ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ಭಾರಿ ಮಳೆಯಿಂದ ಭೂಕುಸಿತ, ಮನೆ ಕುಸಿತ, ಹಠಾತ್ ಪ್ರವಾಹ ಸೇರಿದಂತೆ ಹಲವು ಅವಘಡಗಳು ಸಂಭವಿಸಿದ್ದು, ರುದ್ರಪ್ರಯಾಗ (Rudraprayag) ಜಿಲ್ಲೆಯಲ್ಲಿ ಭೂ ಕುಸಿತ (Landslide) ಹಾಗೂ ಮಣ್ಣಿನ ಸವಕಳಿಯಿಂದ ಮನೆಗಳು, ರಸ್ತೆಗಳು ಮತ್ತು ಕೃಷಿ ಜಮೀನುಗಳಿಗೆ ವ್ಯಾಪಕ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧಾರ್ ಕಿ ಟುನಿ ಪ್ರದೇಶದಲ್ಲಿ ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದ ಮಣ್ಣು ಮತ್ತು ಅವಶೇಷಗಳು ಕುಸಿದು ಟಿನ್ ಶೆಡ್ನ ಗೋಡೆ ಕುಸಿದ ಪರಿಣಾಮ ಅದರೊಳಗೆ ಮಲಗಿದ್ದ ಇಬ್ಬರು ನೇಪಾಳಿ ಕಾರ್ಮಿಕರು ಮೃತಪಟ್ಟಿದ್ದಾರೆ. ನಿರಂತರ ಮಳೆಯಿಂದ ಗುಡ್ಡದ ಮೇಲಿನ ದೊಡ್ಡ ಪ್ರಮಾಣದ ಮಣ್ಣು ಮತ್ತು ಅವಶೇಷಗಳು ಸಡಿಲಗೊಂಡು ಟಿನ್ ಶೆಡ್ ಮೇಲೆ ಬಿದ್ದಿವೆ. ಶೆಡ್ ಕುಸಿದ ಪರಿಣಾಮ ಒಳಗೆ ಮಲಗಿದ್ದ ಇಬ್ಬರು ಕಾರ್ಮಿಕರು ಸಿಲುಕಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿನೀತ್ ಪಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್ರೇಪ್ ಬೆನ್ನಲ್ಲೇ ದೆಹಲಿಯಲ್ಲಿ ಬಸ್ಗಳಿಗೆ ಹೊಸ ರೂಲ್ಸ್ – ಪ್ಯಾನಿಕ್ ಬಟನ್ ಕಡ್ಡಾಯ, ಕಿಟಕಿಗಳಿಗೆ ಪರದೆ ಹಾಕಂಗಿಲ್ಲ
ಇದಕ್ಕೂ ಮುನ್ನ ಸೋಮೇಶ್ವರ ಬ್ಲಾಕ್ನ ವದ್ಯೂರಾ ಗ್ರಾಮದಲ್ಲಿ ಮನೆಯೊಂದರ ಮೇಲೆ ಮಣ್ಣು ಮತ್ತು ಅವಶೇಷಗಳು ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದರು. ಜಿಲ್ಲಾಧಿಕಾರಿ ಅಂಶುಲ್ ಸಿಂಗ್ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ಇದನ್ನೂ ಓದಿ: ಓವರ್ಟೇಕ್ ಮಾಡಿದ್ದಕ್ಕೆ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ರು; ದುನಿಯಾ ವಿಜಯ್ ಪುತ್ರನ ವಿರುದ್ಧ ಗಾಯಾಳು ಮನೀಷ್ ಆರೋಪ
ಅಲ್ಮೋರಾದಲ್ಲಿ ಹಲವು ಗಂಟೆಗಳ ಕಾಲ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ಮಣ್ಣು ಮತ್ತು ಅವಶೇಷಗಳು ನುಗ್ಗಿದ್ದು, ಹಲವು ರಸ್ತೆಗಳು ಬಂದ್ ಆಗಿವೆ. ಇದರಿಂದ ಸಂಚಾರ ಹಾಗೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆ ಹಾಗೂ ಅಸ್ಥಿರವಾಗಿರುವ ಗುಡ್ಡ ಪ್ರದೇಶಗಳು ರಕ್ಷಣಾ ಮತ್ತು ರಸ್ತೆ ತೆರವು ಕಾರ್ಯಕ್ಕೆ ಸವಾಲಾಗಿ ಪರಿಣಮಿಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ‘ಸೇವಾ ಸಂಕಲ್ಪ’ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ
ಡೆಹ್ರಾಡೂನ್ನಲ್ಲೂ ಪ್ರವಾಹದ ಆತಂಕ:
ಡೆಹ್ರಾಡೂನ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹರ್ಬರ್ಟ್ಪುರ ಮತ್ತು ವಿಕಾಸನಗರ ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಪೊಲೀಸರು ಹಾಗೂ ಸ್ಥಳೀಯರು ಸೇರಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಇದನ್ನೂ ಓದಿ: ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ರಾಡ್ನಿಂದ ಹೊಡೆದು ತಂದೆಯನ್ನೇ ಕೊಂದ ಮಗ
ನೀರಿನಲ್ಲಿ ಸಿಲುಕಿದ್ದವರನ್ನು ರಕ್ಷಿಸಲು ಟ್ರ್ಯಾಕ್ಟರ್ಗಳನ್ನು ಬಳಸಲಾಗಿದೆ. ಸ್ಥಳೀಯ ಚರಂಡಿಗಳು ಹಾಗೂ ನದಿಗಳಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ಪ್ರೇಮನಗರದಲ್ಲಿ ಮಳೆಯಿಂದ ಉಕ್ಕಿ ಹರಿದ ನೀರಿನ ರಭಸಕ್ಕೆ ಹುಂಡೈ ಕ್ರೆಟಾ ಕಾರೊಂದು ಕೊಚ್ಚಿಕೊಂಡು ಹೋಗಿದೆ. ರಕ್ಷಣಾ ಸಿಬ್ಬಂದಿ ಗಾಯಗೊಂಡ ಮಹಿಳೆಯೊಬ್ಬರನ್ನು ರಕ್ಷಿಸಿದ್ದು, ಯುವಕ ಹಾಗೂ ಮತ್ತೊಬ್ಬ ಯುವತಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಮದುವೆ ಮನೆ ಮೇಲಿನ ದಾಳಿಗೆ ನಾಲ್ವರು ಬಲಿ – ʻಮರೆಯಲಾಗದ ಪಾಠ ಕಲಿಸ್ತೀವಿʼ; ಅಮೆರಿಕಕ್ಕೆ ಇರಾನ್ ಎಚ್ಚರಿಕೆ
ಸೂಕ್ಷ್ಮ ಪ್ರದೇಶಗಳಲ್ಲಿ SDRF ತಂಡಗಳ ನಿಯೋಜನೆ:
ಹಲವು ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ತುರ್ತು ಪರಿಸ್ಥಿತಿಗಳು ಎದುರಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಹೆಚ್ಚಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಮಳೆ ಸಂಬಂಧಿತ ತುರ್ತು ಪರಿಸ್ಥಿತಿಗಳು ಹಲವು ಜಿಲ್ಲೆಗಳಲ್ಲಿ ಎದುರಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಆಧುನಿಕ ರಕ್ಷಣಾ ಸಾಧನಗಳನ್ನು ಹೊಂದಿರುವ ಎಸ್ಡಿಆರ್ಎಫ್ ತಂಡಗಳನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು SDRF ಕಮಾಂಡೆಂಟ್ ಅರ್ಪಣ್ ಯದುವಂಶಿ ತಿಳಿಸಿದ್ದಾರೆ. ಇದನ್ನೂ ಓದಿ: ನಕಲಿ ಔಷಧಿ ದಂಧೆ – ಕಿಂಗ್ಪಿನ್ ಪ್ರಶಾಂತ್ ಕಸ್ಟಡಿಗೆ ಪಡೆಯಲು SIT ಸಜ್ಜು
ರುದ್ರಪ್ರಯಾಗದಲ್ಲಿ ಭೂ ಕುಸಿತದ ಆತಂಕ:
ರುದ್ರಪ್ರಯಾಗ ಜಿಲ್ಲೆಯ ಬಸೂಕೇದಾರ್ ತಹಸಿಲ್ನ ಕಿಮಾನಾ-ಡಾಂಕೋಟ್ ಗ್ರಾಮದಲ್ಲಿ ನಿರಂತರ ಭೂ ಕುಸಿತ ಹಾಗೂ ಮಣ್ಣಿನ ಸವಕಳಿಯಿಂದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಜಾನುವಾರುಗಳ ಕೊಟ್ಟಿಗೆ, ಶೌಚಾಲಯಗಳು ಮತ್ತು ಹಲವು ವರ್ಷಗಳಿಂದ ಕೃಷಿ ಮಾಡಲಾಗುತ್ತಿದ್ದ ಫಲವತ್ತಾದ ಜಮೀನುಗಳಿಗೆ ಹಾನಿಯಾಗಿದೆ. ಭಾರಿ ಮಳೆ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಮಾಜಿ ಬ್ಲಾಕ್ ಮುಖ್ಯಸ್ಥ ಪ್ರದೀಪ್ ಥಪ್ಲಿಯಾಲ್ ಗ್ರಾಮಕ್ಕೆ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೂ ಮಾಹಿತಿ ನೀಡಲಾಗಿದೆ. ಬಳಿಕ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಗ್ರಾಮಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಇದನ್ನೂ ಓದಿ: ತಮಿಳುನಾಡಿಗೆ ಕೆಆರ್ಎಸ್ ಡ್ಯಾಂನಿಂದ ನಿರಂತರ ಕಾವೇರಿ ನೀರು; ಒಳಹರಿವು ಕುಸಿತ
ರಸ್ತೆ ಸಂಚಾರಕ್ಕೂ ಹೊಡೆತ:
ಭೂ ಕುಸಿತದಿಂದ ಬಿನೋಬಾ ಧಾರ್ ತಿರುವಿನಿಂದ ಕಿಮಾನಾ-ಡಾಂಕೋಟ್ ನಡುವಿನ ಜಖಾಲಿ-ಭಿರಿ ಮೋಟಾರ್ ರಸ್ತೆಯ ಹಲವು ಭಾಗಗಳು ಹಾನಿಗೊಳಗಾಗಿವೆ. ಇದರಿಂದ ಗ್ರಾಮಸ್ಥರ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು, ಅಗತ್ಯ ವಸ್ತುಗಳು, ವೈದ್ಯಕೀಯ ಸೇವೆ ಸೇರಿದಂತೆ ದೈನಂದಿನ ಅವಶ್ಯಕತೆಗಳಿಗಾಗಿ ಪ್ರಯಾಣಿಸಲು ಜನರು ಪರದಾಡುತ್ತಿದ್ದಾರೆ. ರಸ್ತೆ ಸಂಚಾರವನ್ನು ತಕ್ಷಣ ಪುನಃಸ್ಥಾಪಿಸುವಂತೆ ಪ್ರದೀಪ್ ಥಪ್ಲಿಯಾಲ್ ಲೋಕೋಪಯೋಗಿ ಇಲಾಖೆಯನ್ನು ಒತ್ತಾಯಿಸಿದ್ದಾರೆ. ದುರ್ಬಲ ಪ್ರದೇಶಗಳಲ್ಲಿ ತಾತ್ಕಾಲಿಕ ದುರಸ್ತಿ ಮಾಡಿದರೆ ಸಾಕಾಗುವುದಿಲ್ಲ. ವೈಜ್ಞಾನಿಕ ಅಧ್ಯಯನದ ಆಧಾರದ ಮೇಲೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ 31 ಬಾಂಗ್ಲಾ ಪ್ರಜೆಗಳ ಗಡಿಪಾರು
ಕುಡಿಯುವ ನೀರಿನ ಪೈಪ್ಲೈನ್ಗೂ ಹಾನಿ:
