Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ

Bengaluru City

Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ

Public TV
Last updated: July 18, 2024 4:34 pm
Public TV
Share
3 Min Read
NAGENDRA
SHARE

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam) ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನ ಮತ್ತೆ 5 ದಿನ ಇಡಿ ಕಸ್ಟಡಿಗೆ (ED Custody) ನೀಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ (Representative Court) ಆದೇಶಿಸಿದೆ.

BN Nagendra 03

6 ದಿನಗಳ ಇ.ಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಗುರುವಾರ (ಜು.18) ವೈದ್ಯಕೀಯ ಪರೀಕ್ಷೆ (Medical Test) ಬಳಿಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್, ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದ್ರೆ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ಕೋರ್ಟ್ ಆದೇಶಿಸಿತು. 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ `ಸುಪಾರಿ’ ಗಲಾಟೆ: ಬಿಜೆಪಿ ಶಾಸಕರ ಮಾತಿಗೆ ಕಾಂಗ್ರೆಸ್ ಕೆಂಡಾಮಂಡಲ!

BN Nagendra 02

ಕೋರ್ಟ್‌ನಲ್ಲಿ ವಾದ-ಪ್ರತಿವಾದ ಹೇಗಿತ್ತು?
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಇದೇ ಜುಲೈ 12ರಂದು ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. 6 ದಿನಗಳ ಕಸ್ಟಡಿ ಅಂತ್ಯಗೊಂಡ ಬೆನ್ನಲ್ಲೇ ನಾಗೇಂದ್ರ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಇ.ಡಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್ ವಾದಿಸಿ, 8 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಇದಕ್ಕೆ ಆಕ್ಷೇಪಣೆ ಎತ್ತಿದ ಆರೋಪಿ ಪರ ವಕೀಲ ಶ್ಯಾಂ ಸುಂದರ್, ಈಗಾಗಲೇ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ. ಇದೂವರೆಗೂ ಸಂಪೂರ್ಣ ರಿಮ್ಯಾಂಡ್ ಕಾಪಿ ಸಿಕ್ಕಿಲ್ಲ. ಈಗ ಹಾಜರುಪಡಿಸುತ್ತಿದ್ದಾರೆ. ಇಡಿ ಅಧಿಕಾರಿಗಳು ಪೊಲೀಸರ ಅಲ್ಲ. ಅವರು ದಾಖಲು ಮಾಡೋದು ಇಸಿಐಆರ್, ಎಫ್‌ಐಆರ್ ಅಲ್ಲ. ಅವರಿಗೆ ಬಂಧನ ಮಾಡುವ ಅಧಿಕಾರವೇ ಇಲ್ಲ. ಯಾವ ಅಧಿಕಾರದಲ್ಲಿ ಕಸ್ಟಡಿಗೆ ಕೇಳುತ್ತಾ ಇದ್ದಾರೆ? ಯಾವ ವಿಚಾರ ಇಟ್ಟುಕೊಂಡು ಕೇಳಲಾಗ್ತಿದೆ? ಎಂದು ವಾದಿಸಿದರು. ಇದನ್ನೂ ಓದಿ: NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್

