Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗಿ ಸರ್ಕಾರದಿಂದ ಪ್ರತಿಭಟನಾಕಾರರ 67 ಅಂಗಡಿ ಮುಟ್ಟುಗೋಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯೋಗಿ ಸರ್ಕಾರದಿಂದ ಪ್ರತಿಭಟನಾಕಾರರ 67 ಅಂಗಡಿ ಮುಟ್ಟುಗೋಲು

Latest

ಯೋಗಿ ಸರ್ಕಾರದಿಂದ ಪ್ರತಿಭಟನಾಕಾರರ 67 ಅಂಗಡಿ ಮುಟ್ಟುಗೋಲು

Public TV
Last updated: December 23, 2019 5:16 pm
Public TV
Share
2 Min Read
yogi adityanath
SHARE

ಲಕ್ನೋ: ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಯನ್ನು ನಾಶ ಮಾಡಿದ ಪ್ರತಿಭಟನಾಕಾರರ 67 ಅಂಗಡಿಗಳನ್ನು ಉತ್ತರ ಪ್ರದೇಶದ ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.

ಈ ಅಂಗಡಿಗಳು ಪೌರತ್ವ ವಿಧೇಯಕ ಕಾಯ್ದೆಯ ವಿರೋಧಿ ಪ್ರತಿಭಟನೆಯಲ್ಲಿ ಹಿಂಸಾತ್ಮಕವಾಗಿ ಸಾರ್ವಜನಿಕ ಆಸ್ತಿ ಹಾನಿ ಉಂಟುಮಾಡಿದರಿಗೆ ಸೇರಿದೆ. ಈ ವಿಚಾರದ ಬಗ್ಗೆ ನಾವು ತನಿಖೆ ಮಾಡುತ್ತಿದ್ದು, ಒಂದು ವೇಳೆ ತನಿಖೆಯಲ್ಲಿ ಈ ಅಂಗಡಿಗಳು ಅವರಿಗೆ ಸೇರದೇ ಇದ್ದರೆ ಅವುಗಳನ್ನು ವಶಕ್ಕೆ ಪಡೆದುಕೊಳ್ಳುತ್ತೇವೆ ಎಂದು ಉತ್ತರ ಪ್ರದೇಶ ರಾಜ್ಯ ಸರ್ಕಾರದ ವಕ್ತಾರರು ಹೇಳಿದ್ದಾರೆ.

shops 1577075693

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಮತ್ತು ಅವರಿಗೆ ದಂಡ ವಿಧಿಸುವ ಮೂಲಕ ಸಾರ್ವಜನಿಕರ ಆಸ್ತಿಯನ್ನು ಮತ್ತೆ ದುರಸ್ಥಿ ಮಾಡಿಸಲಾಗುವುದು ಎಂದು ಹೇಳಿದ್ದರು. ಮುಖ್ಯಮಂತ್ರಿಯವರ ಈ ಹೇಳಿಕೆಯಂತೆ ಪ್ರತಿಭಟನಾಕರರ 67 ಅಂಗಡಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ಹಿಂಸಾತ್ಮಕ ಮಾರ್ಗದಲ್ಲಿ ನಡೆದಿದ್ದು. ಇದರಲ್ಲಿ ರಾಜ್ಯದ ಹಲವಾರು ಜಿಲ್ಲೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಅಪಾರ ಆಸ್ತಿ ನಾಶವಾಗಿದೆ. ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರ ಎಲ್ಲ ಆಸ್ತಿಯನ್ನು ವಶಪಡಿಸಿಕೊಂಡು ಅವುಗಳನ್ನು ಹರಾಜು ಹಾಕಿ ಅದರಿಂದ ನಷ್ಟವನ್ನು ಸರಿದೂಗಿಸಲಾಗುವುದು ಎಂದು ಯೋಗಿ ಅದಿತ್ಯನಾಥ್ ಹೇಳಿದ್ದರು.

CAA Lucknow

ಗಲಭೆಯ ಸಮಯದಲ್ಲಿ ಸಿಸಿಟಿವಿ ದೃಶ್ಯವಾಳಿಗಳು ಮತ್ತು ಘಟನೆಯ ವಿಡಿಯೋವನ್ನು ರೆಕಾರ್ಡಿಂಗ್ ಮಾಡಿ ಅದರಲ್ಲಿ ಕಂಡು ಬರುವ ವ್ಯಕ್ತಿಗಳನ್ನು ಗುರುತಿಸಿ ಕ್ರಮಕೈಗೊಳ್ಳಲಾಗುವುದು ಎಂದು ಯೋಗಿ ಹೇಳಿದ್ದಾರೆ. ಆದರೆ ಮುಜಫರ್ ನಗರದಲ್ಲಿ ಒಂದೇ ಬಾರಿ ಜನಸಮೂಹ ಅಂಗಡಿಗಳ ಹೊರಗೆ ಜಮಾವಣೆಗೊಂಡಿತ್ತು. ಇದರಲ್ಲಿ ಅಂಗಡಿಯ ಮಾಲೀಕ ಯಾರು ಎಂದು ತಿಳಿಯಲು ಆಗಿಲ್ಲ. ಇದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಆ ಜಿಲ್ಲೆಯ ಎಸ್‍ಪಿ ಅಭಿಷೇಕ್ ಯಾದವ್ ಅವರು ಹೇಳಿದ್ದಾರೆ.

ಮುಜಫರ್ ನಗರ ಸೇರಿದಂತೆ ಉತ್ತರ ಪ್ರದೇಶದ 12 ಜಿಲ್ಲೆಗಳಲ್ಲಿ ಶುಕ್ರವಾರ ನಮಾಜ್ ಮುಗಿದ ಮಧ್ಯಾಹ್ನದ ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಪ್ರತಿಭಟನೆಯಲ್ಲಿ ಸುಮಾರು 10 ಬೈಕ್ ಮತ್ತು ಹಲವಾರು ಕಾರುಗಳನ್ನು ಸುಟ್ಟು ಹಾಕಲಾಗಿತ್ತು. ಉದ್ರಿಕ್ತ ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಯನ್ನು ದ್ವಂಸಗೊಳಿಸಿದ್ದರು. ಈ ಪ್ರತಿಭಟನೆಯಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಸುಮಾರು 30 ಜನರು ಗಾಯಗೊಂಡಿದ್ದರು.

CAA Lucknow 1

ಉತ್ತರ ಪ್ರದೇಶದಲ್ಲಿ ಇನ್ನೂ ಪ್ರತಿಭಟನೆಯ ಕಿಚ್ಚು ಹಾಗೇ ಉಳಿದಿದ್ದು, ರಾಜ್ಯದ ಕೆಲ ಸೂಕ್ಷ್ಮ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ. ಇಂಟರ್ ನೆಟ್ ಸೌಲಭ್ಯವನ್ನು ಕಡಿತ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಸುಮಾರು 879 ಜನರನ್ನು ಬಂಧಿಸಲಾಗಿದೆ. ಈವರೆಗೆ 131 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

TAGGED:CitizenShip ActconfiscationprotestPublic TVShopsuttar pradeshYogi Adityanathಅಂಗಡಿಗಳುಉತ್ತರ ಪ್ರದೇಶಪಬ್ಲಿಕ್ ಟಿವಿಪೌರತ್ವ ಕಾಯ್ದೆಪ್ರತಿಭಟನೆಮುಟ್ಟುಗೋಲುಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
20 seconds ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
11 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
16 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
38 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
56 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?