– ತಮ್ಮ ಕ್ಷೇತ್ರದ ಬಡವರಿಗೆ ಉಚಿತವಾಗಿ ವಿತರಣೆ
ಚಿಕ್ಕಬಳ್ಳಾಪುರ: ಕೊರೊನಾದಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣಬೈರೇಗೌಡ ರೈತರಿಂದ ಒಂದು ಟನ್ ಟೊಮೊಟೊ ಹಾಗೂ ಒಂದು ಟನ್ ತೊಂಡೆಕಾಯಿ ಖರೀದಿ ಮಾಡಿದ್ದಾರೆ. ತಮ್ಮ ಕ್ಷೇತ್ರದ ಬಡವರಿಗೆ ಆ ತರಕಾರಿಗಳನ್ನ ಉಚಿತವಾಗಿ ವಿತರಿಸಿದ್ದಾರೆ.
ಇಂದು ಕೃಷ್ಣಬೈರೇಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಇಲತೊರೆ ಗ್ರಾಮದ ರೈತ ನಾಗೇಶ್ ಹಾಗೂ ರಾಜಣ್ಣರ ತೋಟಕ್ಕೆ ಭೇಟಿ ನೀಡಿದ್ದಾರೆ. ಅವರು ಬೆಳೆದಿದ್ದ ಒಂದು ಟನ್ ಟೊಮೆಟೊ ಹಾಗೂ 1 ಟನ್ ತೊಂಡೆಕಾಯಿ ಖರೀದಿಸಿದ್ದಾರೆ. ಆ ತರಕಾರಿಯನ್ನು ತಮ್ಮ ಕ್ಷೇತ್ರದ ಬಡವರಿಗೆ ಉಚಿತವಾಗಿ ವಿತರಿಸಿದ್ದಾರೆ.
- Advertisement 2
- Advertisement 3
ಈಗಾಗಲೇ ಕೊರೊನಾ ಎಫೆಕ್ಟ್ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಾತ್ರ ಹೇಳಿಕೆಗಳನ್ನ ಕೊಡುತ್ತಾ ರೈತರಿಗೆ ಎಲ್ಲವನ್ನೂ ಮಾಡಿದ್ದೀವಿ ಅಂತ ಹೇಳುತ್ತಾ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ ನಿಜವಾಗಿಯೂ ರೈತನ ಕಷ್ಟ ಪರಿಸಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
- Advertisement 4
ತಮ್ಮ ಪಕ್ಷದ ಮುಖಂಡರು ಸಹ ರೈತರಿಂದ ಸಾಧ್ಯವಾದಷ್ಟು ತರಕಾರಿ ಖರೀದಿ ಮಾಡಿ ತಮ್ಮ ತಮ್ಮ ಕ್ಷೇತ್ರದ ಬಡ ಜನರಿಗೆ ಈ ಸಮಯದಲ್ಲಿ ಉಚಿತವಾಗಿ ಕೊಡಬೇಕು ಅಂತ ಮನವಿ ಮಾಡಿಕೊಂಡರು.