ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ಹೊರಟ ಕ್ರೂಸರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯವಾದ ಘಟನೆ ಬಾದಾಮಿ ತಾಳೂಕಿನ ಹುಲಗೇರೆ ಸಮೀಪ ನಡೆದಿದೆ.
ಪ್ರಕಾಶ್ ಬಡಿಗೇರ್ (34) ಮೃತ ದುರ್ದೈವಿ. ಮೃತ ವ್ಯಕ್ತಿ ಮುಧೋಳ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮದವಾನಾಗಿದ್ದರು. ಘಟನೆಯಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದರೇ, ಮೂವರಿಗೆ ಗಂಭೀರ ಗಾಯವಾಗಿದ್ದು, 6 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ 11 ಜನ ಹಿರೇ ಆಲಗುಂಡಿ ಗ್ರಾಮದವರಾಗಿದ್ದಾರೆ. ಇವರೆಲ್ಲರೂ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವಕ್ಕೆ ಭಾಗಿಯಾಗಲು ಹೋರಟಿದ್ದರು. ಈ ಸಮಯದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಸ್ಡಿಪಿಐ, ಪಿಎಫ್ಐ ಅವರನ್ನ ಸಾಕ್ತಿರೋದೆ ಬಿಜೆಪಿ: ಸಿದ್ದರಾಮಯ್ಯ
ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು.
ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
1/2
— Siddaramaiah (@siddaramaiah) August 2, 2022
ಘಟನೆ ಸಂಬಂಧಿಸಿ ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ತುಂಬಿ ಹರಿದ ಪಯಸ್ವಿನಿ ನದಿ- ಸಂಪಾಜೆ ಸಮೀಪದ ರಸ್ತೆ ಜಲಾವೃತ, ಅಂಗಡಿಗಳಿಗೆ ನುಗ್ಗಿತು ನೀರು