Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಖರೀದಿಸಿದ ಆರೇ ತಿಂಗಳಲ್ಲಿ ವಾಹನ ರಿಪೇರಿ- ಹಳೆ ಇಂಜಿನ್‍ಗೆ ಹೊಸ ಬಾಡಿ ಹಾಕಿರುವ ಆರೋಪ

Public TV
Last updated: November 18, 2022 11:27 am
Public TV
Share
4 Min Read
TUMAKURU GOODS VEHICLE 6
SHARE

ತುಮಕೂರು: ಕಾರು (Car) ಖರೀದಿ ಮಾಡಲು ಹೋಗಿದ್ದ ರೈತನ ಕೊಳಕು ಬಟ್ಟೆ ನೋಡಿ, ಮಹಿಂದ್ರಾ ಶೋ ರೂಂ ಸಿಬ್ಬಂದಿ ಅವಮಾನ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿರೋದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ಅದೇ ತುಮಕೂರಿ (Tumakuru) ನಲ್ಲಿ ಟಾಟಾ ಶೋ ರೂಂನಿಂದ ಯುವ ರೈತನೋರ್ವನಿಗೆ ಮೋಸ ಆಗಿದೆ. ಖರೀದಿಸಿದ ಟಾಟಾ ಗೂಡ್ಸ್ ವಾಹನ (TaTa Goods) 25 ದಿನಕ್ಕೆ ಕೆಟ್ಟು ನಿಂತಿದೆ. ಹಳೇ ಇಂಜಿನ್‍ಗೆ ಹೊಸ ಬಾಡಿ ಫಿಕ್ಸ್ ಮಾಡಿ ಕೊಟ್ಟಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.

ಹೌದು.. ತುಮಕೂರಿನ ಅಂತರಸಹಳ್ಳಿಯ ಟಾಟಾ ಶೋರೂಂನಲ್ಲಿ ಹೆಬ್ಬೂರಿನ ಕುಮಾರ್ ಎಂಬ ಯುವ ರೈತನೋರ್ವ ಮೇ ತಿಂಗಳಲ್ಲಿ ಟಾಟಾ ಇಂಟ್ರಾ ಗೂಡ್ಸ್ ವಾಹನ ಖರೀದಿಸಿದ್ದರು. ಆದರೆ ವಾಹನ ಖರೀದಿಸಿದ 25 ದಿನದಲ್ಲೇ ವಾಹನ ರಿಪೇರಿಗೆ ಬಂದಿದೆ. ಸ್ಟೇರಿಂಗ್ ಸಮಸ್ಯೆ, ಚಾರ್ಸಿ ವೆಲ್ಡಿಂಗ್, ಎಕ್ಸ್ ಲೇಟರ್ ಒತ್ತಿದಾಗ ಗಾಡಿ ಪೂರ್ತಿ ಶೇಖ್ ಆಗೋ ಸಮಸ್ಯೆ ಕಂಡು ಬಂದಿದೆ. ಕಂಪನಿ ರೂಲ್ಸ್ ಪ್ರಕಾರ 72 ಸಾವಿರ ಕಿ.ಮೀ. ಒಳಗೆ ಓಡಿದರೆ ರೀಪ್ಲೇಸ್‌ಮೆಂಟ್‌ ಮಾಡಿಕೊಡಬೇಕು. ಆದರೆ ಶೋ ರೂಂನವರು ಕಳೆದ 6 ತಿಂಗಳಲ್ಲಿ ಬರೋಬ್ಬರಿ 11 ಬಾರಿ ರಿಪೇರಿ ಮಾಡಿ ಕಳುಹಿಸಿದ್ದಾರೆಯೇ ಹೊರತು ಬದಲಿ ವಾಹನ ಕೊಟ್ಟಿಲ್ಲ. ಇದರಿಂದ ರೊಚ್ಚಿಗೆದ್ದ ಯುವ ರೈತ ಕುಮಾರ್ ಟಾಟಾ ಶೋ ರೂಂ ಬಳಿ ಪ್ರತಿಭಟನೆ ಮಾಡಿದ್ದಾರೆ.

TUMAKURU GOODS VEHICLE 5

ಯುವ ರೈತ ಕುಮಾರ್ ಕೃಷಿ ಬಳಕೆಗೆ ವಾಹನ ಬಳಸುವ ಜೊತೆಗೆ ರೈತರಿಂದ ಸಂಗ್ರಹಿಸಿದ ಹಾಲನ್ನೂ ವಾಹನದ ಮೂಲಕ ಡೈರಿಗೆ ಸರಬರಾಜು ಮಾಡುವ ಕೆಲಸ ಮಾಡುತ್ತಿದ್ದ. ಮೊನ್ನೆ ದಿನ ಗೂಡ್ಸ್ ವಾಹನ ಮತ್ತೇ ಇದ್ದಕ್ಕಿದ್ದ ಹಾಗೆ ಕೈಕೊಟ್ಟಿತು. ಪರಿಣಾಮ ಸಕಾಲಕ್ಕೆ ಡೈರಿಗೆ ತಲುಪಲು ಆಗದೇ ಸುಮಾರು 900 ಲೀಟರ್ ಹಾಲು ಕೆಟ್ಟು ಹೋಗಿ ಸುಮಾರು 27 ಸಾವಿರ ರೂ. ನಷ್ಟ ಆಗಿದೆ. ಕಾಟಾಚಾರಕ್ಕೆ ಶೋರೂಂನವರು ರಿಪೇರಿ ಮಾಡಿಕೊಡ್ತಿದ್ದಾರೆಯೇ ಹೊರತು ಬದಲಿ ವಾಹನ ಕೊಡುವ ಮಾತನಾಡುತ್ತಿಲ್ಲ. ಹಳೇ ಇಂಜಿನ್‍ಗೆ ಹೊಸ ಬಾಡಿ ಫಿಕ್ಸ್ ಮಾಡಿಕೊಟ್ಟಿದ್ದಾರೆ ಅನ್ನೋ ಆರೋಪ ಕುಮಾರ್ ಮಾಡಿದ್ದಾರೆ. ಆದರೆ ಶೋ ರೂಂನವರು ಈ ಆರೋಪವನ್ನು ತಳ್ಳಿಹಾಕಿದ್ದಾರೆ.

ಸದ್ಯ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವಾಹನ ಖರೀದಿಸಿ ಪರದಾಡುತ್ತಿದ್ದ ಯುವ ರೈತ ಕುಮಾರ್ ಬದಲಿ ವಾಹನ ಕೊಡುವಂತೆ ಪಟ್ಟು ಹಿಡಿದಿದ್ದಾನೆ. ಇದನ್ನೂ ಓದಿ: ನಮ್ಮಿಂದ ಏನೂ ಮೋಸ ಆಗಿಲ್ಲ, ಎಲ್ಲವೂ ಗ್ರಾಹಕನದ್ದೇ ತಪ್ಪು: ತುಮಕೂರು ಶೋ ರೂಂ ಸ್ಪಷ್ಟನೆ

TUMAKURU GOODS VEHICLE 4

ಆರೋಪ ತಳ್ಳಿಹಾಕಿದ ಶೋ ರೂಂ
ಅಂತರಸನಹಳ್ಳಿಯ ಟಾಟಾ ಪ್ರೇರಣಾ ಮೋಟರ್ಸ್ ನಲ್ಲಿ ಯುವ ರೈತ ಕುಮಾರ್ ಖರೀದಿಸಿದ್ದ ಟಾಟಾ ಇಂಟ್ರಾ ಗೂಡ್ಸ್ (TATA Intra Goods) ವಾಹನದಲ್ಲಿ ಮೋಸ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋ ರೂಂ ಸರ್ವಿಸ್ ಮ್ಯಾನೇಜರ್ ಏಕನಾಥ್ ಸ್ಪಷ್ಟನೆ ಕೊಟ್ಟಿದ್ದಾರೆ.

ಸ್ಪಷ್ಟನೆ ಏನು?: 27 ಸಾವಿರ ಕಿ.ಮೀ. ಗಾಡಿ ರನ್ ಆಗಿದ್ದಾಗ ಒಂದು ಬಾರಿ ಸರ್ವಿಸ್ ಮಾಡಲು ಗಾಡಿ ತಂದಿದ್ದಾರೆ. ಪವರ್ ಸ್ಟೇರಿಂಗ್ ಸಮಸ್ಯೆ ಎಂದು ಬಂದಿದ್ದರು. ಅವಾಗ ನಾವು ಬದಲಾವಣೆ ಮಾಡಿಕೊಟ್ಟಿದ್ದೇವೆ. ಈಗ ಬಂದು ಹೊಸ ಸಮಸ್ಯೆ ಹೇಳುತ್ತಿದ್ದಾರೆ. ಹೊಂಡ ಗುಂಡಿಯಲ್ಲಿ ಗಾಡಿ ಬಿದ್ರೆ ಟಕ್ ಎಂದು ಸೌಂಡ್ ಬರುತ್ತೆ ಅಂತ ಹೇಳುತ್ತಿದ್ದಾರೆ. ಅದು ನಮಗೆ ಕಂಡು ಬರುತ್ತಿಲ್ಲ.

