ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬಹುಕೋಟಿ ಹಗರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರ (Nagendra) ಎಂದು ಆರೋಪ ಹೊರಿಸಿ ಜಾರಿ ನಿರ್ದೇಶನಾಲಯ (ED) ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಇಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇಡಿ ಉಲ್ಲೇಖಿಸಿದೆ.ಇದನ್ನೂ ಓದಿ: ಶುಭಾ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್: ನಟಿ ಹೇಳೋದೇನು?
ಚಾರ್ಜ್ಶೀಟ್ನಲ್ಲಿ ಏನಿದೆ?
ಹೈದರಾಬಾದ್ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ನಾಗೇಂದ್ರ, ದದ್ದಲ್ ಹೆಸರು ಇರಲಿಲ್ಲ:
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ (SIT) ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್ನಲ್ಲಿ ಆಗಸ್ಟ್ ತಿಂಗಳಿನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ (Nagendra), ಬಸನಗೌಡ ದದ್ದಲ್ (Basanagouda Daddal) ಅವರ ಹೆಸರನ್ನು ಉಲ್ಲೇಖಿಸಿರಲಿಲ್ಲ.
ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು.