ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಹಿರಿಯ ನಟಿ ಲೀಲಾವತಿ ಮತ್ತು ವಿನೋದ್ ರಾಜ್ ಕುಮಾರ್ ಭೇಟಿ ಮಾಡಿದ್ದಾರೆ.
ವಿಧಾನಸೌಧದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ತಾಯಿ-ಮಗ, ನೆಲಮಂಗಲ ತಾಲೂಕು ಸೋಲದೇವನಹಳ್ಳಿಯನ್ನು ಅರಣ್ಯ ಭೂಮಿ ಎಂದು ಪರಿಗಣಿಸಿ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆದಿದೆ. ಅದು ಕಂದಾಯ ಭೂಮಿ ಎಂದು ಕಾನೂನು ತಿದ್ದುಪಡಿ ಮಾಡಬೇಕಾಗಿದೆ. ಜತೆಗೆ ಬ್ಯಾರೇಜ್ ನಿರ್ಮಾಣಕ್ಕೂ ಸಚಿವರಲ್ಲಿ ಮನವಿ ಸಲ್ಲಿಸಿದರು.
ಇದಕ್ಕೆ ಜನವರಿ 27 ರಂದು ಸ್ಥಳ ಪರಿಶೀಲನೆ ಮಾಡಿ ವಿವಾದ ಬಗೆ ಹರಿಸುವುದಾಗಿ ಸಚಿವ ಜಯಚಂದ್ರ ಭರವಸೆ ನೀಡಿದ್ದಾರೆ ಅಂತ ಭೇಟಿ ಬಳಿಕ ಸುದ್ದಿಗಾರರಿಗೆ ನಟಿ ಲೀಲಾವತಿ ತಿಳಿಸಿದರು.