TUMAKURU GOODS VEHICLE 3

ಗಾಡಿಯನ್ನು ಒಂದು ದಿನ ಸಂಪೂರ್ಣವಾಗಿ ಶೋ ರೂಂನಲ್ಲಿ ಬಿಟ್ಟು ಹೋಗಿ ನಾವು ರಿಪೇರಿ ಮಾಡಿಕೊಡುತ್ತೇವೆ ಎಂದು ಹೇಳಿದ್ದೇವೆ. ಆದರೂ ಅವರು ಗಾಡಿ ಬಿಟ್ಟು ಹೋಗಲಿಕ್ಕೆ ಮುಂದಾಗುತ್ತಿಲ್ಲ. ಒಂದು ದಿನ ಗಾಡಿ ಬಿಟ್ಟು ಹೋದರೆ ನಮಗೆ ವ್ಯವಹಾರ ನಷ್ಟ ಆಗುತ್ತದೆ ಅಂತ ಹೇಳುತ್ತಾರೆ. ಗಾಡಿ ರಿಪೇರಿಗೆ ಬಿಟ್ಟರೆ ಒಂದು ದಿನದ ಮಟ್ಟಿಗೆ ಬದಲಿ ಇನ್ನೊಂದು ಗಾಡಿ ಅವರಿಗೆ ಕೊಡಬೇಕಂತೆ. ಇಲ್ಲಾಂದ್ರೆ ಆ ದಿನದ ಒಂದು ಬಾಡಿಗೆ ಕೊಡಿ ಅಂತ ಹೇಳ್ತಾರೆ. ಯಾವ ಕಂಪನಿಯಲ್ಲೂ ಆ ರೀತಿ ಆಯ್ಕೆ ಇಲ್ಲ.

ಈ ಮಾದರಿಯ ವಾಹನದಲ್ಲಿ ಇಲ್ಲಿಯವರೆಗೆ ಯಾವುದೇ ರೀತಿಯ ದೂರು ಬಂದಿಲ್ಲ. ಮೊದಲ ಬಾರಿಗೆ ದೂರು ಬಂದಿದೆ. ಅವರು ಗಾಡಿಯನ್ನು ಒಂದಿನ ಪೂರ್ತಿ ಗ್ಯಾರೇಜ್ ನಲ್ಲಿ ಬಿಟ್ಟು ಹೋದರೆ ನಾವು ಫ್ರೀ ಆಫ್ ಕಾಸ್ಟ್ಲಿ ಎಲ್ಲವೂ ರೆಡಿ ಮಾಡಿಕೊಡುತ್ತೇವೆ. ನಿಮ್ಮ ಗಾಡಿಯ ಸಮಸ್ಯೆಯನ್ನು ನೀವೇ ಮುಂದೆ ನಿಂತು ರಿಪೇರಿ ಮಾಡಿಕೊಂಡು ಹೋಗಿ ಎಂದು ನಾವು ಹೇಳಿದ್ದೇವೆ. ಆದರೆ ಅವರು ನಮ್ಮ ಮಾತು ಕೇಳುತ್ತಿಲ್ಲ. ಇದನ್ನೂ ಓದಿ: ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ – ಸ್ಕೂಲ್ ಬಳಿ ಬ್ಯಾಗ್ ಬಿಟ್ಟು ಕಣ್ಮರೆ

ಆರು ತಿಂಗಳಿಗೆ 70 ಸಾವಿರ ಕಿ.ಮೀ. ಗಾಡಿ ಓಡಿದೆ. ಅಷ್ಟೊಂದು ರನ್ ಆಗಲು ಹೇಗೆ ಸಾಧ್ಯ? ಟಾಟಾ ಮೋಟರ್ಸ್ ಮೊದಲ 72 ಸಾವಿರ ಕಿ.ಮೀ.ವರೆಗೆ ಮಾತ್ರ ಉಚಿತವಾಗಿ ರಿಪೇರಿ ಮಾಡಲಿಕ್ಕೆ ಅವಕಾಶ ಇದೆ. ನಾವು ರಿಪೇರಿ ಮಾಡಿಕೊಡುತ್ತೇವೆ ಎಂದು ಹೇಳಿದ್ದೇವೆ. ಆದರೂ ಅವರು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಏಕನಾಥ್ ಸ್ಪಷ್ಟನೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:farmertata showroomtumakuruಟಾಟಾ ಶೋ ರೂಂತುಮಕೂರುರೈತ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
7 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Mangaluru Student Suicide copy
Crime

ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Public TV
By Public TV
4 minutes ago
Apache helicopters 2
Latest

ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

Public TV
By Public TV
16 minutes ago
Khandre
Kalaburagi

ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

Public TV
By Public TV
19 minutes ago
MB Patil 2
Bengaluru City

ಜಾತಿಗಣತಿಗೆ 10 ವರ್ಷ ಆಗಿದ್ದಕ್ಕೆ ಹೊಸ ಜಾತಿಗಣತಿ: ಎಂ.ಬಿ ಪಾಟೀಲ್

Public TV
By Public TV
29 minutes ago
M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
33 minutes ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
41 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?