ಸಿದ್ದರಾಮಯ್ಯರದ್ದು ಎಲುಬಿಲ್ಲದ ನಾಲಿಗೆ: ಸೋಮಣ್ಣ ಕಿಡಿ

Public TV
2 Min Read
somanna siddaramaiah

ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರದ್ದು ಎಲುಬಿಲ್ಲದ ನಾಲಿಗೆ ಎಂದು ಸಚಿವ ವಿ. ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾಜಿ ಆದ ಮೇಲೆ ಅವರ ಭಾಷೆ ಮುಖ್ಯ. ಸಿದ್ದರಾಮಯ್ಯ ಬೈ ಎಲೆಕ್ಷನ್ ಅಲ್ಲಿ ಇದ್ದಾಗ ಸೋಮಣ್ಣ ಪಾತ್ರ ಏನು ಅಂತ ಕೇಳಿ ಅವರನ್ನ ಎಂದು ಕಿಡಿಕಾರಿದರು. ಸಿದ್ದರಾಮಯ್ಯ ಏನಾದರೂ ಮಾತಾಡಲಿ, ನಾನು ಟೀಕೆ ಮಾಡಲ್ಲ. ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಗಾಂಭೀರ್ಯತೆ ಮುಖ್ಯವಾಗಿದ್ದು ಎಂದು ಕಿಡಿಕಾರಿದರು.

siddaramaiah 2

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗೋ ಸಮಯದಲ್ಲಿ ಅರ್ಹತೆ ಇದ್ದವರು ಬಹಳ ಜನ ಇದ್ದರು. ಆದರೆ ಹಣೆ ಬರಹದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು. ದೇವರು ಹಣೆಬರದಲ್ಲಿ ಬರೆದಿದ್ದ ಹೀಗಾಗಿ ಅವರು ಸಿಎಂ ಆದರು ಎಂದು ಟಾಂಗ್ ಕೊಟ್ಟರು. ಬಳಿಕ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ನಾನೇ ಅಂತಾರೆ, ಆದರೆ ನಿವೃತ್ತಿ ಪಡೆಯುತ್ತೇನೆ ಅಂತ ಅವರೇ ಬಹಳ ಸಲ ಹೇಳಿದ್ದಾರೆ ಎಂದು ಸೋಮಣ್ಣ ಹರಿಹಾಯ್ದರು.

Congress flag 2 e1573529275338

ಈ ಹಿಂದೆ ಕೂಡ ಸಿದ್ದರಾಮಯ್ಯ ಅವರ ಹೇಳಿಕೆಗೆ ಸೋಮಣ್ಣ ಕಿಡಿಕಾರಿದ್ದರು. ಭಾರತಕ್ಕೆ ಡೊನಾಲ್ಡ್ ಟ್ರಂಪ್ ಭೇಟಿಯಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸೋಮಣ್ಣ ತಿರುಗೇಟು ನೀಡಿದ್ದರು. ಈ ವಿಚಾರದಲ್ಲಿ ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು ಟ್ರಂಪ್ ಎಲ್ಲಿ, ಸಿದ್ದರಾಮಯ್ಯ ಎಲ್ಲಿ. ಅಮೆರಿಕ ದೇಶ ಎಲ್ಲಿ, ಸಿದ್ದರಾಮಯ್ಯ ಎಲ್ಲಿ. ಸಿದ್ದರಾಮಯ್ಯ ಸಿದ್ದರಾಮಯ್ಯನೇ, ಟ್ರಂಪ್ ಟ್ರಂಪ್ ಅವರೇ, ಮೋದಿ ಮೋದಿಯವರೇ ಎಂದು ಟೀಕೆಗೆ ತಿರುಗೇಟು ನೀಡಿದ್ದರು.

nml somanna

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ, ಚಿಂತನೆಯಿಂದ ಅವರ ರಾಷ್ಟ್ರಕ್ಕೆ ಕೊಡಬೇಕಾದ ದೊಡ್ಡ ಸಂದೇಶ ಕೊಡುತ್ತಾರೆ. ಆದರೆ ಟ್ರಂಪ್ ಏನು ಮಾಡುತ್ತಾರೆ ಅನ್ನೊದಕ್ಕಿಂತ ಅವರು ಹಿರಿಯಣ್ಣ. ನಮ್ಮ ಭಾರತಕ್ಕೆ ಬಂದಿರುವುದು ನಮಗೆ ಸಂತೋಷ ಉಂಟುಮಾಡಿದೆ. ಆದರೆ ಸಿದ್ದರಾಮಯ್ಯ ಎಲ್ಲವನ್ನ ಕಾಮಾಲೆ ಕಣ್ಣಿನಲ್ಲಿ ನೋಡೋದನ್ನ ಬಿಡಬೇಕು ಎಂದು ಸೋಮಣ್ಣ ಅವರು ಮಾತಿನ ಚಾಟಿ ಬೀಸಿದ್ದರು.

ಅಲ್ಲದೇ ತಾವು ದೂರ ದೃಷ್ಟಿಯಲ್ಲಿ ನೋಡಬೇಕು. ರಾಜ್ಯದ 5 ವರ್ಷ ಮುಖ್ಯಮಂತ್ರಿಯಾಗಿದ್ದವರು ನೀವು, ಈ ರೀತಿಯಲ್ಲಿ ಮಾತನಾಡೋದು ಬೇಡ. ನೀವು ಎತ್ತರಕ್ಕೆ ಬೆಳೆದ ವ್ಯಕ್ತಿ ಎಂದು ನಗುಮುಖದಲ್ಲಿಯೇ ಸಿದ್ದರಾಮಯ್ಯರ ವಿರುದ್ಧ ಸೋಮಣ್ಣ ಟಾಂಗ್ ಕೊಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *