ಚಾಲೆಂಜಿಂಗ್ ಸ್ಟಾರ್ ರಾಜ್, ವಿಷ್ಣು ಅವರಿಗೆ ಸಮ ಎಂದ್ರು ಶಂಕರ್ ಅಶ್ವಥ್!

Public TV
1 Min Read
SHANKAR ASHWATH DARSHAN COLLAGE

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಡಾ.ರಾಜ್‍ಕುಮಾರ್ ಹಾಗೂ ವಿಷ್ಣುವರ್ಧನ್‍ಗೆ ಸಮ ಎಂದು ಹಿರಿಯ ನಟ ಶಂಕರ್ ಅಶ್ವಥ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೀವನೋಪಯಕ್ಕಾಗಿ ಉಬರ್ ಕ್ಯಾಬ್ ಡ್ರೈವರ್ ಆಗಿದ್ದ ಶಂಕರ್ ಅಶ್ವಥ್ ದರ್ಶನ್ ಅವರ ಯಜಮಾನ ಸಿನಿಮಾದಲ್ಲಿ ಕಮ್‍ಬ್ಯಾಕ್ ಮಾಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜ್‍ಕುಮಾರ್, ವಿಷ್ಣುವರ್ಧನ್‍ಗೆ ಸಮ ಎನ್ನುವುದ್ದನ್ನು ಫೇಸ್‍ಬುಕ್ ಪೇಜ್‍ವೊಂದರಲ್ಲಿ ರಾಜ್‍ಕುಮಾರ್, ವಿಷ್ಣುವರ್ಧನ್, ದರ್ಶನ್‍ರ ಫೋಟೋವನ್ನು ಅಪ್‍ಲೋಡ್ ಮಾಡಿದ್ದಾರೆ. ಇದನ್ನೂ ಓದಿ: ಜೀವನ ನಿರ್ವಹಣೆಗೆ ಟ್ಯಾಕ್ಸಿ ಓಡಿಸುತ್ತಿದ್ದ ಶಂಕರ್ ಅಶ್ವಥ್‍ಗೆ ಆಸರೆಯಾದ ದರ್ಶನ್!

ಎಲ್ಲರಲ್ಲೂ ಪರಮಾತ್ಮ ಇರುತ್ತಾನೆ. ಆತನನ್ನು ಮುಟ್ಟಲು ಸುಲಭವಾದ ಮಾರ್ಗ ಅಂದರೆ ತಿನ್ನಲು ಏನಾದರೂ ಕೊಟ್ಟು ಸಂತೃಪ್ತಿ ಪಡಿಸುವುದು ಎಂದು ನನ್ನ ತಂದೆ ಹೇಳುತ್ತಿದ್ದರು. ಆ ಮೂರು ವ್ಯಕ್ತಿಗಳಿಗೆ ನಮ್ಮಿಂದ ಸೇರಿದ ಅಲ್ಪ ತಿನಿಸಿನಿಂದ ಸಂತೃಪ್ತರಾದರೆಂದು ತಿಳಿಸಲು ಹರ್ಷಪಡುತ್ತೇನೆ ಎಂದು ಶಂಕರ್ ಅಶ್ವಥ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಕೊಟ್ಟ ಮಾತಿನಂತೆ ಶಂಕರ್ ಅಶ್ವಥ್ ಮುಖದಲ್ಲಿ ನಗು ಮೂಡಿಸಿದ ದರ್ಶನ್

darshan shankar ashwath

ಅಂದು ಡಾ. ರಾಜ್‍ಕುಮಾರ್ ತಮ್ಮ ಜತೆಯಲ್ಲಿ ನಟಿಸುತ್ತಿದ್ದ ಕಲಾವಿದರ ಬಗ್ಗೆ ತುಂಬಾ ಕಾಳಜಿ ವಹಿಸುತ್ತಿದ್ದರು. ನಂತರ ಸಾಹಸಸಿಂಹ ವಿಷ್ಣುವರ್ಧನ್ ಕೂಡ ಕಲಾವಿದರಿಗೆ ಮಾತ್ರವಲ್ಲ ಕಷ್ಟದಲ್ಲಿರುವ ಅದೆಷ್ಟೊ ಕುಟುಂಬಗಳಿಗೆ ಬೆಳಕಾಗಿದ್ದರು. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್‍ರನ್ನು ಹೊಗಳಿದ ಶಂಕರ್ ಅಶ್ವಥ್

ಈ ಹಿಂದೆ ಶಂಕರ್ ಅಶ್ವಥ್ ಒಬ್ಬ ಮೇರು ನಟ ಅತ್ಯಂತ ಉನ್ನತ ಮಟ್ಟಕ್ಕೆ ಬೆಳೆದರೂ ನಾನು ಎಲ್ಲರಂತೆ ಸಾಮಾನ್ಯ ಎಂದು ನಿರೂಪಿಸಿ ಇನ್ನೂ ಎತ್ತರಕ್ಕೆ ಬೆಳೆದ ವ್ಯಕ್ತಿ ಶ್ರೀಯುತ ದರ್ಶನ್ ಅವರು ಎಂದು ಚಾಲೆಂಜಿಂಗ್ ಸ್ಟಾರ್ ಬಗ್ಗೆ ಬರೆದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *