Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಅವಧಿಯಲ್ಲಿ ದೇಶ ಸೋತಿತ್ತು – ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗೆದ್ದಿದೆ: ಸುನಿಲ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್ ಅವಧಿಯಲ್ಲಿ ದೇಶ ಸೋತಿತ್ತು – ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗೆದ್ದಿದೆ: ಸುನಿಲ್ ಕುಮಾರ್

Districts

ಕಾಂಗ್ರೆಸ್ ಅವಧಿಯಲ್ಲಿ ದೇಶ ಸೋತಿತ್ತು – ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗೆದ್ದಿದೆ: ಸುನಿಲ್ ಕುಮಾರ್

Public TV
Last updated: August 8, 2022 1:17 pm
Public TV
Share
2 Min Read
SUNILKUMAR MEETING 1
SHARE

ಉಡುಪಿ: ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಟೀಕೆಗೆ ಬಳಸುತ್ತಿದ್ದಾರೆ. ದೇಶ, ರಾಷ್ಟ್ರಧ್ವಜದ ಕುರಿತು ಗೌರವ ಇಲ್ಲದ ಕಾಂಗ್ರೆಸ್‍ಗೆ ಬಿಜೆಪಿ ಸರ್ಕಾರವನ್ನು ಟೀಕೆ ಮಾಡಲು ಯಾವ ನೈತಿಕತೆ ಇದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

SUNILKUMAR MEETING 3

ಅಮೃತ ಮಹೋತ್ಸವ ಆಚರಣೆ ಕುರಿತು ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೀರಪ್ಪ ಮೊಯ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಲು ಅವರಿಂದ ಸಾಧ್ಯವಾಗಿಲ್ಲ. ಅವತ್ತು ರಾಷ್ಟ್ರಧ್ವಜದ ಬಗ್ಗೆ ಗೌರವ ಇಟ್ಟುಕೊಳ್ಳದ ವೀರಪ್ಪ ಮೊಯ್ಲಿ ಇಂದು ಕಾಲ್ನಡಿಗೆ ಜಾಥಾ ಮಾಡುವ ಮೂಲಕ ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – FIR ದಾಖಲಿಸಿ ಅಧಿಕೃತವಾಗಿ ತನಿಖೆ ಆರಂಭಿಸಿದ ಎನ್ಐಎ

SUNILKUMAR MEETING 2

ಕಾಂಗ್ರೆಸ್ ಅವಧಿಯಲ್ಲಿ ದೇಶ ಸೋತಿತ್ತು. ಕಾಂಗ್ರೆಸ್ ಅವಧಿಯಲ್ಲಿ ಸಾಲು ಸೋಲು 1947, 1969, 1973ರ ಯುದ್ಧದಲ್ಲಿ ನಮ್ಮ ದೇಶ ಸೋಲು ಕಂಡಿತ್ತು. ಆಗ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿತ್ತು. ಅಂದು ಸಾಕಷ್ಟು ಭೂ ಭಾಗವನ್ನು ಶತ್ರು ರಾಷ್ಟ್ರಗಳಿಗೆ ಬಿಟ್ಟುಕೊಡಲಾಯಿತು. ದೇಶಕ್ಕೆ, ರಾಷ್ಟ್ರಧ್ವಜವನ್ನು ಗೌರವದಿಂದ ನೋಡಲು ಅರಿಯದ ಕಾಂಗ್ರೆಸ್ ಈಗ ಹೊಸ ನಾಟಕ ಆರಂಭಿಸಿದೆ. ಕಾರ್ಗಿಲ್ ಯುದ್ಧದಲ್ಲಿ ಒಂದಿಂಚು ಜಾಗವನ್ನೂ ನಾವು ಬಿಟ್ಟುಕೊಟ್ಟಿಲ್ಲ. ಆಗ ಬಿಜೆಪಿ ಅಧಿಕಾರದಲ್ಲಿತ್ತು ಎನ್ನುವುದು ಮರೆಯಬಾರದು ಎಂದರು.

ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಸರ್ವಾಧಿಕಾರದ ಬಗ್ಗೆ ಮಾತನಾಡುತ್ತದೆ. ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಗ್ಗೆ ಸಾಕ್ಷಿ ಕೇಳಿದ ಕಾಂಗ್ರೆಸ್ ತನ್ನ ಅಧಿಕಾರವಧಿಯಲ್ಲಿ ಸಂವಿಧಾನವನ್ನು ಅನುಕೂಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಿ ಅಗೌರವ ತೋರಿದೆ. ಕಾರ್ಕಳದಲ್ಲಿ ಬಿಜೆಪಿಯನ್ನು ಸೋಲಿಸುವುದಾಗಿ ವೀರಪ್ಪ ಮೊಯ್ಲಿ ಶಪಥ ಮಾಡಿದ್ದಾರೆ ಎಂಬುವುದನ್ನು ಮಾಧ್ಯಮದಲ್ಲಿ ನೋಡಿದ್ದೆ. 6 ಬಾರಿ ಕಾರ್ಕಳದಿಂದ ಗೆದ್ದು, ಶಾಸಕ ಮುಖ್ಯಮಂತ್ರಿಯಾದ ಮೊಯ್ಲಿ ಅವರು ಕಾರ್ಕಳದ ಅಭಿವೃದ್ಧಿ ಬಗ್ಗೆ ಅಂದು ಶಪಥ ಮಾಡಬೇಕಿತ್ತು ಎಂದರು.

SUNILKUMAR MEETING

ಕಾರ್ಕಳದ ಅಭಿವೃದ್ದಿ ಓಟ ನೋಡಲಾರದೇ, ಕಾರ್ಕಳ ಉತ್ಸವಕ್ಕೆ, ಎಣ್ಣೆಹೊಳೆ ಯೋಜನೆಗೆ ಹೀಗೆ ಪ್ರತಿಯೊಂದು ಕಾರ್ಯಕ್ಕೂ ಕಾಂಗ್ರೆಸ್‍ನಿಂದ ವಿರೋಧ, ಟೀಕೆ ವ್ಯಕ್ತವಾಗುತ್ತಿದೆ. ಕಾರ್ಕಳ ಅಭಿವೃದ್ಧಿಯಾಗಬೇಕು ಎಂಬ ಕಲ್ಪನೆ ಇಟ್ಟುಕೊಂಡು ಕಳೆದೊಂದು ವರ್ಷದಿಂದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಯಾವ ವೇದಿಕೆಯನ್ನೂ ರಾಜಕಾರಣಕ್ಕಾಗಿ ಅಥವಾ ಟೀಕೆಗಾಗಿ ಬಳಸಿಕೊಂಡಿಲ್ಲ. ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನೂ ಕಾಂಗ್ರೆಸ್ ಟೀಕೆಗೆ ಬಳಸುತ್ತಿರುವುದು ನೋಡಿ ಸುಮ್ಮನಿರೋಕೆ ಸಾಧ್ಯವಾಗಿಲ್ಲ. 100 ಸುಳ್ಳು ಹೇಳಿ ಸತ್ಯ ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. 40 ವರ್ಷ ಕಾರ್ಕಳದಲ್ಲಿ ಆಳ್ವಿಕೆ ನಡೆಸಿದ ಕಾಂಗ್ರೆಸ್ ಕಾರ್ಕಳದ ಬಗ್ಗೆ ಯೋಚನೆಯೇ ಮಾಡಿಲ್ಲ ಎಂದು ಸುನಿಲ್ ಕುಮಾರ್ ಹೇಳಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ, ಸ್ವಾತಂತ್ರೋತ್ಸವ ಅದ್ಧೂರಿಯಾಗಿ ಆಚರಿಸುತ್ತೇವೆ: ಜಮೀರ್

ಸಭೆಯಲ್ಲಿ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bjpcongressudupiV SunilKumarಕಾಂಗ್ರೆಸ್ಬಿಜೆಪಿಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories
Dhruva sarja
ರಂಗನತಿಟ್ಟು ಪಕ್ಷಿಧಾಮದ ಕಾರ್ಮಿಕರಿಗೆ ಧ್ರುವ ಸಹಾಯಹಸ್ತ – ರಿಯಲ್‌ ಹೀರೋ ಅಂದ್ರು ಫ್ಯಾನ್ಸ್‌
Cinema Latest Sandalwood Top Stories

You Might Also Like

DK Shivakumar 4
Bengaluru City

Video | ದೆಹಲಿಗೆ ಬಂದಿಳಿದ ಡಿಕೆಶಿ – ಸೋನಿಯಾ ಗಾಂಧಿ ಭೇಟಿ ಬಗ್ಗೆ ಗುಟ್ಟು ಬಿಟ್ಟುಕೊಡದ ಡಿಸಿಎಂ

Public TV
By Public TV
7 hours ago
New Year
Bengaluru City

ನ್ಯೂ ಇಯರ್‌ ಪಾರ್ಟಿಗೆ ಪಬ್‌ ಬುಕ್‌ ಮಾಡೋ ಮುನ್ನ ಎಚ್ಚರ – ಏಕೆ ಗೊತ್ತೇ?

Public TV
By Public TV
7 hours ago
Lionel Messi 2 1
Latest

ರಾಹುಲ್‌ ಗಾಂಧಿಗೆ ತನ್ನ ಜೆರ್ಸಿ ಗಿಫ್ಟ್‌ – ಸಿಎಂ ರೆಡ್ಡಿ ಜೊತೆ ಫುಟ್ಬಾಲ್ ಆಡಿದ ಮೆಸ್ಸಿ

Public TV
By Public TV
7 hours ago
Lionel Messi
Latest

1 ಗಂಟೆಯ ಕಾರ್ಯಕ್ರಮ, 22 ನಿಮಿಷಕ್ಕೆ ಮೆಸ್ಸಿ ಹೊರಟಿದ್ದೇಕೆ? – ಇಲ್ಲಿದೆ ಅಸಲಿ ಕಾರಣ

Public TV
By Public TV
8 hours ago
MB Patil
Bengaluru City

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂಬಿ ಪಾಟೀಲ್

Public TV
By Public TV
8 hours ago
UDF vs BJP
Latest

ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್ – ಗ್ರಾಪಂ, ಬ್ಲಾಕ್‌, ಪುರಸಭೆಯಲ್ಲಿ ಯುಡಿಎಫ್‌ ಮೈತ್ರಿಕೂಟಕ್ಕೆ ದೊಡ್ಡ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?