Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ, ವಿಚ್ಛೇದನ, ಆಸ್ತಿ.. ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು: ಇಂದಿನಿಂದ ಉತ್ತರಾಖಂಡದಲ್ಲಿ UCC ಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮದುವೆ, ವಿಚ್ಛೇದನ, ಆಸ್ತಿ.. ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು: ಇಂದಿನಿಂದ ಉತ್ತರಾಖಂಡದಲ್ಲಿ UCC ಜಾರಿ

Latest

ಮದುವೆ, ವಿಚ್ಛೇದನ, ಆಸ್ತಿ.. ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು: ಇಂದಿನಿಂದ ಉತ್ತರಾಖಂಡದಲ್ಲಿ UCC ಜಾರಿ

Public TV
Last updated: January 27, 2025 10:13 am
Public TV
Share
2 Min Read
Uniform Civil Code UCC
SHARE

– ಏಕರೂಪದ ನಾಗರಿಕೆ ಸಂಹಿತೆ ಜಾರಿಗೆ ತಂದ ಮೊದಲ ರಾಜ್ಯ
– ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಬಿಜೆಪಿ ಸರ್ಕಾರದಿಂದ ಜಾರಿ

ಡೆಹ್ರಾಡೂನ್‌: ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ (Uniform Civil Code) ಉತ್ತರಾಖಂಡದಲ್ಲಿ (Uttarakhand) ಇಂದಿನಿಂದ ಜಾರಿಗೆ ಬಂದಿದೆ.

ಸ್ವಾತಂತ್ರ್ಯಾನಂತರದಲ್ಲಿ ರಾಜ್ಯವೊಂದರಲ್ಲಿ ಯುಸಿಸಿ ಕಾಯ್ದೆ ಜಾರಿಯಾಗುತ್ತಿರುವುದು ಇದೇ ಮೊದಲು. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆ ಘೋಷಣೆಗಳ ಪೈಕಿ ಒಂದಾದ ಈ ಕಾಯ್ದೆಯನ್ನು ಇದೀಗ ಬಿಜೆಪಿ ಆಡಳಿತದ ರಾಜ್ಯವಾದ ಉತ್ತರಾಖಂಡದಲ್ಲಿ ಜಾರಿ ಮಾಡಲಾಗಿದೆ.

ಸರ್ಕಾರದ ನಿರ್ಧಾರವನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸಮರ್ಥಿಸಿದ್ದು ಏಕರೂಪ ನಾಗರಿಕ ಸಂಹಿತೆಯು ಧರ್ಮ, ಲಿಂಗ, ಜಾತಿ ಅಥವಾ ಸಮುದಾಯದ ಭೇದ ಇಲ್ಲದ ಸಾಮರಸ್ಯದ ಸಮಾಜಕ್ಕೆ ಅಡಿಪಾಯ ಹಾಕುತ್ತದೆ ಎಂದು ಹೇಳಿದ್ದಾರೆ.

uniform civil code 1 1

ಪರಿಶಿಷ್ಟ ಪಂಗಡಗಳು ಮತ್ತು ಕೆಲವು ಸಂರಕ್ಷಿತ ಸಮುದಾಯಗಳನ್ನು ಹೊರತು ಪಡಿಸಿ ರಾಜ್ಯದ ಎಲ್ಲಾ ನಿವಾಸಿಗಳಿಗೆ ಏಕರೂಪದ ನಾಗರಿಕ ಸಂಹಿತೆ ಅನ್ವಯವಾಗುತ್ತದೆ.  ಹೊಸ ಕಾಯ್ದೆ ಜಾರಿಗೊಳಿಸುವ ಸಂಬಂಧ  ರಾಜ್ಯ ಸರ್ಕಾರ ಅಧಿಕಾರಿಗಳಿಗೆ ತರಬೇತಿ ನೀಡಿದೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಿತ್ತು. ರಾಜ್ಯದಲ್ಲಿ ಎರಡನೇ ಬಾರಿಗೆ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕಾಯ್ದೆಯನ್ನು ಇದೀಗ ಜಾರಿಗೆ ತರಲಾಗುತ್ತಿದೆ.

ಏಕರೂಪದ ನಗರಿಕ ಸಂಹಿತೆಯಲ್ಲಿ ಏನಿದೆ?
ಮದುವೆ ಮತ್ತು ವಿಚ್ಛೇದನ: ಈ ಕಾಯಿದೆಯು ಪುರುಷರು ಮತ್ತು ಮಹಿಳೆಯರಿಗೆ (ಕ್ರಮವಾಗಿ 21 ಮತ್ತು 18 ವರ್ಷಗಳು) ಮದುವೆಯ ಕಾನೂನುಬದ್ಧ ವಯಸ್ಸನ್ನು ಪ್ರಮಾಣೀಕರಿಸುತ್ತದೆ ಮತ್ತು ಎಲ್ಲಾ ಧರ್ಮಗಳಲ್ಲಿ ವಿಚ್ಛೇದನಕ್ಕೆ ಏಕರೂಪದ ಆಧಾರಗಳು ಮತ್ತು ಕಾರ್ಯವಿಧಾನಗಳನ್ನು ಕಡ್ಡಾಯಗೊಳಿಸುತ್ತದೆ.

uniform civil code

ಬಹುಪತ್ನಿತ್ವ ನಿಷೇಧ: ಯುಸಿಸಿ ಅನ್ವಯವಾಗುವ ಸಮುದಾಯಗಳಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲಾಗಿದೆ.

ವಿವಾಹ ನೋಂದಣಿ: ಕಾಯ್ದೆ ಜಾರಿಯಾದ ನಂತರ ನಡೆಸುವ ವಿವಾಹಗಳನ್ನು 60 ದಿನಗಳ ಒಳಗೆ ನೋಂದಾಯಿಸಬೇಕು, ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಸೌಲಭ್ಯಗಳು ಲಭ್ಯವಿದೆ.

ಲಿವ್-ಇನ್ ಸಂಬಂಧಗಳು: ಮದುವೆಯಂತೆ ಲಿವ್‌-ಇನ್‌ ಸಂಬಂಧ ನೋಂದಣಿ ಕಡ್ಡಾಯ. ಇದು ಉತ್ತರಾಖಂಡದಲ್ಲಿ ನೆಲೆಸಿರುವ ಅಥವಾ ಅನ್ಯ ರಾಜ್ಯಗಳಲ್ಲಿ ನೆಲೆಸಿರುವ ಉತ್ತರಾಖಂಡ ಮೂಲದವರಿಗೆ ಅನ್ವಯ. ಇದರಡಿ ಇಬ್ಬರ ಹೆಸರು, ವಯಸ್ಸಿನ ಸಾಕ್ಷಿ, ದೇಶ, ಧರ್ಮ, ಹಿಂದಿನ ಸಂಬಂಧ, ಸಂಪರ್ಕ ಸಂಖ್ಯೆ ಕುರಿತ ಮಾಹಿತಿಯನ್ನು ನೀಡಬೇಕು. ಇಂತಹ ಸಂಬಂಧದಿಂದ ಮಗು ಜನಿಸಿದರೆ ಜನನ ಪ್ರಮಾಣ ಪತ್ರ ದೊರೆತ 7 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕಾಗುತ್ತದೆ.

uniform civil code uttarakhand

ಉತ್ತರಾಧಿಕಾರ ಉಯಿಲುಗಳು: ಉಯಿಲು ಬರೆಯುವವರು ತಮ್ಮ ಹಾಗೂ ಉತ್ತರಾಧಿಕಾರಿಯ ಆಧಾರ್‌ ಮಾಹಿತಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಬೇಕು. 2 ಸಾಕ್ಷಿಗಳು ಉಯಿಲು ಪತ್ರವನ್ನು ಓದುವ ವಿಡಿಯೋವನ್ನೂ ಅಪ್‌ಲೋಡ್‌ ಮಾಡಬೇಕಾಗುತ್ತದೆ.

ಯುದ್ಧದಲ್ಲಿ ಭಾಗವಹಿಸಿದ ಸೈನಿಕರು, ವಾಯುಪಡೆಯ ಸಿಬ್ಬಂದಿ ಮತ್ತು ನಾವಿಕರು ವಿಶೇಷ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸವಲತ್ತು ಪಡೆದ ವಿಲ್‌ಗಳನ್ನು ರಚಿಸಲು ಅನುಮತಿ ಇದೆ.

ಗೋವಾದಲ್ಲಿದೆ ಯುಸಿಸಿ: ಸ್ವಾತಂತ್ರ್ಯಾನಂತರ ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾದರೆ ಸ್ವಾತಂತ್ರ್ಯಪೂರ್ವದಲ್ಲಿ ಪೋರ್ಚುಗೀಸ್ ಕಾಲದಲ್ಲಿಯೇ ಗೋವಾದಲ್ಲಿ ಯುಸಿಸಿ ಜಾರಿಯಾಗಿತ್ತು. ಪೋರ್ಚುಗೀಸ್ ಸಿವಿಲ್ ಕೋಡ್-1867ರ ಪ್ರಕಾರ ಪೋರ್ಚುಗೀಸ್ ಆಳ್ವಿಕೆ ವಿಮೋಚನೆಯ ನಂತರ, ಗೋವಾ, ದಮನ್ ಮತ್ತು ದಿಯು ಆಡಳಿತ ಕಾಯಿದೆ-1962ರ ಸೆಕ್ಷನ್ 5(1) ರ ಮೂಲಕ ಈಗಲೂ ಮುಂದುವರೆದಿದೆ.

 

TAGGED:Pushkar Singh DhamiUCCuniform civil codeಉತ್ತರಾಖಂಡಕಾನೂನುಪುಷ್ಕರ್ ಸಿಂಗ್ ಧಾಮಿಯುಸಿಸಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
1 hour ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
1 hour ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
3 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
3 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?