ಇದಕ್ಕೆ ಪ್ರತಿವಾದ ಮಂಡಿಸಿದ ಪ್ರಸನ್ನಕುಮಾರ್, ಮತ್ತೆ ರಿಮ್ಯಾಂಡ್ ಕೇಳುತ್ತಾ ಇದ್ದಾರೆ. ನನಗೆ ಕಾಪಿ ಈಗ ಕೊಡ್ತಾ ಇದ್ದಾರೆ ಸರಿ ಅಲ್ಲ. ನೀವು ಹೊಸ ಅಡ್ವಕೇಟ್ ಅಲ್ಲ. ಕಾನೂನಿನ ಪ್ರಕಾರ ಮೊದಲೇ ರಿಮ್ಯಾಂಡ್ ಕಾಪಿ ಕೊಡಬೇಕು ಅಂತ ಇಲ್ಲ. ನಾವು ನ್ಯಾಯಾಲಯಕ್ಕೆ ಕೊಡಬೇಕು. ನ್ಯಾಯಾಲಯದ ಗಮನಕ್ಕೆ ತಂದ ಮೇಲೆಯೇ ಕಸ್ಟಡಿಗೆ ಪಡೆಯೋದು. ಡಿಫೆನ್ಸ್ ಅಡ್ವೊಕೇಟ್‌ಗೆ ಮಾಹಿತಿ ನೀಡಲು ಸಾಧ್ಯವಿಲ್ಲ. ಇದೆಲ್ಲ ಅವರಿಗೆ ಗೊತ್ತಿದೆ ಎಂದು ಕುಟುಕಿದರು. ಇದನ್ನೂ ಓದಿ: ನಟ ದರ್ಶನ್ & ಗ್ಯಾಂಗ್‌ಗೆ ಆ.1ರ ವರೆಗೆ ಜೈಲೇ ಗತಿ – ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಅಲ್ಲದೇ ತನಿಖೆಗೆ ನಾಗೇಂದ್ರ ಸಹಕರಿಸುತ್ತಿಲ್ಲ. ಹೆಚ್ಚಿನ ವಿಚಾರಣೆ ಮುಂದುವರಿಸುವ ಅಗತ್ಯ ಇದೆ. ಪಿಎಂಎಲ್‌ಎ ಸೆಕ್ಷನ್ 65 ಅಡಿ ಆರೋಪಿ ಹೇಳಿಕೆ ದಾಖಲಿಸಲು ಅಧಿಕಾರ ಇದೆ ಎಂದರು. ಈ ವೇಳೆ ಶ್ಯಾಂ ಸುಂದರ್ ಅವರು, ನಾಗೇಂದ್ರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿ, ಇಡಿ ಅಧಿಕಾರಿಗಳು ಅಲ್ಲಿಯೇ ವಿಚಾರಣೆ ಮಾಡಬಹುದು. ಇಲ್ಲಿದ್ದರೇ ಅವರ ಮೇಲೆ ಒತ್ತಡ ಹೇರಲಾಗುತ್ತೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ, ಈಗಾಗಲೇ ಹೇಳಿಕೆ ದಾಖಲು ಮಾಡಿ ಆಗಿದೆ ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಮತ್ತೆ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು. ಇದನ್ನೂ ಓದಿ: ಮುಡಾ, ವಾಲ್ಮೀಕಿ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – ಕಟ್ಟೆಯೊಡೆದ ಆಕ್ರೋಶ!

TAGGED:bengalurucourtEDED custodyNagendraValmiki Corporation Scamಕಾಂಗ್ರೆಸ್ಜಾರಿ ನಿರ್ದೇಶನಾಲಯನಾಗೇಂದ್ರಬಿ.ಎನ್‌ ನಾಗೇಂದ್ರವಾಲ್ಮೀಕಿ ನಿಗಮ ಭ್ರಷ್ಟಾಚಾರ ಪ್ರಕರಣವಾಲ್ಮೀಕಿ ನಿಗಮ ಹಗರಣ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Snehamayi Krishna 2
Bengaluru City

ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

Public TV
By Public TV
4 hours ago
T20 World Cup 2026 Australia Oman
Cricket

T20 WC 2026 | ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಅಬ್ಬರಿಸಿದ ಆಸೀಸ್‌ – ಓಮನ್‌ ವಿರುದ್ಧ 9 ವಿಕೆಟ್‌ಗಳ ಜಯ

Public TV
By Public TV
5 hours ago
Siddaramaiah 10
Bengaluru City

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Public TV
By Public TV
5 hours ago
Bird Flu 3
Districts

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

Public TV
By Public TV
5 hours ago
Narendra Modi great friend of mine Donald Trump Announces 26 percentage Discounted Reciprocal Tariff On India
Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

Public TV
By Public TV
6 hours ago
rottweiler dog
Bengaluru City

ಬೆಂಗಳೂರು | 4 ವರ್ಷದ ಬಾಲಕನ ಮೇಲೆ ರಾಟ್ ವೀಲರ್ ದಾಳಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?