ಚಾಮರಾಜನಗರ: ಕರ್ನಾಟಕದ ಕಾಶ್ಮೀರ ಎಂದೇ ಕರೆಯಲ್ಪಡುವ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ (Himavad Gopalaswamy Hills) ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ನಿರಂತರ ಮಳೆಯಿಂದಾಗಿ (Rain) ಬೆಟ್ಟಕ್ಕೆ ಹೋಗುವ ರಸ್ತೆಗಳಲ್ಲಿ ಕೊರಕಲು ಉಂಟಾಗಿದೆ. ರಸ್ತೆ ಬದಿಗಳಲ್ಲಿ ಮಣ್ಣು ಕೊಚ್ಚಿಹೋಗಿದ್ದು, ದುರಸ್ತಿಗೆ ಬಂದಿದೆ. ಇನ್ನೂ ಮಳೆ ಹೆಚ್ಚಾದರೆ ರಸ್ತೆಯೇ ಕುಸಿಯುವ ಭೀತಿ ಎದುರಾಗಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ ಕರ್ನಾಟಕಕ್ಕೆ ವರ್ಗಾಯಿಸಲು ಕೋರಿದ್ದ ED ಮನವಿಗೆ ವಿರೋಧ – ಸುಪ್ರೀಂಗೆ ಕೇರಳ ಸರ್ಕಾರ ಅಫಿಡವಿಟ್
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ರಾಷ್ಟ್ರೀಯ ಉದ್ಯಾನವನದ (Bandipur National Park) ಹೃದಯ ಭಾಗದಲ್ಲಿದೆ.