Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

Public TV
Last updated: June 22, 2019 8:18 pm
Public TV
Share
3 Min Read
LINGAYATA PRESS MEET 22 APP
SHARE

ಬೆಂಗಳೂರು: ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇಳಿಬಂದಿದೆ. ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿಸುತ್ತಿರುವ ಬೆನ್ನಲ್ಲೇ ನಿಗಮಕ್ಕೆ ಲಿಂಗಾಯತ ಎಂಬ ಹೆಸರನ್ನು ಮಾತ್ರ ಬಳಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

ಬಸವ ಸಮಿತಿಯ ಅರಿವಿನ ಮನೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಲಿಂಗಾಯತ ಸ್ವಾಮೀಜಿಗಳು, ಸರ್ಕಾರದ ನಿರ್ಧಾರವನ್ನು ಜಾಗತಿಕ ಲಿಂಗಾಯತ ಮಹಾಸಭಾದ ಸ್ವಾಗತಿಸುತ್ತದೆ. ಆದರೆ, ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ. ಅಲ್ಲದೆ, ಪ್ರತ್ಯೇಕ ಧರ್ಮ ಮತ್ತು ಹಿಂದುಳಿದ ವರ್ಗದ ವಿಚಾರ ಬೇರೆ. ಹೀಗಾಗಿ ಧರ್ಮದ ಹೋರಾಟ ನಿರಂತರವಾಗಿ ನಡೆಯುತ್ತದೆ. ಲಿಂಗಾಯತ ಅಸ್ಮಿತೆಗಾಗಿ ಹಾಗೂ ಸ್ವಾತಂತ್ರ್ಯ ಧರ್ಮಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‍ಗೆ ಹೋಗಲು ಸಿದ್ಧರಿದ್ದೇವೆ ಎಂದು ಒಕ್ಕೂರಲಿನಿಂದ ತಿಳಿಸಿದ್ದಾರೆ.

Lingayat Bidar e1561214279795
ಸುದ್ದಿಗೋಷ್ಠಿಯಲ್ಲಿ ಗದಗನ ಡಂಬಳ ಮಠದ ಶ್ರೀ ಸಿದ್ದರಾಮ ಸಾಮೀಜಿ, ಬಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ ದೇವರು, ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಮುಂಡರಗಿ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ, ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಮಾತೋಶ್ರಿ ಗಂಗಾಮಾತೆ, ವಿಜಯ ಮಹಾಂತೇಶ್ವರ ಮಠದ ಗುರು ಮಹಾಂತ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಿ ಕಾಂಗ್ರಸ್‍ನ ಕೆಲ ಲಿಂಗಾಯತ ನಾಯಕರ ನಿಲುವನ್ನು ಖಂಡಿಸಿದ್ದಾರೆ.

ಗದಗ ಡಂಬಳ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ ಮಾತನಾಡಿ, ವಿರಶೈವ ಲಿಂಗಾಯತ ನಿಗಮ ಮಂಡಳಿ ಸ್ಥಾಪಿಸುವ ಕುರಿತು ಕಾಂಗ್ರೆಸ್ ನಾಯಕರು ಸಭೆ ಮಾಡಿದ್ದು, ಇದಕ್ಕೆ ನಮ್ಮ ತಕರಾರಿಲ್ಲ. ಅದರೆ, ವೀರಶೈವ ಲಿಂಗಾಯತ ಎಂದು ಎಲ್ಲೂ ಇಲ್ಲ ಹೀಗಾಗಿ ಹೆಸರನ್ನು ಲಿಂಗಾಯತ ಎಂದು ಬದಲಿಸಬೇಕು. ವೀರಶೈವ ಎನ್ನುವುದೇ ಇಲ್ಲದಿದ್ದಾಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಎಂಬ ಹೆಸರನ್ನೇಕೆ ಇಡಬೇಕು ಎಂದು ಪ್ರಶ್ನಿಸಿದ್ದಾರೆ.

LINGAYATA PRESS MEET 22 5 WEB

ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮುಗಿದ ಅಧ್ಯಾಯ ಎಂದು ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದು ಸುಳ್ಳು ಲಿಂಗಾಯತರ ಹೋರಾಟ ನಿರಂತರವಾಗಿರುತ್ತದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಲಿಂಗಾಯತ ಹೋರಾಟ ಮುಗಿದ ಅಧ್ಯಾಯ ಎಂಬುದು ಕಾಂಗ್ರೆಸ್ ಪಕ್ಷದ ಹೇಳಿಕೆ ಅಗಿರಬಹುದು. ಅದರೆ, ಸ್ವತಂತ್ರ ಧರ್ಮದ ಹೋರಾಟ ನಮ್ಮ ಅಸ್ಮಿತೆ. ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸಿದ್ದರಾಮ ಸ್ವಾಮೀಜಿ ತಿಳಿಸಿದರು.

ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ನಿಗಮ ಮಂಡಳಿ ಸ್ಥಾಪನೆ ಮಾಡಿ ಲಿಂಗಾಯತ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಮುಂದಾಗಿದ್ದಾರೆ. ಇದಕ್ಕೆ ನಮ್ಮ ಒಪ್ಪಿಗೆ ಇದೆ. ಆದರೆ ಸ್ವತಂತ್ರ ಧರ್ಮದ ಹೋರಾಟಕ್ಕೂ ನಿಗಮ ಮಂಡಳಿ ಸ್ಥಾಪನೆಗೂ ಸಂಬಂಧವಿಲ್ಲ. ಕಾಂಗ್ರಸ್ ಪಕ್ಷದ ಕೆಲ ಲಿಂಗಾಯತ ನಾಯಕರು ಈ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿರುತ್ತದೆ. ನಿಗಮ ಮಂಡಳಿಗೂ ಸಹ ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ ಎಂದು ಸಲಹೆ ನೀಡಿದ್ದಾರೆ.

LINGAYATA PRESS MEET 22 3 WEB 1

ಎಲ್ಲೂ ಉಲ್ಲೇಖವಾಗಿಲ್ಲ
ಮಂಡಲ್ ವರದಿಯಲ್ಲಿ ಲಿಂಗಾಯತದ ಕುರಿತು ಪ್ರಸ್ತಾಪವಾಗಿಲ್ಲ. 30 ಪಂಗಡಗಳನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಕ್ಕೆ ಸೇರಿಸಲಾಗಿತ್ತು. ಉಳಿದ 90 ಪಂಗಡಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕೆಂಬ ಒತ್ತಡ ನಮ್ಮದಾಗಿದೆ. ಲಿಂಗಾಯತ ಗಾಣಿಗ, ನೇಕಾರ ಲಿಂಗಾಯತ, ಬಡಿಗ ಲಿಂಗಾಯತ ಸೇರಿದಂತೆ 30 ಪಂಗಡಗಳಿಗೆ ಲಿಂಗಾಯತ ಎಂದೇ ಸೇರಿಸಿದ್ದಾರೆ. ಯಾವ ಜಾತಿಯಲ್ಲೂ ವೀರಶೈವ ಲಿಂಗಾಯತ ಎಂದು ಉಲ್ಲೇಖವಾಗಿಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಎಸ್.ಎಂ.ಜಾಮದಾರ್ ಸ್ಪಷ್ಟಪಡಿಸಿದ್ದಾರೆ.

LINGAYATA PRESS MEET 22 6 WEB 1

ವೀರಶೈವವನ್ನು ಉಪಪಂಗಡವಾಗಿ ನಾವು ಗೌರವಿಸುತ್ತೇವೆ. ಆದರೆ, ತಾವೇ ಜಾತಿ ಹುಟ್ಟುಹಾಕಿದವರು, ಬಸವಣ್ಣ ಶಿಷ್ಯ ಎಂದರೆ ನಾವು ಒಪ್ಪುವುದಿಲ್ಲ. ಈ ಕುರಿತು ಬಹುತೇಕ ಜನರಿಗೆ ಜಾತಿ ಪ್ರಮಾಣ ಪತ್ರದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಇದೀಗ ಮತ್ತೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿ ಎಂದರೆ, ಅವರೇನು ಹುಚ್ಚರಾ? 2002ರ ಗೆಜೆಟ್ ನೋಟಿಫಿಕೇಷನ್ ಸರ್ಕಾರ ಹಿಂಪಡೆಯಬೇಕು. ಇಲ್ಲವಾದಲ್ಲಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಲೂ ಸಿದ್ಧ. ಈ ಕುರಿತು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಬೇಡಿ ಎಂದು ಜಾಮದಾರ್ ಮನವಿ ಮಾಡಿದರು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:backwardclasscongressgovt of karnatakalingayatPublic TVreligionswamijiveerashaivaಕಾಂಗ್ರೆಸ್ಧರ್ಮನಿಗಮ ಮಂಡಳಿಪಬ್ಲಿಕ್ ಟಿವಿರಾಜ್ಯ ಸರ್ಕಾರಲಿಂಗಾಯತವೀರಶೈವಸ್ವಾಮೀಜಿಗಳುಹಿಂದುಳಿದ ವರ್ಗ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
18 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
18 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
19 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
20 hours ago

You Might Also Like

2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
7 hours ago
1
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-2

Public TV
By Public TV
7 hours ago
3
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-3

Public TV
By Public TV
7 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
7 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
7 hours ago
friday 13
Latest

ಏನಿದು Unlucky Day – 13ನೇ ತಾರೀಖು, ಶುಕ್ರವಾರ ಒಟ್ಟಿಗೆ ಬಂದರೆ ಏನಾಗುತ್ತೆ?

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?