ಸಾಹೇಬ, ಮುಗಿಲುಪೇಟೆ, ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ರವಿಂಚಂದ್ರನ್ ಪುತ್ರ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಸಂಗೀತಾ ದೀಪಕ್ ಜತೆ ಮನೋರಂಜನ್ ಹಸೆಮಣೆ ಏರಿದ್ದಾರೆ.


ಇದೇ ವೇಳೆ ರವಿಚಂದ್ರನ್ ಅವರ ಆಪ್ತರೆನಿಸಿಕೊಂಡಿರುವ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್, ನಟಿ ಖುಷ್ಬೂ, ಉಮಾಶ್ರೀ, ನಟ ಶರಣ್, ಉಮಾಶ್ರೀ, ಮಾಸ್ಟರ್ ಆನಂದ್, ಗಾಯಕ ಹೇಮಂತ್, ಅಕುಲಗ ಬಾಲಾಜಿ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಈ ವೇಳೆ ಅಭಿಮಾನಿಗಳು ಕೂಡ ನೆಚ್ಚಿನ ನಟನ ಹೊಸ ಬಾಳಿಗೆ ಶುಭಹಾರೈಸಿದ್ದಾರೆ. ಚಿತ್ರರಂಗದಲ್ಲಿ ಕೂಡ ಉತ್ತುಂಗಕ್ಕೆ ಎರಲಿ ಎಂಬುದೇ ಅಭಿಮಾನಿಗಳ ಆಶಯ.



