Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ

Latest

ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ

Public TV
Last updated: January 16, 2018 2:40 pm
Public TV
Share
3 Min Read
modi praveen togadia
SHARE

ಜೈಪುರ: ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವಿಶ್ವಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದು, ತನ್ನನ್ನು ಎನ್ ಕೌಂಟರ್ ಮಾಡವ ಮಾಹಿತಿ ಲಭಿಸಿತ್ತು ಎಂದು ಹೇಳಿದ್ದಾರೆ.

ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ನಾಯಕರನ್ನು ಹೆಸರನ್ನು ಉಲ್ಲೇಖಿಸದೇ ರಾಜಸ್ಥಾನ ಹಾಗೂ ಗುಜರಾತ್ ಸರ್ಕಾರ ಸಂಸ್ಥೆಗಳು ತಮ್ಮ ವಿರುದ್ಧ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಪೊಲೀಸರಿಗೆ ರಾಜಕೀಯ ಒತ್ತಡದಿಂದ ಕಾರ್ಯನಿರ್ವಹಿಸದಂತೆ ಮನವಿ ಮಾಡಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 10 ವರ್ಷದ ಹಿಂದಿನ ಹಳೆಯ ಪ್ರಕರಣವೊಂದರಲ್ಲಿ ಟಾರ್ಗೆಟ್ ಮಾಡಲಾಗಿದ್ದು, ರಾಜಸ್ಥಾನ ಪೊಲೀಸರು ತನ್ನನ್ನು ಬಂಧನ ಮಾಡಲು ಆಗಮಿಸಿದ್ದರು. ಈ ವೇಳೆ ತಮ್ಮನ್ನು ಎನ್‍ಕೌಂಟರ್ ಮಾಡಲು ಪ್ಲಾನ್ ಮಾಡಲಾಗಿತ್ತು ಎನ್ನುವ ಮಾಹಿತಿ ಸಿಕ್ಕಿತ್ತು ಎಂದು ಹೇಳಿದರು.

praveen togadia 1 1

ಇದರಿಂದ ನನ್ನನ್ನು ಕೊಲೆ ಮಾಡಬಹುದೆಂಬ ಭೀತಿ ಉಂಟಾಯಿತು. ಸುರಕ್ಷತೆಗಾಗಿ ತಕ್ಷಣ ಕಚೇರಿಗೆ ತೆರಳಲು ನಿರ್ಧರಿಸಿ ಥಟ್ಲೆಜ್‍ನಲ್ಲಿರುವ ಕಾರ್ಯಕರ್ತರೊಬ್ಬರ ಮನೆಗೆ ತೆರಳಿದೆ. ಈ ಮುನ್ನ ನನ್ನ ಮೊಬೈಲ್ ಸ್ವಿಚ್ ಆಫ್ ಮಾಡಿದೆ. ನಾನು ರಾಜಸ್ಥಾನ ಮುಖ್ಯಮಂತ್ರಿ ಮತ್ತು ಗೃಹಸಚಿವರನ್ನು ಸಂಪರ್ಕಿಸಿ ಮಾಹಿತಿ ಪಡೆದೆ. ರಾಜಸ್ಥಾನ ಸರ್ಕಾರದ ಆದೇಶವಿದೆ ಎಂದು ಅವರು ತಿಳಿಸಿದರು. ನಂತರ ರಾಜಸ್ಥಾನದಲ್ಲಿರುವ ನನ್ನ ವಕೀಲರ ಜತೆ ವಾರಂಟ್ ವಿಷಯ ತಿಳಿಸಿದೆ. ಬಳಿಕ ಜೈಪುರಕ್ಕೆ ವಿಮಾನದಲ್ಲಿ ತೆರಳಲು ನಿರ್ಧರಿಸಿ ಏರ್‍ಪೋರ್ಟ್ ಕಡೆಗೆ ಹೊರಡುವ ಮಾರ್ಗಮಧ್ಯೆ ಪ್ರಜ್ಞೆತಪ್ಪಿದೆ. ಬಳಿಕ ರಾತ್ರಿ ನಾನು ಆಸ್ಪತ್ರೆಯಲ್ಲಿದ್ದೇನೆ ಎಂಬುದು ಗೊತ್ತಾಯಿತು ಎಂದು ತೊಗಾಡಿಯಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಧ್ವನಿ ಅಡಗಿಸುವ ಯತ್ನ: ಕೆಲವರು ನನ್ನ ಧ್ವನಿಯನ್ನು ಅಡಗಿಸಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ರಾಮ ಮಂದಿರ ಗೋ ಹತ್ಯೆ ನಿಷೇಧ ಹಾಗೂ ರೈತರ ಅಭಿವೃದ್ಧಿ ಯೋಜನೆಗಳ ಬಗ್ಗೆ ಹೋರಾಟ ಮಾಡುತ್ತಿದ್ದು, ಈ ಕಾರಣದಿಂದಲೇ ತಮ್ಮನ್ನು ಗುರಿ ಮಾಡಲಾಗುತ್ತಿದೆ ಎಂದು ಹೇಳಿದರು.

ಯಾರು ನಿಮ್ಮ ಮೇಲೆ ಮೇಲೆ ದಾಳಿ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾಧ್ಯಮವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಈಗ ಯಾರ ಮೇಲೂ ಆರೋಪ ಮಾಡಲು ಸಾಧ್ಯವಿಲ್ಲ. ಆದರೆ ಈ ಕುರಿತ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡುವ ಮೂಲಕ ಮಾತನಾಡಿತ್ತೇನೆ ಎಂದರು.

ಇದೇ ವೇಳೆ ಪ್ರವೀಣ್ ತೊಗಾಡಿಯಾ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆಯಾಗಿದ್ದು, ಸಂಪೂರ್ಣ ಚೇತರಿಕೆ ಆಗುವವರೆಗೂ ಆಸ್ಪತ್ರಯಲ್ಲೇ ಹೆಚ್ಚಿನ ಚಿಕಿತ್ಸೆಯನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

praveen togadia ani tweet

12 ವರ್ಷಗಳ ಹಳೆಯ ಪ್ರಕರಣ: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೊಗಾಡಿಯಾ ಅವರನ್ನು ಬಂಧನ ಮಾಡಲು ಸೋಮವಾರ ಬೆಳಗ್ಗೆ ರಾಜಸ್ಥಾನ ಪೊಲೀಸರು ಆಗಮಿಸದ ವೇಳೆ ಎ-ಝೆಡ್ ಭದ್ರತೆಯನ್ನು ಹೊಂದಿರುವ ಅವರು ಅಹಮದಾಬಾದ್ ನಗರದ ಪಾಲ್ಡಿ ಪ್ರದೇಶದ ತಮ್ಮ ನಿವಾಸದಿಂದ ಕಾಣೆಯಾಗಿದ್ದರು. ನಂತರ ಲೋ ಬಿಪಿ ಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನ ಆಸ್ಪತ್ರೆಗೆ ಕರೆತರಲಾಗಿತ್ತು.

ಹಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತೊಗಾಡಿಯಾ ವಿರುದ್ಧ ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘನೆ) ಅಡಿಯಲ್ಲಿ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಅದರೆ ಅವರ ಮನೆಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ ವೇಳೆಯಲ್ಲಿ ಅವರು ಕಾಣೆಯಾಗಿದ್ದರು.

praveen thogadia hospitalised 1

ಪೊಲೀಸರು ತೊಗಾಡಿಯಾ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ವಿಹೆಚ್‍ಪಿ ಕಾರ್ಯಕರ್ತರು ಸೋಲಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದರು. ಘೋಷಣೆಗಳನ್ನ ಕೂಗಿ, ಸರ್‍ಖೇಜ್- ಗಾಂಧಿನಗರ ಹೆದ್ದಾರಿಯಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ತೊಗಾಡಿಯ ಅವರು ಇರುವ ಸ್ಥಳವನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿದ್ದರು.

ಆದ್ರೆ ತೊಗಾಡಿಯಾ ಅವರನ್ನು ನಮ್ಮ ತಂಡ ಬಂಧಿಸಿಲ್ಲ ಎಂದು ರಾಜಸ್ಥಾನ ಪೊಲೀಸ್‍ನ ಹಿರಿಯ ಅಧಿಕಾರಿ ಅಲೋಕ್ ಕುಮಾರ್ ವಸಿಷ್ಠ ಸ್ಪಷ್ಟಪಡಿಸಿದ್ದರು.

https://www.youtube.com/watch?v=nR9PoIhWD9M

#WATCH Ahmedabad: VHP leader #PravinTogadia broke down while addressing media earlier today, said 'attempts being made to muzzle my voice' pic.twitter.com/xTu2RikaOv

— ANI (@ANI) January 16, 2018

PRAVINTOGADIA 1

Togadia AFP 1

praveen togadia 1 2

praveen togadia 1

TAGGED:AhmedabadJaipurmodipraveen togadiaPublic TVVishwa Hindu Parishadಅಹಮದಾಬಾದ್ಜೈಪುರಪಬ್ಲಿಕ್ ಟಿವಿಪ್ರವೀಣ್ ತೊಗಾಡಿಯಾಮೋದಿವಿಶ್ವ ಹಿಂದೂ ಪರಿಷತ್
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Kushalnagar
Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
By Public TV
8 minutes ago
Raichuru Death
Crime

ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

Public TV
By Public TV
16 minutes ago
marigowda MUDA
Bengaluru City

ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
24 minutes ago
Iran vs USA
Latest

ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್‌ ಎಚ್ಚರಿಕೆ

Public TV
By Public TV
51 minutes ago
Suicide Bomber
Latest

ಪಾಕ್‌ ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್‌ ದಾಳಿಗೆ 7 ಬಲಿ, 25 ಮಂದಿಗೆ ಗಾಯ

Public TV
By Public TV
2 hours ago
Yadagiri Mudanuru
Districts

ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಅಡಗಿದೆ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?