆ ಸಂಕಷ್ಟ