ಮೈಸೂರಿನಿಂದ ಜೀವಂತ ಹೃದಯ ಸೇರಿ ವಿವಿಧ ಅಂಗಾಂಗಗಳು ರವಾನೆ

Public TV
1 Min Read
mys organ donate collage copy

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಿಂದ ಮತ್ತೊಂದು ಹೃದಯ ಸೇರಿ ವಿವಿಧ ಅಂಗಾಂಗಗಳನ್ನು ಬೆಂಗಳೂರಿಗೆ ರವಾನಿಸಲಾಗಿದೆ.

ಧರ್ಮ ಎಸ್.ಎ (28) ಪಿರಿಯಾಪಟ್ಟಣ ತಾಲೂಕು ಸೂಳೇಕೋಟೆ ಗ್ರಾಮದ ನಿವಾಸಿಯಾಗಿದ್ದು, ರಸ್ತೆ ಅಪಘಾತದಿಂದ ಗಾಯಗೊಂಡು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಧರ್ಮ ತಲೆಗೆ ಪೆಟ್ಟು ಬಿದ್ದು ಕೋಮಾಗೆ ಹೋಗಿದ್ದರು. ಹೀಗಾಗಿ ಬದುಕುಳಿಯುವ ಸಾಧ್ಯತೆ ಕಡಿಮೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ.

mys organ donate collage 1 copy

ಮೈಸೂರಿನ ನಾರಾಯಣ ಹೃದಯಾಲಯದ ವೈದ್ಯರು ಅಪೋಲೋ ಆಸ್ಪತ್ರೆಯಲ್ಲಿ ಧರ್ಮ ಅವರ ಅಪರೇಷನ್ ಮಾಡಿದ್ದಾರೆ. ಸದ್ಯ ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಧರ್ಮ ಅಂಗಾಂಗವನ್ನು ರವಾನಿಸಲಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಮೂರು ಹಂತದಲ್ಲಿ ಅಂಗಾಂಗ ರವಾನೆ ಆಗಿದೆ. ಧರ್ಮ ಅವರ ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ, ಶ್ವಾಸಕೋಶವನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ, ಕಿಡ್ನಿಯನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ನೀಡಲಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಅಂಗಾಂಗಳು ರವಾನಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *