Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 9 ವರ್ಷದ ನಂತರ ಮೈಸೂರು ಅರಸರ ಕಾಲದ ಜಲಾಶಯಕ್ಕೆ‌ ಹರಿದು ಬಂತು 101 ಅಡಿ ನೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | 9 ವರ್ಷದ ನಂತರ ಮೈಸೂರು ಅರಸರ ಕಾಲದ ಜಲಾಶಯಕ್ಕೆ‌ ಹರಿದು ಬಂತು 101 ಅಡಿ ನೀರು

Chitradurga

9 ವರ್ಷದ ನಂತರ ಮೈಸೂರು ಅರಸರ ಕಾಲದ ಜಲಾಶಯಕ್ಕೆ‌ ಹರಿದು ಬಂತು 101 ಅಡಿ ನೀರು

Public TV
Last updated: December 23, 2019 6:40 pm
Public TV
Share
3 Min Read
CTD DAM copy
SHARE

– ಬರದನಾಡಿನ ಜೀವನಾಡಿ ವಾಣಿವಿಲಾಸ ಸಾಗರ ಭರ್ತಿ

ಚಿತ್ರದುರ್ಗ: ಮೈಸೂರು ಅರಸರ ಕಾಲದಲ್ಲಿ ನಿರ್ಮಾಣವಾದ ರಾಜ್ಯದ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರೋ ಜಿಲ್ಲೆಯ, ರೈತರ ಏಕೈಕ ಜೀವನಾಡಿ ಅನಿಸಿರುವ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ ಕಳೆದ ಆರು ವರ್ಷಗಳಿಂದ ಮಳೆಯಿಲ್ಲದೇ ಡೆಡ್ ಸ್ಟೋರೇಜ್ ಹಂತಕ್ಕೆ ತಲುಪಿತ್ತು. ಆದರೆ ಸತತ ಒಂಬತ್ತು ವರ್ಷಗಳ ನಂತರ ಇದೇ ಮೊದಲ ಬಾರಿಗೆ 101 ಅಡಿಗೂ ಹೆಚ್ಚು ನೀರಿನ ಮಟ್ಟವನ್ನು ತಲುಪಿದೆ.

ಸುಮಾರು 112 ವರ್ಷಗಳ ಇತಿಹಾಸ ಇರುವ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ 57ನೇ ಬಾರಿ 100 ಅಡಿ ದಾಟಿದೆ. ಆ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ರೈತರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದಾರೆ. ಮೈಸೂರು ಅರಸರ ಕಾಲದಲ್ಲಿ ನಿರ್ಮಾಣವಾಗಿರೋ ಈ ಜಲಾಶಯಕ್ಕೆ 2010ರಲ್ಲಿ 112.75 ಅಡಿ, 2011ರಲ್ಲಿ 106.05 ಅಡಿ ನೀರು ಬಂದಿತ್ತು. ಅದು ಬಿಟ್ಟರೆ ಯಾವುದೇ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬಂದಿರಲಿಲ್ಲ. ಆದರೆ ಈ ವರ್ಷ 101.4 ಅಡಿ ನೀರು ಹರಿದು ಬಂದಿದೆ.

CTD DAM 1

ಕಳೆದ ಮೂರು ತಿಂಗಳ ಹಿಂದೆ ವಿವಿ ಸಾಗರದ ಜಲಾಶಯದ ನೀರಿನ ಮಟ್ಟ 61 ಅಡಿಗೆ ಕುಸಿದಿತ್ತು. ಚಿತ್ರದುರ್ಗ ಜಿಲ್ಲೆಯಾದ್ಯಂತ ನೀರಿನ ಬವಣೆ ಶುರುವಾಗಿತ್ತು. ಆದರೆ ಚಿಕ್ಕಮಗಳೂರು ಭಾಗದಲ್ಲಿ ಕಳೆದ ತಿಂಗಳು ಸುರಿದ ಮಹಾ ಮಳೆಯಿಂದಾಗಿ ಸುಮಾರು 9 ಟಿಎಂಸಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ 2 ಟಿಎಂಸಿ ನೀರಿನೊಂದಿಗೆ 101.4 ಅಡಿಯಾಗಿದ್ದು, ಸುಮಾರು 11 ಟಿಎಂಸಿ ಜಲಾಶಯದಲ್ಲಿ ಸಂಗ್ರಹವಾಗಿದೆ.

1911ರಲ್ಲಿ ಮೊದಲ ಬಾರಿಗೆ 109.66 ಅಡಿ ನೀರು ಸಂಗ್ರಹವಾಗಿತ್ತು. ತದನಂತರ 1933 ರಲ್ಲಿ 135.25 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾದಿಂದ ಪ್ರತಿದಿನ 450 ರಿಂದ 550 ಕ್ಯೂಸೆಕ್ಸ್ ನೀರು ಸಂಗ್ರಹವಾಗುತ್ತದೆ. ಈ ನೀರು ಮಾರ್ಚ್ ಅಂತ್ಯದವರಿಗೂ ಭದ್ರಾ ನೀರು ವಿವಿ ಸಾಗರಕ್ಕೆ ಹರಿದು ಬರುತ್ತಿದೆ.

