ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ – ತನಿಖೆಗೆ ಸಿಬಿಐ ಬಳಿಕ ED ಎಂಟ್ರಿ!

Public TV
2 Min Read
CBI and ED 2

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ (Valmiki Corporation Corruption Scam) ಪ್ರಕರಣಕ್ಕೆ ಈಗ ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ (ED) ಎಂಟ್ರಿ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

94 cr Valmiki corpn scam Union Bank files plaint with CBI suspends 3 officials

ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದ್ದು, ಯೂನಿಯನ್ ಬ್ಯಾಂಕ್ (Union Bank Of India) ನೀಡಿದ್ದ ದೂರು ಹಾಗೂ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಸಿಬಿಐನಿಂದ ಮಾಹಿತಿ ಪಡೆದುಕೊಂಡಿದೆ. ಜೊತೆಗೆ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಬಗ್ಗೆಯೂ ಮಾಹಿತಿ ಪಡೆದಿದ್ದು, ಮುಂದಿನ ವಾರದಲ್ಲೇ ಇಡಿ ಇನ್ನಷ್ಟು ತನಿಖೆಯೊಂದಿಗೆ ಎಫ್‌ಐಆರ್‌ ದಾಖಲಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ʻಪಬ್ಲಿಕ್‌ ಟಿವಿʼಗೆ (Public TV) ಮಾಹಿತಿ ನೀಡಿವೆ. ಇದನ್ನೂ ಓದಿ: Exclusive: ನಮ್ಮ ನಾಯಕರು ಸೂಚಿಸಿದ್ರೆ ರಾಜೀನಾಮೆ ಕೊಡಲು ಸಿದ್ಧ- ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್

Rs 87 Crore Maharshi Valmiki Scheduled Tribe Development Corporation What is the Scam 1

ಈಗಾಗಲೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Karnataka Maharshi Valmiki Scheduled Tribe Development Corporation Ltd) ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಖಾತೆಗಳಲ್ಲಿನ ವಂಚನೆಯ ವಹಿವಾಟಿನ ಬಗ್ಗೆ ಬ್ಯಾಂಕ್ ಅರಿವು ಹೊಂದಿದೆ. ಅಕ್ರಮಗಳು ಬೆಳಕಿಗೆ ಬಂದಾಗ ಬ್ಯಾಂಕ್ ತಕ್ಷಣವೇ ಪ್ರಶ್ನಾರ್ಹ ವಹಿವಾಟುಗಳನ್ನು ವಂಚನೆ ಎಂದು ಘೋಷಿಸಿದೆ. ಸಂಪೂರ್ಣ ತನಿಖೆ ಮತ್ತು ಅಪರಾಧಿಗಳ ಪತ್ತೆಗಾಗಿ ಮೇ 30 ರಂದು ಕೇಂದ್ರೀಯ ತನಿಖಾ ದಳಕ್ಕೆ (CBI) ದೂರು ನೀಡಿದ್ದೇವೆ. ಮುಂದಿನ ವಿಚಾರಣೆಗಾಗಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ತ್ವರಿತವಾಗಿ ಪರಿಹರಿಸಲು ನಾವು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಅಂತಹ ಘಟನೆಗಳನ್ನು ತಡೆಯಲು ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ಅಧಿಕಾರಿಗಳು, ಬ್ಯಾಂಕ್‌ ಉದ್ಯೋಗಿ ವಿರುದ್ಧ ಎಫ್‌ಐಆರ್‌

ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

Share This Article