Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ

Latest

ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ

Public TV
Last updated: March 11, 2022 8:20 am
Public TV
Share
2 Min Read
rashtrapati bhavan delhi entry fee timings holidays reviews header
SHARE

ನವದೆಹಲಿ: ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದರಿಂದ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್‌ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಅನುಮಾನ. ರಾಷ್ಟ್ರಪತಿ ಚುನಾವಣೆಯನ್ನು ಗೆಲ್ಲಬೇಕಾದರೆ ಉತ್ತರ ಪ್ರದೇಶದ ಗೆಲುವು ಬಿಜೆಪಿಗೆ ಅನಿವಾರ್ಯವಾಗಿತ್ತು.

modi yogi1

ಮತ ಲೆಕ್ಕಾಚಾರ ಹೇಗೆ?
ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಹಾಕುತ್ತಾರೆ. ವಿಧಾನಪರಿಷತ್‌ ಸದಸ್ಯರಿಗೆ ಮತ ಇಲ್ಲ.

543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ. ಇದನ್ನೂ ಓದಿ: Bulldozer is Back – ಟ್ರೆಂಡ್‌ ಆಯ್ತು ಬುಲ್ಡೋಜರ್‌, ಬುಲ್ಡೋಜರ್‌ ಏರಿ ಬಿಜೆಪಿಯಿಂದ ಸಂಭ್ರಮಾಚರಣೆ

ಎಲ್ಲ ಸಂಸದರ ವೋಟಿನ ಮೌಲ್ಯ 708. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಉತ್ತರ ಪ್ರದೇಶದ ಒಬ್ಬ ಶಾಸಕನ ಮತಕ್ಕೆ ದೇಶದಲ್ಲೇ ಅತಿಹೆಚ್ಚು ಮೌಲ್ಯ 208 ಇದೆ. ದೇಶದಲ್ಲೇ ಕಡಿಮೆ ಇರುವ ಸಿಕ್ಕಿಂ ರಾಜ್ಯದ ಒಬ್ಬ ಶಾಸಕನ ಮತದ ಮೌಲ್ಯ 7 ಇದೆ.

GOA ELECTION 1

ಉತ್ತರ ಪ್ರದೇಶದ 403 ಶಾಸಕರ ವೋಟಿನ ಮೌಲ್ಯ ಒಟ್ಟು 83,824. 80 ಸಂಸದರು ಮತ ಸೇರಿದರೆ ಮೌಲ್ಯ 56,640 ಆಗುತ್ತದೆ. ಉತ್ತರ ಪ್ರದೇಶ ಒಂದೇ ರಾಜ್ಯದಿಂದ 1.4 ಲಕ್ಷ ಮೌಲ್ಯದ ಮತಗಳು ಚಲಾವಣೆ ಆಗುತ್ತದೆ. ಉತ್ತರಾಖಂಡ 4,480, ಗೋವಾ 800, ಮಣಿಪುರದಲ್ಲಿ 1,080 ಮತಗಳು ಚಲಾವಣೆ ಆಗುತ್ತದೆ.

ಪಂಚರಾಜ್ಯಗಳ ಚುನಾವಣೆಗೂ ಮೊದಲು ಬಿಜೆಪಿ ಬಳಿ ರಾಷ್ಟ್ರಪತಿಯನ್ನು ಆಯ್ಕೆ ಮಾಡಿಕೊಳ್ಳಲು ಬೇಕಾದಷ್ಟು ಮತಗಳಿದ್ದವು. ಒಂದು ವೇಳೆ ಉತ್ತರ ಪ್ರದೇಶದಲ್ಲಿ ಸೋತಿದ್ದರೆ ಬಿಜೆಡಿ, ಟಿಆರ್‌ಎಸ್‌, ವೈಎಸ್‌ಆರ್‌ ಪಕ್ಷಗಳ ಬೆಂಬಲವನ್ನು ಬಿಜೆಪಿ ಕೇಳಬೇಕಿತ್ತು.

