ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್ನ ವಿ.ಡಿ.ಸತೀಶನ್ (V.D.Satheesan) ಸೋಮವಾರ ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.
ಸತೀಶನ್ ಜೊತೆಗೆ ಅವರ ಸಂಪುಟ ಸಹೋದ್ಯೋಗಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ.ಮುರಳೀಧರನ್, ಎ.ಪಿ.ಅನಿಲ್ ಕುಮಾರ್, ಪಿ.ಸಿ.ವಿಷ್ಣುನಾಥ್, ರೋಜಿ ಎಂ ಜಾನ್, ಬಿಂದು ಕೃಷ್ಣ, ಎಂ.ಲಿಜು, ಟಿ ಸಿದ್ದಿಕ್, ಕೆ.ಎ.ತುಳಸಿ ಮತ್ತು ಒ.ಜೆ.ಜನೀಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಕೇರಳ ಸಿಎಂ ಆಗಿ ವಿ.ಡಿ ಸತೀಶನ್, 20 ಸಂಪುಟ ಸಚಿವರಿಂದ ಇಂದು ಪ್ರಮಾಣ ಸ್ವೀಕಾರ
ಕಾಂಗ್ರೆಸ್ ಮಿತ್ರ ಪಕ್ಷಗಳಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಐಯುಎಂಎಲ್ ಐದು ಸಚಿವ ಸ್ಥಾನಗಳನ್ನು ಹೊಂದಿವೆ. ಪಿ.ಕೆ.ಪಿ.ಕೆ.ಕುಂಞಾಲಿ ಕುಟ್ಟಿ, ಕೆ.ಎಂ.ಶಾಜಿ, ವಿ.ಅಬ್ದುಲ್ ಗಫೂರ್, ಎನ್.ಶಂಸುದ್ದೀನ್ ಮತ್ತು ಪಿ.ಕೆ.ಬಶೀರ್ ಸಚಿವ ಸ್ಥಾನ ಪಡೆದಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ವಯನಾಡನ್ನು ಸಂಸತ್ತಿನಲ್ಲಿ ಪ್ರತಿನಿಧಿಸುವ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಇತರರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.
ನಿರ್ಗಮಿತ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ರಾಜೀವ್ ಚಂದ್ರಶೇಖರ್ ಕೂಡ ವೇದಿಕೆಯಲ್ಲಿದ್ದರು. ನೂತನ ಮುಖ್ಯಮಂತ್ರಿ ಅಭಿನಂದಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಎಡಪಕ್ಷ ನೇತೃತ್ವದ ಎಲ್ಡಿಎಫ್ನಿಂದ ಸತತ ಎರಡು ಬಾರಿ ಸೋಲುಗಳ ನಂತರ ಕಾಂಗ್ರೆಸ್ಗೆ ಮರಳಿದ್ದ ಸತೀಶನ್ ಈಗ ಕೇರಳಂ ಸಿಎಂ ಆಗಿದ್ದಾರೆ. ಇದನ್ನೂ ಓದಿ: ಸಿಎಂ ಆಗಿ 8 ವರ್ಷ ಕಂಪ್ಲೀಟ್ – ಮತ್ತೊಂದು ದಾಖಲೆ ಬರೆದ ಸಿದ್ದರಾಮಯ್ಯ

