ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನರಾಗಿದ್ದಾರೆ. ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8.20ಕ್ಕೆ ಹೆಬ್ಬಾಳ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
76ರ ವಯಸ್ಸಿನ ವರ್ಮಾ ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರ ಬರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದರು. ಭುವನೇಶ್ವರಿ, ವೃಕ್ಷದಲ್ಲಿ ಡಾ.ರಾಜ್ ಕುಮಾರ್ ಸೇರಿದಂತೆ ಹಲವು ಚಿತ್ರಗಳು ಇವರಿಗೆ ಹೆಚ್ಚೆಚ್ಚು ಜನಪ್ರಿಯತೆಯನ್ನು ತಂದುಕೊಟ್ಟಿದ್ದವು. ಅನೇಕ ಶಿಬಿರಗಳನ್ನು ಆಯೋಜನೆ ಮಾಡುವ ಮೂಲಕ ಅವರು ಚಿತ್ರ ಕಲಾವಿದರನ್ನು ತಯಾರಿ ಮಾಡಿದ್ದರು. ಇದನ್ನೂ ಓದಿ: ಪೊಲೀಸ್ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ್ಯಾಪರ್ನನ್ನು ತಳ್ಳಿ ಬೀಳಿಸಿದ ಫ್ಯಾನ್
ಬಿಕೆಸ್ ವರ್ಮಾ ಕಲೆಯನ್ನು ಅರಸಿಕೊಂಡು ಅನೇಕ ಪ್ರಶಸ್ತಿ, ಪುರಸ್ಕಾರಗಳು ಬಂದಿವೆ. ಅವರ ಸಾಧನೆಗೆ ಲಲಿತಾ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜೀವ್ ಗಾಂಧಿ ಪ್ರಶಸ್ತಿ ಲಭಿಸಿದ್ದವು. ಬೆಂಗಳೂರು ವಿವಿ ಯಿಂದ 2011ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. 6ನೇ ವಯಸ್ಸಿಗೆ ಹವ್ಯಾಸವಾಗಿ ರೇಖಾಚಿತ್ರ ಪ್ರಾರಂಭಿಸಿದ್ದ ಅವರು, ನಿರಂತರವಾಗಿ ಆರೇಳು ದಶಕಗಳ ಕಾಲ ಚಿತ್ರಕಲೆಯಲ್ಲೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತಂದೆ ಕೃಷ್ಣಮಾಚಾರ್ಯರು ಸಂಗೀತಗಾರರಾಗಿದ್ದರು, ತಾಯಿ ಜಯಲಕ್ಷ್ಮೀ ಚಿತ್ರಕಲಾವಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k