ram nath kovind republic day

ಯಾಕೆ ಮಹತ್ವ?
ರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತ ಪಕ್ಷದ ಅಭ್ಯರ್ಥಿ ಸೋತರೆ ಸರ್ಕಾರಕ್ಕೆ ಹಿನ್ನಡೆ ಎಂದೇ ಭಾವಿಸಲಾಗುತ್ತದೆ. ಕೇಂದ್ರ ಸರ್ಕಾರದ ಮಸೂದೆಗಳಿಗೆ ಸಹಿ ಹಾಕದೇ ಇದ್ದರೆ ಯೋಜನೆ/ ನಿರ್ಧಾರಗಳು ತಡವಾಗಿ ಜಾರಿಯಾಗಬಹುದು ಅಥವಾ ಜಾರಿ ಆಗದೇ ಇರಬಹುದು. ಹಲವು ಬಾರಿ ಸರ್ಕಾರದ ನಿರ್ಧಾರವನ್ನು ರಾಷ್ಟ್ರಪತಿಗಳು ಪ್ರಶ್ನಿಸುವ ಸಾಧ್ಯತೆ ಇರುತ್ತದೆ. ಸಂಸತ್ತಿನಲ್ಲೂ ಮಸೂದೆ ಪಾಸ್‌ ಆದರೂ ರಾಷ್ಟ್ರಪತಿಗಳು ಅಂಕಿತ ಹಾಕದೇ ಇದ್ದರೆ ಸರ್ಕಾರಕ್ಕೆ ಆದ ದೊಡ್ಡ ಮುಜುಗರ ಎಂದೇ ಭಾವಿಸಲಾಗುತ್ತದೆ.

pranab sonia gandhi

2014ರಲ್ಲಿ ಮೋದಿ ಸರ್ಕಾರ ಅಧಿಕಾರ ಬಂದಾಗ ಪ್ರಣಬ್‌ ಮುಖರ್ಜಿ ರಾಷ್ಟ್ರಪತಿ ಆಗಿದ್ದರು. ಈ ಸಂದರ್ಭದಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಚಾರ ಬಂದಾಗ ಹಣಕಾಸು ಸಚಿವರಾಗಿದ್ದ ಅರುಣ್‌ ಜೇಟ್ಲಿ ಅವರನ್ನು ಹಲವು ಬಾರಿ ಪ್ರಣಬ್‌ ಮುಖರ್ಜಿ ರಾಷ್ಟ್ರಪತಿ ಭವನಕ್ಕೆ ಕರೆಯಿಸಿ ಸ್ಪಷ್ಟನೆ ಕೇಳಿದ್ದರು.

2017ರ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದ ಕೋವಿಂದ್‌ ಶೇ.65.65 ಮತಗಳನ್ನು ಪಡೆದಿದ್ದರೆ ಯುಪಿಎ ಅಭ್ಯರ್ಥಿಯಾಗಿದ್ದ ಮೀರಾ ಕುಮಾರ್‌ ಶೇ.34.35 ಮತಗಳನ್ನು ಪಡೆದಿದ್ದರು. ಕೋವಿಂದ್‌ 2,930 ಮತ(7,02,044 ಮೌಲ್ಯ) ಪಡೆದಿದ್ದರೆ ಮೀರಾ ಕುಮಾರ್‌ 1,844 ಮತ(3,67,314 ಮೌಲ್ಯ) ಪಡೆದಿದ್ದರು. 77 ಮತಗಳು ತಿರಸ್ಕೃತವಾಗಿದ್ದವು.

TAGGED:goaManipurPresidential Electionsuttar pradeshUttarakhandಉತ್ತರ ಪ್ರದೇಶಬಿಜೆಪಿರಾಮನಾಥ್ ಕೋವಿಂದ್ರಾಷ್ಟ್ರಪತಿರಾಷ್ಟ್ರಪತಿ ಚುನಾವಣೆ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
10 minutes ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
17 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
1 hour ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
1 hour ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
1 hour ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?