ಡೆಹ್ರಾಡೂನ್: ಪಂಚರಾಜ್ಯ ಚುನಾವಣೆಯಲ್ಲಿ ಉತ್ತರಾಖಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅಂತ ಸಮೀಕ್ಷೆಗಳು ಹೇಳಿತ್ತು. ಆದರೆ ಮತದಾನಕ್ಕೆ ಇನ್ನು ಕೇವಲ 10 ದಿನಗಳು ಬಾಕಿಯಿರುವಾಗ ಉತ್ತರಾಖಂಡ್ ಕಮಲ ಪಾಳಯದಲ್ಲಿ ಕಂಪನ ಉಂಟಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಮಾಡಿರೋ ಆರೋಪದಲ್ಲಿ ಉತ್ತರಾಖಂಡ್ ಬಿಜೆಪಿಯ 33 ಬಂಡಾಯ ನಾಯಕರನ್ನ 6 ವರ್ಷಗಳ ಕಾಲ ಅಮಾನತು ಮಾಡಿದೆ. ಕಾಂಗ್ರೆಸ್ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ 13 ಮಂದಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಇದಕ್ಕೆ ಬಿಜೆಪಿಯಲ್ಲಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ, ಈ 13 ಮಂದಿ ವಿರುದ್ಧ ಬಿಜೆಪಿಯ ಬಂಡಾಯ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.
ಅಮಾನತುಗೊಂಡಿರೋ 33 ಬಂಡಾಯ ನಾಯಕರು ಸ್ವತಂತ್ರ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 15ರಂದು ಉತ್ತರಾಖಂಡ್ನಲ್ಲಿ ಚುನಾವಣೆ ನಡೆಯಲಿದೆ.