ಮೃತ ಹಸುವಿನ ಪೋಸ್ಟ್ ಮಾರ್ಟಂ ರಿಪೋರ್ಟ್ ನೀಡಲು ಲಂಚ ಕೇಳಿದ ಪಶುವೈದ್ಯಾಧಿಕಾರಿ!

Public TV
1 Min Read
CHITRADURGA 1

ಚಿತ್ರದುರ್ಗ: ಪಶು ವೈದ್ಯಾಧಿಕಾರಿ (Veterinarian)ಯೊಬ್ಬ ಮೃತ ಹಸುವಿನ ಪೋಸ್ಟ್ ಮಾರ್ಟ್‍ಂ ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಸಂಗವೊಂದು ಚಿತ್ರದುರ್ಗ (Chitradurga) ದಲ್ಲಿ ನಡೆದಿದೆ.

ಡಾ.ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಪಶು ವೈದ್ಯಾಧಿಕಾರಿ. ಈತ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿರುವ ಪಶು ಆಸ್ಪತ್ರೆಯ ವೈದ್ಯಾಧಿಕಾರಿ. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ – 12 ಮೀನುಗಾರರ ರಕ್ಷಣೆ

ಕಾಗಳಗೆರೆ ಗ್ರಾಮದ ಎಸ್.ಸ್ವಾಮಿ ಎಂಬವರ ಬಳಿಯಿಂದ ಡಾ. ತಿಪ್ಪೇಸ್ವಾಮಿ 2 ಸಾವಿ ರೂ. ಲಂಚ ಸ್ವೀಕಾರ ಮಾಡಿದ್ದಾನೆ. ಈ ಬಗ್ಗೆ ಮೊದಲೇ ಮಾಹಿತಿ ಅರಿತ ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತ ಲಂಚ ಸ್ವೀಕಾರ ವೇಳೆ ವೈದ್ಯಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Share This Article