ಭೂ ಕುಸಿತದಿಂದ ಗ್ರಾಮದ ಕುಡಿಯುವ ನೀರಿನ ಪೈಪ್ಲೈನ್ ಹಲವು ಕಡೆಗಳಲ್ಲಿ ಒಡೆದು ಹೋಗಿದ್ದು, ನೀರಿನ ಕೊರತೆ ಮತ್ತಷ್ಟು ಹೆಚ್ಚಾಗಿದೆ. ಹಾನಿಗೊಳಗಾದ ಪೈಪ್ಲೈನ್ಗಳನ್ನು ಶೀಘ್ರ ದುರಸ್ತಿ ಮಾಡಿ ನೀರು ಪೂರೈಕೆಯನ್ನು ಪುನಃಸ್ಥಾಪಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಂಡ್ಯ | ಮೀಮ್ಸ್ನಲ್ಲಿ ಅತ್ಯಾಧುನಿಕ ಎದೆಹಾಲು ಶೇಖರಣಾ ಘಟಕ ಸ್ಥಾಪನೆ
ಪ್ರವಾಸಿಗರು, ಯಾತ್ರಿಕರಿಗೆ ಎಚ್ಚರಿಕೆ:
ರುದ್ರಪ್ರಯಾಗ ಜಿಲ್ಲಾಧಿಕಾರಿ ವಿಶಾಲ್ ಮಿಶ್ರಾ, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹಾನಿಗೊಳಗಾದ ರಸ್ತೆಗಳನ್ನು ತ್ವರಿತವಾಗಿ ದುರಸ್ತಿ ಮಾಡುವಂತೆ ಸಂಬAಧಿತ ಇಲಾಖೆಗೆ ಸೂಚಿಸಲಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಜಿಲ್ಲಾಡಳಿತ ಪ್ರಯಾಣಿಕರಿಗೆ ಸಲಹೆ ನೀಡಿದ್ದು, ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸೂಚಿಸಿದೆ. ವಿಶೇಷವಾಗಿ ಭೂಕುಸಿತಕ್ಕೆ ಒಳಗಾಗುವ ಗುಡ್ಡ ಪ್ರದೇಶದ ರಸ್ತೆಗಳು ಹಾಗೂ ನೀರು ಉಕ್ಕಿ ಹರಿಯುತ್ತಿರುವ ಪ್ರದೇಶಗಳ ಬಳಿ ಎಚ್ಚರಿಕೆ ವಹಿಸುವಂತೆ ಯಾತ್ರಿಕರು ಮತ್ತು ಪ್ರವಾಸಿಗರಿಗೆ ತಿಳಿಸಲಾಗಿದೆ. ಇದನ್ನೂ ಓದಿ: ನನ್ನೊಂದಿಗೆ ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡೋಕೆ ಯಾರು ತಯಾರಿದ್ದೀರಿ ಬನ್ನಿ: ರಾಯರೆಡ್ಡಿ ಸವಾಲ್
ಮಳೆ ಪೀಡಿತ ಪ್ರದೇಶಗಳಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿರುವ ನಿಯಂತ್ರಣ ಕೊಠಡಿಗಳು ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸುತ್ತಿದ್ದು, ಪೊಲೀಸರು, ಎಸ್ಡಿಆರ್ಎಫ್ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ. ನದಿಗಳು, ಹಳ್ಳಗಳು ಹಾಗೂ ಅಸ್ಥಿರ ಗುಡ್ಡ ಪ್ರದೇಶಗಳ ಸಮೀಪ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಅಗತ್ಯವಿದ್ದಲ್ಲಿ ಸ್ಥಳಾಂತರಿಸುವ ಸೂಚನೆ ನೀಡಿದ ತಕ್ಷಣ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಅಮೆರಿಕ ವಿರುದ್ಧ ಇರಾನ್ ಪ್ರತೀಕಾರ – ಜೋರ್ಡಾನ್, ಬಹ್ರೇನ್ನಲ್ಲಿರೋ ಯುಎಸ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ
