ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮನ

Public TV
1 Min Read
venkaiah naidu final

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಇಂದು ಸಂಜೆ ಬೆಂಗಳೂರಿನ ಎಚ್‍ಎಎಲ್ ಏರ್‍ಪೋರ್ಟ್‍ಗೆ ಆಗಮಿಸಲಿರುವ ವೆಂಕಯ್ಯ ನಾಯ್ಡು ಅವರು, 4 ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಸೋಮವಾರ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ನಂತರ ಬುಧವಾರ ನಡೆಯಲಿರುವ ಕರ್ನಾಟಕ ಹಾಗೂ ದೇಶದ ಮಹತ್ವದ ಕಾರ್ಯಕ್ರಮವಾದ 24ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಬುಧವಾರ ಸಂಜೆಯೇ ಹೈದರಾಬಾದ್‍ಗೆ ತೆರಳಲಿದ್ದಾರೆ. ಇದನ್ನೂ ಓದಿ: ದತ್ತಪೀಠಕ್ಕೆ ತೆರಳ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪಿನಿಂದ ಕಲ್ಲುತೂರಾಟ

venkaiah naidu copy

‘ಬೆಂಗಳೂರು ಟೆಕ್ ಸಮ್ಮಿಟ್ 2021’ ಕಾರ್ಯಕ್ರಮದಲ್ಲಿ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ದಾವೋಸ್ ನಲ್ಲಿರುವ ವಿಶ್ವ ಆರ್ಥಿಕ ವೇದಿಕೆಯ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ ಎನ್ನಲಾಗುತ್ತಿದ್ದು, ಈ ಸಮ್ಮಿಟ್ ನಿಂದಾಗಿ ತಂತ್ರಜ್ಞಾನ ಕ್ಷೇತ್ರ ಇನ್ನಷ್ಟು ವಿಸ್ತರಣೆ ಆಗಲಿದೆ ಮತ್ತು ಉದ್ಯೋಗವಕಾಶಗಳೂ ಕೂಡ ಹೆಚ್ಚಲಿವೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕಾಲೇಜಿನಲ್ಲಿ ವಿದ್ಯಾರ್ಥಿಗಳ 250 ಮೊಬೈಲ್ ಜಪ್ತಿ – ಫೋನ್ ನೋಡಿ ಪೋಷಕರು ಶಾಕ್

Share This Article
Leave a Comment

Leave a Reply

Your email address will not be published. Required fields are marked *