Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ವಿವಿಧ ಯೋಜನೆ – ರಾಜ್ಯಪಾಲರಿಂದ ಫಲಾನುಭವಿಗಳೊಂದಿಗೆ ಸಂವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರದ ವಿವಿಧ ಯೋಜನೆ – ರಾಜ್ಯಪಾಲರಿಂದ ಫಲಾನುಭವಿಗಳೊಂದಿಗೆ ಸಂವಾದ

Districts

ಸರ್ಕಾರದ ವಿವಿಧ ಯೋಜನೆ – ರಾಜ್ಯಪಾಲರಿಂದ ಫಲಾನುಭವಿಗಳೊಂದಿಗೆ ಸಂವಾದ

Public TV
Last updated: July 1, 2022 9:50 pm
Public TV
Share
3 Min Read
Thawar Chand Gehlot Madikeri 2
SHARE

ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ಸಂವಾದ ನಡೆಸಿದರು.

ನಗರದ ಹೋಟೆಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ಸ್ವಾಗತಿಸಿ, ಸರ್ಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಫಲಾನುಭವಿ ಮಲ್ಲಮ್ಮ ಅವರು ಹೂ ವ್ಯಾಪಾರ ಮಾಡುತ್ತಿದ್ದು, ನಗರಸಭೆ ವತಿಯಿಂದ 2.70 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಟ್ಟಿರುವುದರಿಂದ ಬದುಕು ಕಟ್ಟಿಕೊಳ್ಳಲು ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.

Thawar Chand Gehlot Madikeri

ಆ್ಯರಿಸ್ ಅವರು ಮಾತನಾಡಿ, ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆಯಡಿ ನಗರಸಭೆ ವತಿಯಿಂದ 10 ಸಾವಿರ ರೂ. ಸಹಾಯಧನ ಕಲ್ಪಿಸಿದ್ದರು, ಇದನ್ನು ಪಾವತಿಸಿದ ನಂತರ 20 ಸಾವಿರ ರೂ. ಸಹಾಯಧನ ಕಲ್ಪಿಸಿದರು. 20 ಸಾವಿರ ರೂ. ಪಾವತಿಸಿದ ನಂತರ 50 ಸಾವಿರ ರೂ. ಮಂಜೂರಾಗಿದೆ. ಪಾಸ್ಟ್ ಫುಡ್ ಸ್ವ-ಉದ್ಯೋಗ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪಿ.ಕೆ ರಂಗಪ್ಪ ಮಾತನಾಡಿ, ನಗರಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ನಾನು ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶದಿಂದ ಉನ್ನತ ಶಿಕ್ಷಣ ಕೊಡಿಸಿದೆ. ಮಗಳು ಕೇಂದ್ರ ನಾಗರಿಕ ಸೇವೆ ತರಬೇತಿ ಪಡೆಯುತ್ತಿದ್ದಾಳೆ. ಇದಕ್ಕಾಗಿ ನಗರಸಭೆಯಿಂದ 1.5 ಲಕ್ಷ ರೂ. ಪ್ರೋತ್ಸಾಹಧನ ಕಲ್ಪಿಸಿದ್ದಾರೆ. ಮಗಳು ಮತ್ತು ಮಗ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ರಾಜ್ಯಪಾಲರ ಭೇಟಿ

thavarchand gehlot

ನಂಜುಂಡ ಅವರು ಮಾತನಾಡಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಗುರುತಿನ ಚೀಟಿ ದೊರೆತಿದೆ. ಪಾರ್ಶ್ವವಾಯು, ಮಧುಮೇಹ, ರಕ್ತದೊತ್ತಡ ಮತ್ತಿತರ ಕಾಯಿಲೆಗಳಿದ್ದು, ಗುರುತಿನ ಚೀಟಿ ನೀಡಿರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ತಪಾಸಣೆ ಮಾಡಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಫಲಾನುಭವಿ ಯಶೋಧ ಮಾತನಾಡಿ, 2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡೆ. ಆ ಸಂದರ್ಭದಲ್ಲಿ ಪರಿಹಾರ ಕೇಂದ್ರದಲ್ಲಿ ಇದ್ದೆ. ಸರ್ಕಾರ ವಾಸಕ್ಕೆ ಕರ್ಣಂಗೇರಿಯಲ್ಲಿ ಮನೆ ಕಲ್ಪಿಸಿದ್ದು, ಬದುಕು ದೂಡಲು ಸಹಕಾರಿಯಾಗಿದೆ ಎಂದು ಸ್ಮರಿಸಿದರು. ಇದನ್ನೂ ಓದಿ: ಭಾರೀ ಮಳೆಗೆ ಪಂಜ-ಉಳ್ಯ ಜಲಾವೃತ – ಆತಂಕದಲ್ಲಿ ಕೃಷಿಕರು

thavarchand gehlot 1

ಚಿರಾಗ್ ಅವರು ಮಾತನಾಡಿ, ಎಂಬಿಬಿಎಸ್ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಿಂದುಳಿದ ವರ್ಗಗಳ ಇಲಾಖೆಯಿಂದ ಶಿಷ್ಯವೇತನ ದೊರೆಯುತ್ತಿರುವುದರಿಂದ ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಿದೆ ಎಂದು ಹೇಳಿದರು.

ಹೆಚ್.ಎಸ್ ಮೋಹನ್ ಮಾತನಾಡಿ, ಪೈಂಟಿಂಗ್ ಕೆಲಸ ಮಾಡುತ್ತಿದ್ದು, ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ಲಭ್ಯವಾಗಿರುವುದರಿಂದ ಶಿಷ್ಯವೇತನ ದೊರೆತಿದೆ ಎಂದು ಹೇಳಿದರು. ಧರಣಿ ಮಾತನಾಡಿ, ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹಧನ ದೊರೆತಿದೆ ಎಂದರು. ಶರತ್ ಕುಮಾರ್ ಮಾತನಾಡಿ, ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಭಿತ್ತನೆ ಬೀಜ ಹಾಗೂ ಇತರೆ ಕೃಷಿಗಾಗಿ 9 ಕಂತಿನಲ್ಲಿ 18 ಸಾವಿರ ರೂ. ಪಾವತಿ ಆಗಿರುವುದರಿಂದ ಕೃಷಿ ಚಟುವಟಿಕೆ ಕೈಗೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.

ಮೀನಾ ಕುಮಾರಿ ಮಾತನಾಡಿ, ಸಂಪಾಜೆಯಲ್ಲಿ ಸಂಜೀವಿನಿ ಒಕ್ಟೂಟದ ಬಿಪಿಎಲ್ ಕುಟುಂಬದ ಸದಸ್ಯರಿಗೆ 10 ಸಾವಿರ ರೂ. ಸಹಾಯಧನ ಕಲ್ಪಿಸಲಾಗುತ್ತದೆ ಎಂದರು. ಸ್ವ-ಸಹಾಯ ಗುಂಪಿನಲ್ಲಿ 58 ಮಂದಿ ಸದಸ್ಯರಿದ್ದು, ಸರ್ಕಾರದಿಂದ ಒಂದಲ್ಲ ಒಂದು ಸೌಲಭ್ಯಗಳು ದೊರೆಯುತ್ತಿವೆ ಎಂದರು.

ನವೀನ್ ಅವರು ಮಾತನಾಡಿ, ಪ್ರವಾಸೋದ್ಯಮ ಇಲಾಖೆಯಿಂದ 3 ಲಕ್ಷ ರೂ. ಸಹಾಯಧನದಡಿ ಟ್ಯಾಕ್ಸಿ ದೊರೆತಿದ್ದು, ಇದರಿಂದ ಜೀವನ ಸಾಗಿಸಲು ಸಹಕಾರಿಯಾಗಿದೆ ಎಂದರು. ಮೋಹನ್ ಕುಮಾರ್ ಅವರು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಲವು ಸೌಲಭ್ಯಗಳು ದೊರೆಯುತ್ತಿದೆ ಎಂದರು. ರಶ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ವ-ಉದ್ಯೋಗ ಕೈಗೊಳ್ಳಲು 69 ಸಾವಿರ ರೂ. ಸಹಾಯಧನ ದೊರೆತಿದೆ ಎಂದು ಸಂತಸಪಟ್ಟರು. ಉದ್ಯೋಗಿನಿ ಯೋಜನೆಯಡಿ ಸ್ವ-ಉದ್ಯೋಗ ಕೈಗೊಳ್ಳಲು ಸಹಾಯಧನ ದೊರೆತಿದೆ ಎಂದರು.

ಸಂವಾದ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಕಾರ್ಯಕ್ರಮಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಉತ್ತಮ ಜೀವನ ಕಟ್ಟಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ವಸತಿ, ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ, ಸ್ವಚ್ಛ ಭಾರತ ಅಭಿಯಾನ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ, ಪಿಂಚಣಿ, ಪುನರ್ವಸತಿ ಯೋಜನೆ, ಶಿಷ್ಯವೇತನ, ಮುದ್ರಾ ಯೋಜನೆ, ಮುಖ್ಯಮಂತ್ರಿಯವರ ಅಮೃತ ಯೋಜನೆ, ಉನ್ನತ ಶಿಕ್ಷಣದಡಿ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹಧನ, ಉದ್ಯೋಗಿನಿ ಹೀಗೆ ಸರ್ಕಾರದ ವಿವಿಧ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ಸಂವಾದ ನಡೆಸಿಕೊಟ್ಟರು.

ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಅವರು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಬಲವರ್ಧನ ಕಾರ್ಯಕ್ರಮ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಇಲಾಖೆ ಅಧಿಕಾರಿಗಳು ಸಂವಾದದಲ್ಲಿ ಉಪಸ್ಥಿತರಿದ್ದರು.

Live Tv

TAGGED:governmentgovernormadikerithawar chand gehlotಥಾವರ್ ಚಂದ್ ಗೆಹ್ಲೋಟ್ಫಲಾನುಭವಿಗಳುಮಡಿಕೇರಿಯೋಜನೆರಾಜ್ಯಪಾಲಸರ್ಕಾರ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

LPG
Bengaluru City

ಬೆಂಗಳೂರಲ್ಲಿ LPG ದಾಸ್ತಾನು ಕೊರತೆ ಇಲ್ಲ: ಡಿಸಿ ಸ್ಪಷ್ಟನೆ

Public TV
By Public TV
7 minutes ago
HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
12 minutes ago
Parappana Agrahara Jail
Belgaum

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Public TV
By Public TV
20 minutes ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
50 minutes ago
Hardeep Singh Puri
Latest

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಸ್ಪಷ್ಟನೆ

Public TV
By Public TV
58 minutes ago
Rahul Gandhi vd savarkar
Court

ಸಾವರ್ಕರ್ ಕುರಿತು ಹೇಳಿಕೆ – ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?