ಮುಂಬೈ: ಇಬ್ಬರ ನಡುವೆ ಗಲಾಟೆ ನಡೆದು, ನೆರೆದಿದ್ದ ಜನ ಕಲ್ಲು ತೂರಾಟ ನಡೆಸಿ ಖಾಸಗಿ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಛತ್ರಪತಿ ಸಂಭಾಜಿನಗರದ (Chhatrapati Sambhajinagar) ಕಿರದಪುರದ (Kiradpura) ರಾಮಮಂದಿರದ ಹೊರಗೆ ಬುಧವಾರ ರಾತ್ರಿ ನಡೆದಿದೆ.
ಪೊಲೀಸರು ಅಶ್ರವಾಯು ಸಿಡಿಸಿ ಉದ್ರಿಕ್ತ ಗುಂಪನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನಗಳಿಗೆ ತಗುಲಿದ್ದ ಬೆಂಕಿಯನ್ನು ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಿ ಆರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣ – ಜೆಡಿಎಸ್ ಶಾಸಕ ಗೌರಿಶಂಕರಗೆ ಅನರ್ಹತೆಯ ಭೀತಿ
ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ನಿಖಿಲ್ ಗುಪ್ತಾ ತಿಳಿಸಿದ್ದಾರೆ.
ಔರಂಗಾಬಾದ್ (Aurangabad) ಸಂಸದ ಇಮ್ತಿಯಾಜ್ ಜಲೀಲ್ ರಾಮ ಮಂದಿರಕ್ಕೆ (Ram temple) ತೆರಳಿದ್ದ ವೀಡಿಯೋ ಒಂದನ್ನು ಎಐಎಂಐಎಂನ (AIMIM) ರಾಷ್ಟ್ರೀಯ ಕಾರ್ಪೋರೇಟರ್ ಮೊಹಮ್ಮದ್ ನಾಸಿರುದ್ದೀನ್ ಹಂಚಿಕೊಂಡಿದ್ದರು. ಇದನ್ನು ಕೆಲವು ಕಿಡಿಗೇಡಿಗಳು ದೇವಾಲಯದ ಮೇಲೆ ದಾಳಿ ಎಂದು ಬಿಂಬಿಸಿ ಹಂಚಿಕೊಂಡಿದ್ದರು.
ಸುಳ್ಳು ಸುದ್ದಿಗಳನ್ನು ಪೊಲೀಸರು ಸಾಮಾಜಿಕ ಜಾಲತಾಣಗಳಿಂದ ತೆಗೆಸಿದ್ದು. ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಳ್ಳನೆಂದು ಶಂಕಿಸಿ ಹತ್ಯೆ- ಇಬ್ಬರ ಬಂಧನ