Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಾಲ್ಮೀಕಿ ನಿಗಮದ ಹಗರಣ – ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

Public TV
Last updated: June 6, 2024 8:01 pm
Public TV
Share
3 Min Read
Vijayendra
SHARE

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ (Valmiki Development Corporation Scam) ಸಿಎಂ ಸಿದ್ದರಾಮಯ್ಯ (Siddaramaiah), ಸಚಿವ ನಾಗೇಂದ್ರ (B.Nagendra) ರಾಜೀನಾಮೆ ಕೊಡಬೇಕು. ಅಷ್ಟೇ ಅಲ್ಲದೇ ಭ್ರಷ್ಟ ಸರ್ಕಾರವನ್ನು ವಜಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಶಾಸಕರನ್ನು ಒಳಗೊಂಡ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.

ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ದೊಡ್ಡ ಹಗರಣ ನಡೆದಿದೆ. ವಾಲ್ಮೀಕಿ ನಿಗಮದ ಹಣ ಹೈದರಾಬಾದ್‍ನಲ್ಲಿ ಫೇಕ್ ಅಕೌಂಟ್ ತೆಗೆದು ವರ್ಗಾವಣೆ ಮಾಡಲಾಗಿದೆ. ಇದೊಂದು ದೊಡ್ಡ ಅಕ್ರಮ. ಹಣಕಾಸು ಇಲಾಖೆ ಅನುಮತಿ ಇಲ್ಲದೆ ಇದು ಆಗಲು ಸಾಧ್ಯವಿಲ್ಲ. ಸಿಎಂ ಗಮನಕ್ಕೆ ಬಾರದೇ ಈ ಹಗರಣ ನಡೆದಿಲ್ಲ. ಹೀಗಾಗಿ ಸಿಎಂ ರಾಜೀನಾಮೆ ಪಡೆಯಬೇಕು ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದರು. ಇದನ್ನೂ ಓದಿ: ನಾನು ನಿರಪರಾಧಿ, ಸ್ವಯಂಪ್ರೇರಿತನಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ: ನಾಗೇಂದ್ರ

ಸಚಿವರ ರಾಜೀನಾಮೆ ಮಾತ್ರ ಅಲ್ಲ ಸಿಎಂ ರಾಜೀನಾಮೆ ಕೊಡಬೇಕು. ರಾಜ್ಯದಲ್ಲಿ ಇಂತಹ ದೊಡ್ಡ ಹಗರಣ ನಡೆದಿಲ್ಲ. ಸಿಎಂ, ಸಚಿವರು ಇಬ್ಬರ ರಾಜೀನಾಮೆ ಪಡೆಯಬೇಕು ಎಂದು ರಾಜ್ಯಪಾಲನ್ನು ಒತ್ತಾಯಿಸಿದ್ದೇವೆ ಎಂದರು.

R ASHOK REACTION

ಬಿಜೆಪಿಯವರು ಪ್ರತಿಭಟನೆ ಮಾಡಿಕೊಳ್ಳಲಿ ಎಂಬ ಸಿಎಂ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ಸಿಎಂ ಹೀಗೆ ಉಡಾಫೆ ಮಾತಾಡಿ ಹೀಗೆ ಆಗಿದೆ. ಗ್ಯಾರಂಟಿ 20 ಸ್ಥಾನ ಗೆಲ್ತೀವಿ ಎಂದು ಹೇಳಿ ಜನ ಈ ಮಟ್ಟಕ್ಕೆ ನಿಮ್ಮನ್ನ ತಂದಿದ್ದಾರೆ. ಎಸ್‍ಟಿ ಸಮುದಾಯಕ್ಕೆ ಮೀಸಲಿದ್ದ ಹಣ ಅಕ್ರಮವಾಗಿದೆ. ಈ ಬಗ್ಗೆ ಸಿಎಂ ಹಾರಿಕೆ ಉತ್ತರ ಕೊಡೋದು ಸರಿಯಲ್ಲ. ಅವರು ಆನೆ ನಡೆದಿದ್ದೇ ದಾರಿ ಅಂದುಕೊಳ್ಳಬಾರದು. ಇದನ್ನ ನಾವು ಇಲ್ಲಿಗೆ ಬಿಡೋದಿಲ್ಲ. ರಾಜ್ಯಾದ್ಯಂತ ದೊಡ್ಡ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ವಾಲ್ಮೀಕಿ ನಿಗಮದ ಬ್ರಹ್ಮಾಂಡದ ಭ್ರಷ್ಟಾಚಾರವಾಗಿದೆ. ಎಸ್‍ಟಿ ಸಮುದಾಯಕ್ಕೆ ಮೀಸಲಿದ್ದ ಹಣ ಇವತ್ತು ಸಿದ್ದರಾಮಯ್ಯ ಜೇಬಿಗೆ ಹೋಗಿದೆ. ಇಂತಹ ನೀಚ ಸರ್ಕಾರ ಯಾವತ್ತು ಬಂದಿಲ್ಲ. ಎಸ್‍ಟಿ ಜನಾಂಗಕ್ಕೆ ಸೇರಬೇಕಾದ ಹಣ ನುಂಗುತ್ತಾರೆ ಎಂದರೆ ಇಂತಹ ಸರ್ಕಾರ ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ. ಚುನಾವಣೆಗಾಗಿ ಈ ಹಣ ಹೈದರಾಬಾದ್‍ಗೆ ಹೋಗಿದೆ. ಇದೆಲ್ಲ ಪ್ರೀ ಪ್ಲ್ಯಾನ್. ರಾಹುಲ್ ಗಾಂಧಿಯಿಂದಲೇ ಈ ಹಗರಣ ಆಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಮೂಗಿನ ಅಡಿ ಈ ಅಕ್ರಮ ನಡೆದಿದೆ. ನಿಮ್ಮ ಅನುಮತಿ ಇಲ್ಲದೆ ಹಣ ಹೇಗೆ ಹೋಯ್ತು? ಈ ಅಕ್ರಮದಿಂದ ನಾಗೇಂದ್ರಗೆ ಮಾತ್ರ ಕಮಿಷನ್ ಹೋಗಿಲ್ಲ. ನಾಗೇಂದ್ರ 20% ಸಿದ್ದರಾಮಯ್ಯಗೆ 80% ಶೇರ್ ಹೋಗಿದೆ. ಕಾಂಗ್ರೆಸ್ ಒಂದು ವರ್ಷದ ಸಾಧನೆ ಗ್ಯಾರಂಟಿ ಲೂಟಿ, ದೇಶವೇ ಮೆಚ್ಚುವ ಲೂಟಿ ಗ್ಯಾರಂಟಿ ಇವರದ್ದು. ಪಿಕ್ ಪಾಕೆಟ್ ಮಾಡೋದು ಇವರ ಸಾಧನೆ. ಕಾಂಗ್ರೆಸ್ ಎಂದರೆ ಲೂಟಿಕೋರರ ಪಾರ್ಟಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಪ್ರಕರಣ ಮುಚ್ಚಿ ಹಾಕಲು ಸಿಐಡಿಗೆ ಕೊಟ್ಟಿದ್ರು. ಸಿಬಿಐಗೆ ಬ್ಯಾಂಕ್‍ಗೆ ಪತ್ರ ಬರೆದ ಕೂಡಲೇ ಎಸ್‍ಐಟಿ ರಚನೆ ಮಾಡಿದ್ದಾರೆ. ಎಸ್‍ಐಟಿಗೆ ಕೊಟ್ಟರೆ ಸಿಬಿಐಗೆ ಕೇಸ್ ತೆಗೆದುಕೊಳ್ಳಲು ಆಗೊಲ್ಲ ಎಂಬ ತಂತ್ರ ಮಾಡಿದ್ರು. ಈಗಾಗಲೇ ಸಿಬಿಐ ಎಫ್‍ಐಆರ್ ಹಾಕಿದೆ. ಕರ್ನಾಟಕ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಿಬಿಐಗೆ ಒಪ್ಪಿಸಿ. ಇಲ್ಲದೆ ಹೋದರೆ ಇದರಲ್ಲಿ ನಿಮ್ಮ ಪಾತ್ರ ಇದೆ ಎಂದಾಗುತ್ತದೆ. ಇದು ಟಕಾ ಟಕ್ ಎಟಿಎಂ ಸರ್ಕಾರ ಇದು ಅಂತ ವಾಗ್ದಾಳಿ ನಡೆಸಿದ್ದಾರೆ.

ಇದೊಂದೆ ನಿಗಮ ಅಲ್ಲ, ಅನೇಕ ನಿಗಮಗಳಲ್ಲಿ ಹಣ ವರ್ಗಾವಣೆ ಆಗಿದೆ. ಎಲ್ಲೆಲ್ಲಿಗೆ ಹಣ ಸಾಗಿಸಿದ್ದಾರೆ ತನಿಖೆ ಆಗಬೇಕು. ಹೈದರಾಬಾದ್ ಕಂಪನಿಗಳಿಗೆ ಹೇಗೆ ಹಣ ಹೋಯ್ತು? ಇದಕ್ಕೆ ಸಿಎಂ ಉತ್ತರ ಕೊಡಬೇಕು. ಹೈದರಾಬಾದ್ ನಕಲಿ ಅಕೌಂಟ್‍ಗೆ ಹೋಗಲು ಸಚಿವರ ಪಿಎ ಕಾರಣ ಎಂದು ಹೇಳ್ತಿದ್ದಾರೆ. ಮಾನ ಮರ್ಯಾದೆ ಇದ್ದರೆ ಸಿಎಂ ರಾಜೀನಾಮೆ ಕೊಡಬೇಕು. ಈ ವಿಚಾರವಾಗಿ ಮುಂದೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಾಗೂ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಇದಕ್ಕೂ ಬಗ್ಗದೇ ಹೋದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ; ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭರ್ಜರಿ ಗೆಲುವು

TAGGED:b nagendraResignationsiddaramaiahValmiki Development Corporation Scam
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
14 minutes ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
27 minutes ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
31 minutes ago
voters list election
Latest

ಬಿಹಾರದ 56 ಲಕ್ಷ ಜನರನ್ನು ವೋಟರ್‌ ಲಿಸ್ಟ್‌ನಿಂದ ತೆಗೆದ ಚುನಾವಣಾ ಆಯೋಗ

Public TV
By Public TV
46 minutes ago
Koppal Bank manager
Districts

ಕೊಪ್ಪಳ | ಕನ್ನಡ ಭಾಷಾಂತರ ಮಾಡೋಕೆ ಸಿಬ್ಬಂದಿ ಕರೆದ ಬ್ಯಾಂಕ್ ಮ್ಯಾನೇಜರ್ – ವಿಡಿಯೋ ವೈರಲ್

Public TV
By Public TV
51 minutes ago
TIRUPATI 1
Latest

ತಿರುಪತಿಯಲ್ಲಿ ಭಕ್ತರ ಶೀಘ್ರ ದರ್ಶನಕ್ಕಾಗಿ `ಶ್ರೀವಾಣಿ ದರ್ಶನ’ ಟಿಕೆಟ್ ಸೇವೆ ಆರಂಭ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?