Bigg Boss: ಸೋಲು ಗೆಲುವು ಸಮನಾಗಿ ಸ್ವೀಕರಿಸಬೇಕು- ವರ್ತೂರು ಸಂತೋಷ್‌

Public TV
2 Min Read
varthur santhosh 1 3

ಬಿಗ್ ಬಾಸ್ ಕನ್ನಡದ (Bigg Boss Kannada 10) ಈ ಸೀಸನ್‌ನಲ್ಲಿ ಅತ್ಯಂತ ಮುಗ್ಧತೆಯಿಂದಲೇ ಜನರ ಮನಸ್ಸು ಗೆದ್ದಿರುವ ಸ್ಪರ್ಧಿ ವರ್ತೂರು ಸಂತೋಷ್. ಕೆಲವು ಕಹಿ ಘಟನೆಗಳು ನಡೆದಾಗಲೂ, ಮತ್ತೆ ಅದರ ನೋವಿನಿಂದ ಹೊರಬಂದು ಆಡಿದ ವರ್ತೂರು (Varthur Santhosh) ಅವರು 4ನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಜಿಯೋ ಸಿನಿಮಾ ನಡೆಸಿದ ಸಂದರ್ಶನದಲ್ಲಿ ಅವರು ಆಡಿದ ಮಾತುಗಳು ಹೀಗಿವೆ. ಇದನ್ನೂ ಓದಿ:ಪ್ರತಾಪ್ ಮತ್ತು ನನ್ನದು ಅಕ್ಕ ತಮ್ಮ ಸಂಬಂಧ: ಸಂದರ್ಶನದಲ್ಲಿ ಸಂಗೀತಾ ಮಾತು

varthur santhosh 1 2

ನಮಸ್ಕಾರ ನನ್ನ ಹೆಸರು ಸಂತೋಷ್ ಕುಮಾರ್. ವರ್ತೂರು ಸಂತೋಷ್ ಮತ್ತು ಹಳ್ಳಿಕಾರ್ ಸಂತೋಷ್ ಅಂತ ಕರೀತಾರೆ. ನನಗಂತೂ ರಿಯಾಲಿಟಿ ಶೋಗಳ ಬಗ್ಗೆ ಅಷ್ಟು ಗೊತ್ತಿಲ್ಲ. ಆದರೆ ಬಿಗ್ ಬಾಸ್ ಅಂದರೆ ವ್ಯಕ್ತಿತ್ವದ ಆಟ. ಅಂದರೆ ನಮ್ಮ ವ್ಯಕ್ತಿತ್ವವನ್ನು ನಾವು ಹೇಗೆ ತೋರಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ. ಒಂದು ರಿಯಾಲಿಟಿ ಶೋ ಕಂಪ್ಲೀಟ್ ಆಗುವುದು ಡೇ ಒಂದರಿಂದ ಲಾಸ್ಟ್ ವೀಕ್‌ವರೆಗೆ ಇರುವುದು. ವೀಕೆಂಡ್‌ನಲ್ಲಿ ಎಲಿಮಿನೇಟ್ ಆಗುವುದು, ಮಿಡ್ ವೀಕ್ ಎಲಿಮಿನೇಟ್ ಆಗುವುದೆಲ್ಲ ಇನ್ನೊಂದು ರೀತಿ. ಆದರೆ ಇಡೀ ಸೀಸನ್ ಕಂಪ್ಲೀಟ್ ಮಾಡುವುದು ಬೆರಳೆಣಿಕೆಯಷ್ಟು ಸ್ಪರ್ಧಿಗಳು. ಅವರಲ್ಲಿ ನಾನು ಅವರಲ್ಲಿ ಒಬ್ಬನಾಗಿದ್ದೇನೆ.

varthur santhosh 1 1

ಸೋಲು- ಗೆಲುವು ಎರಡನ್ನೂ ಒಂದೇ ರೀತಿ ತಗೊಬೇಕು. ಒಬ್ಬರು ಸೋತಾಗಲೇ ಗೆಲ್ಲಬೇಕು ಅನ್ನೋ ಛಲ ಬಂದಿರೋದು. ನಾನು ಈ ಸೀಸನ್‌ನ ಗೆಲ್ಲದೇ ಇರಬೋದು. ಆದರೆ ಕರ್ನಾಟಕದ ಪ್ರತಿಯೊಬ್ಬರ ಮನೆಮಗನಾಗಿ ಮನಸ್ಸು ಗೆದ್ದಿದ್ದೇನೆ. ಅದರ ಬಗ್ಗೆ ಖುಷಿಯಿದೆ. ನಾನು ಜನರಿಂದ ಬೆಳೆದವನು, ಜನರಿಗೋಸ್ಕರ ಜನರ ಜೊತೆಗೇ ಇರೋನು.

varthur santhosh 2

ನಾನು ಈ ಬಿಗ್ ಬಾಸ್ ಮನೆಯಲ್ಲಿ, ಏನಾದ್ರೂ ಹೊರಗಡೆ ತೆಗೆದುಕೊಂಡು ಹೋಗ್ತಿದೀನಿ ಅಂದ್ರೆ ಅದು ಫ್ರೆಂಡ್‌ಶಿಪ್. ಎಲ್ಲ ಸ್ನೇಹಿತರಿಂದಲೂ ಅದನ್ನು ತೆಗೆದುಕೊಂಡು ಹೋಗುತ್ತಿದ್ದೇನೆ. ಆದರೆ ತುಕಾಲಿ ಸಂತೋಷ್ ಅವರ ಕಡೆಯಿಂದ ಒಂದು ಸಹೋದರ ಸ್ನೇಹವನ್ನು ಜೊತೆಗೆ ತೆಗೆದುಕೊಂಡು ಹೋಗುತ್ತಿದ್ದೇನೆ. ಯಾಕೆಂದರೆ ನನ್ನ ನಗು, ದುಃಖ ಎಲ್ಲವನ್ನೂ ಅವರ ಜೊತೆಗೆ ಹಂಚಿಕೊಂಡಿದ್ದೀನಿ. ಅದಕ್ಕೆ ವಿಶೇಷ ಸ್ಥಾನವಿದೆ. ಮನೆಯ ಸದಸ್ಯರು, ಸುದೀಪಣ್ಣ ಅಷ್ಟೇ ಏಕೆ, ಬಿಗ್ ಬಾಸ್ ಕೂಡ ನಮ್ಮ ಸ್ನೇಹದ ಮೇಲೆ ಯಾರ ಕಣ್ಣೂ ಬೀಳದೆ ಇರಲಿ ಎಂದು ಹಾರೈಸಿದರು. ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿ ಭೇಟಿ ಮಾಡಿದ ಕನ್ನಡ ನಟ ಅನೀಶ್

varthur santhosh 4

ನನ್ನ ಫೇವರೇಟ್ ಮೊಮೆಂಟ್ಸ್ ಬಿನ್‌ಬ್ಯಾಗ್‌ದು. ಅಲ್ಲಿ ಕೂತು ನಾವು ಆಡದೇ ಇರುವ ಮಾತುಗಳಿಲ್ಲ. ಮಾಡದೆ ಇರುವ ತಂತ್ರಗಳಿಲ್ಲ. ಹಾಗಾಗಿ ಬಿನ್‌ಬ್ಯಾಗ್ ಅನುಭವ ಅದ್ಭುತವಾದದ್ದು. ಜಿಯೋ ಸಿನಿಮಾ ಫನ್‌ಫ್ರೈಡೆ ಟಾಸ್ಕ್‌ಗಳಲ್ಲಿ ಲಗೋರಿ ಆಟ ನನಗೆ ತುಂಬ ಇಷ್ಟವಾಯ್ತು. ಎಲ್ಲರೂ ಬೇರೆ ಬೇರೆ ಹಿನ್ನೆಲೆಯವರು ಬಂದವರು, ಎರಡು ತಂಡಗಳಾಗಿ ಆಡಿದ್ದು ನನಗೆ ಸಾಕಷ್ಟು ಖುಷಿ ಕೊಡ್ತು.

ಒಂದು ಅರ್ಧಮರ್ಧ ಶಿಲೆಯನ್ನು ತಂದು ಬಿಗ್ ಬಾಸ್ ಮನೆಯಲ್ಲಿ ಬಿಡುತ್ತಾರೆ. ಬಿಗ್ ಬಾಸ್ ವೇದಿಕೆ ಅವರನ್ನು ಪೂರ್ತಿ ಶಿಲ್ಪವಾಗಿ ಕೆತ್ತಿ ಹೊರಗೆ ಕಳಿಸುತ್ತಾರೆ. ಅವರಲ್ಲಿ ಕೆಲವರು ಆಚೆ ಹೋಗಿ ಒಡೆದು ಹೋಗಿರುವುದೂ ಇರುತ್ತದೆ. ಕೆಲವು ಅವರವರ ಸ್ಥಾನ ಪಡೆದುಕೊಳ್ಳುತ್ತವೆ. ಬಿಗ್ ಬಾಸ್ ವೇದಿಕೆ ಯಾರೇ ಬಂದಿದ್ದರೂ ಕೃತಜ್ಞತೆ ಇಟ್ಕೋಬೇಕು. ಯಾಕೆಂದರೆ ಒಂದು ತುತ್ತು ಅನ್ನ ತಿಂದರೂ ಅದರ ಋಣ ನಮ್ಮ ಮೇಲೆ ಇರುತ್ತದೆ. ಹಾಗಾಗಿ ಬಿಗ್‌ ಬಾಸ್ ಧ್ವನಿಗೆ ನಾನು ಚಿರಋಣಿಯಾಗಿರುತ್ತೇನೆ.

Share This Article