Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿದ್ದರಾಮಯ್ಯ

Bengaluru City

ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿದ್ದರಾಮಯ್ಯ

Public TV
Last updated: October 17, 2024 4:04 pm
Public TV
Share
2 Min Read
siddaramaiah 9
SHARE

ಬೆಂಗಳೂರು: ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ ಎಂದು ಮಹರ್ಷಿ ವಾಲ್ಮೀಕಿ ಬಗೆಗಿನ ಸುಳ್ಳು ಮಾಹಿತಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಐದು ಮಹನೀಯರಿಗೆ ಸಿಎಂ ವಾಲ್ಮೀಕಿ ಪ್ರಶಸ್ತಿ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ (Valmiki Jayanti) ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಅಂತಾ ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ಜಯಂತಿ; ಮಹರ್ಷಿಗಳ ಪ್ರತಿಮೆಗೆ ಸಿಎಂ ಪುಷ್ಪಾರ್ಚನೆ

valmiki jayanti award

ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದರು. ರಾಮನ‌ ಮಕ್ಕಳಾದ ಲವ-ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.

SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡ್ತೀನಿ ಅಂತಾ ತಿಳಿಸಿದರು. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ SCSP/TSP ಕಾಯ್ದೆಯನ್ನು ಜಾರಿಗೆ ತಂದಿಲ್ಲ. ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಅಂತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ

ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ. ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ‌ ಜನತೆ ಅರ್ಥಮಾಡಿಕೊಳ್ಳಬೇಕು ಎಂದರು.

ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಅಂತಾ ತಿಳಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ, ರಾಜಣ್ಣ, ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿ ಹಲವರು ಭಾಗಿಯಾಗಿದ್ದರು.

TAGGED:bengalurusiddaramaiahValmiki Jayantiಬೆಂಗಳೂರುವಾಲ್ಮೀಕಿ ಜಯಂತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

udupi krishna mutt kannada board 1
Latest

ಉಡುಪಿ ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ – ಏನಿರುತ್ತೆ, ಏನಿರಲ್ಲ?

Public TV
By Public TV
14 minutes ago
Ayatollah Arafi
Latest

ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ ಈಗ ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ

Public TV
By Public TV
40 minutes ago
kagia
Latest

ಕೈಗಾ 5, 6ನೇ ಅಣು ಘಟಕ ಪ್ರಥಮ ಕಾಂಕ್ರೀಟಿಕರಣಕ್ಕೆ ಚಾಲನೆ – ಏನಿದರ ವಿಶೇಷ?

Public TV
By Public TV
1 hour ago
Why did Muslim countries join hands with America in the fight against Iran
Latest

ಇರಾನ್‌ ವಿರುದ್ಧ ಹೋರಾಟದಲ್ಲಿ ಮುಸ್ಲಿಮ್‌ ದೇಶಗಳು ಅಮೆರಿಕದೊಂದಿಗೆ ಕೈ ಜೋಡಿಸಿದ್ದು ಯಾಕೆ?

Public TV
By Public TV
1 hour ago
Nagpur Explosives Manufacturing Company blast
Crime

ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
1 hour ago
Madikeri
Districts

ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?