ಕಾರವಾರ: ಮೈತ್ರಿ ಸರ್ಕಾರ ಬಿದ್ದ ಬೆನ್ನಲ್ಲೇ ಕಾಂಗ್ರೆಸ್ನ ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮುಂಬೈನಿಂದ ವಾಪಸ್ ಆಗಿದ್ದಾರೆ.
ಶಿವರಾಮ್ ಹೆಬ್ಬಾರ್ ಅವರು ಬುಧವಾರ ಸಂಜೆ ಯಲ್ಲಾಪುರದ ಮನೆಗೆ ಆಗಮಿಸಿದ್ದಾರೆ. ಸಾರ್ವಜನಿಕರಿಗೆ ತಿಳಿಯದಂತೆ ಶಾಸಕರು ಮನೆಗೆ ಸೇರಿದ್ದು, ಆಪ್ತರನ್ನು ಮಾತ್ರ ಕರೆದು ಮಾತುಕತೆ ನಡೆಸಿದ್ದಾರೆ. ಹೀಗಾಗಿ ಮನೆಗೆ ಬಾರದಂತೆ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದಾರೆ.
ಶಾಸಕ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ಸೇರುವ ಕುರಿತು ಕುಟುಂಬದವರೊಂದಿಗೆ ಹಾಗೂ ಆಪ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ರಾಜಕೀಯ ಭವಿಷ್ಯದಿಂದ ಬಿಜೆಪಿ ಸೇರುವುದು ಉತ್ತಮ. ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಅಂತ ತಿಳಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.