CTD DAM 2

ನಾಲ್ವಡಿ ಕೃಷ್ಣರಾಜ ಒಡೆಯರ ಅವಧಿಯಲ್ಲಿ ನಿರ್ಮಾಣ:
ವಾಣಿ ವಿಲಾಸ ಜಲಾಶಯವನ್ನು ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ 1898 ರಿಂದ 1907 ರಲ್ಲಿ ನಿರ್ಮಾಣ ಮಾಡಲಾಗಿದೆ. ಅಣೆಕಟ್ಟು ಈಗ ಶತಮಾನ ದಾಟಿದೆ. ಮೈಸೂರು ಅರಸರ ಕಾಲದಲ್ಲಿ ನಿರ್ಮಿಸಿದ ಈ ಜಲಾಶಯವು ಹಿರಿಯೂರು ತಾಲೂಕಿನ ವಾಣಿವಿಲಾಪುರ ಹತ್ತಿರ ಮಾರಿಕಣಿವೆ ಎಂಬ ಪ್ರದೇಶದಲ್ಲಿದ್ದು, ಈ ಜಲಾಶಯವನ್ನು ವೇದಾವತಿ ನದಿಗೆ ಅಡ್ಡಲಾಗಿ ಅರಸರ ತಾಯಿ ಕೆಂಪನಂಜಮ್ಮಣ್ಣಿ ನೆನಪಿಗೆ ನಿರ್ಮಿಸಿದ್ದಾರೆ.

1897 ರಲ್ಲಿ ಪ್ರಾರಂಭವಾದ ಕಾಮಗಾರಿ 10 ವರ್ಷದಲ್ಲಿ ಸುಮಾರು 45 ಲಕ್ಷ ವೆಚ್ಚದಲ್ಲಿ ಕಾಮಗಾರಿ ಮುಗಿಸಿ ಜಲಾಶಯವನ್ನು ನಿರ್ಮಿಸಲಾಗಿದೆ. ಈ ಜಲಾಶಯ ಚಿತ್ರದುರ್ಗ ಭಾಗದ ಜನರಿಗೆ ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗೆ ಹೆಚ್ಚು ಸಹಕಾರಿಯಾಗಿದೆ. ಈ ಜಲಾಶಯದ ಒಟ್ಟು ಎತ್ತರ 43.28 ಮೀಟರ್ (142 ಅಡಿ), ಉದ್ದ 405.50. ಮೀಟರ್, ಜಲಾವೃತ ಪ್ರದೇಶ 5374. ಚದರ ಕಿ.ಮೀ, ಡ್ಯಾಂನಲ್ಲಿ 850.30 (30 ಟಿಎಂಸಿ) ನೀರು ಸಂಗ್ರಹವಾಗುತ್ತದೆ.

CTD DAM 3

ಹಿರಿಯೂರಿನ ಜೀವನಾಡಿ ವಿವಿ ಸಾಗರ ಡ್ಯಾಂ:
ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಹೊಂದಾದ ಹಿರಿಯೂರಿನ ವಿವಿ ಸಾಗರ ಬರಪೀತ ಪ್ರದೇಶಗಳಿಗೆ ನೀರು ಉಣಿಸುವ ಜಲಾಶಯವಾಗಿದೆ. ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ ಡಿಆರ್‌ಡಿಓಗೆ ಕುಡಿಯವ ನೀರು ಪೂರೈಸಲಾಗುತ್ತಿದೆ. ಈ ಹಿಂದೆ ಕೃಷಿ ಚಟುವಟಿಕೆಗಳಿಗೆ ವಿವಿ ಸಾಗರದ ನೀರಿನಿಂದ ಕಬ್ಬು, ಭತ್ತ, ರಾಗಿ, ಹತ್ತಿ, ತೆಂಗು, ಅಡಿಕೆ, ಬಾಳೆ ಮತ್ತಿತರರ ಬೆಳೆಗಳನ್ನು ಬೆಳೆಯುತ್ತಿದ್ದರಿಂದ ಹಿರಿಯೂರು ಮಲೆನಾಡಿನಂತೆ ಕಂಗೊಳಿಸುತಿತ್ತು. ಈಗ ಹಿರಿಯೂರು ಬರದನಾಡಗಿದ್ದು, ವಾಣಿವಿಲಾಸ ಸಾಗರಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರ್ತಿರೋದು ರೈತರಲ್ಲಿ ಉಳುಮೆ ಮಾಡುವ ಉತ್ಸಾಹ ಹೆಚ್ಚಿಸಿದೆ.

TAGGED:ChitradurgafarmersmysuruPublic TVVani Vilasa Sagara damwaterಅರಸರುಚಿತ್ರದುರ್ಗನೀರುಪಬ್ಲಿಕ್ ಟಿವಿಮೈಸೂರುರೈತರುವಾಣಿವಿಲಾಸ ಸಾಗರ ಜಲಾಶಯ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Uday Bhanu Chib Arrest
Latest

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Public TV
By Public TV
16 minutes ago
CJ Roy 2
Bengaluru City

ಸಿ.ಜೆ.ರಾಯ್ ಕೇಸ್ – ಆತ್ಮಹತ್ಯೆ ಹಿಂದಿನ ಕಾರಣ ಮೇಲ್ನೋಟಕ್ಕೆ ರಿವೀಲ್

Public TV
By Public TV
57 minutes ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
1 hour ago
Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
2 hours ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
2 hours ago
school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?