Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಣದಾಸೆಗಾಗಿ ಉಂಡ ಮನೆಗೇ ದ್ರೋಹ ಬಗೆದ ಅಪರಾಧಿಗೆ ಬಿಡುಗಡೆ ಭಾಗ್ಯ – ಜೈಲಿನಿಂದ ಹೊರಬಿಡದಂತೆ ಗೋಗರೆದ ಕುಟುಂಬಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಹಣದಾಸೆಗಾಗಿ ಉಂಡ ಮನೆಗೇ ದ್ರೋಹ ಬಗೆದ ಅಪರಾಧಿಗೆ ಬಿಡುಗಡೆ ಭಾಗ್ಯ – ಜೈಲಿನಿಂದ ಹೊರಬಿಡದಂತೆ ಗೋಗರೆದ ಕುಟುಂಬಸ್ಥರು

Dakshina Kannada

ಹಣದಾಸೆಗಾಗಿ ಉಂಡ ಮನೆಗೇ ದ್ರೋಹ ಬಗೆದ ಅಪರಾಧಿಗೆ ಬಿಡುಗಡೆ ಭಾಗ್ಯ – ಜೈಲಿನಿಂದ ಹೊರಬಿಡದಂತೆ ಗೋಗರೆದ ಕುಟುಂಬಸ್ಥರು

Public TV
Last updated: August 10, 2022 9:22 am
Public TV
Share
2 Min Read
PRAVEEN VAMJURU CASE
SHARE

ಮಂಗಳೂರು: 90ರ ದಶಕದಲ್ಲಿ ಕರಾವಳಿಯನ್ನು ಬೆಚ್ಚಿಬೀಳಿಸಿದ್ದ ಕೊಲೆ ಪ್ರಕರಣವದು. ಒಂದೇ ರಾತ್ರಿಯಲ್ಲಿ ಮನೆಯಲ್ಲಿ ಮಲಗಿದ್ದ ತನ್ನ ಸಂಬಂಧಿಕ ನಾಲ್ವರನ್ನು ಭಯಾನಕವಾಗಿ ಕೊಂದು ಹಾಕಿದ್ದ ಘಟನೆ. ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಸುದೀರ್ಘ 28 ವರ್ಷಗಳ ಜೈಲು ವಾಸದ ಬಳಿಕ ಬಿಡುಗಡೆಯಾಗುತ್ತಿದ್ದಾನೆ. ಆದರೆ ಆತನ ಕುಟುಂಬಸ್ಥರೇ ಅಪರಾಧಿಯನ್ನು ಬಿಡುಗಡೆ ಮಾಡದಂತೆ ಸರ್ಕಾರಕ್ಕೆ ಗೋಗರೆದಿದ್ದಾರೆ.

PRAVEEN VAMANJURU

ಚಿನ್ನ ಮತ್ತು ಹಣದಾಸೆಗಾಗಿ ಉಂಡ ಮನೆಗೇ ದ್ರೋಹ ಬಗೆದವನ ಕತೆಯಿದು. ವೃತ್ತಿಯಲ್ಲಿ ಟೈಲರ್ ಆಗಿದ್ದ ವ್ಯಕ್ತಿ ಜೂಜಾಟಕ್ಕೆ ಬಿದ್ದು ತನ್ನ ಅತ್ತೆ ಮತ್ತು ಅವರ ಕುಟುಂಬಸ್ಥರನ್ನೇ ಕೊಂದು ಹಾಕಿದ್ದ ಘಟನೆಯದು. ಸುದೀರ್ಘ 28 ವರ್ಷಗಳ ಹಿಂದೆ ಅಂದರೆ, 1993ರ ಫೆಬ್ರವರಿ 23ರಂದು ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ಘಟನೆ ನಡೆದಿತ್ತು. ವಾಮಂಜೂರಿನಲ್ಲಿ ನೆಲೆಸಿದ್ದ ಪ್ರವೀಣ್ ತನ್ನ ಸೋದರತ್ತೆ 75 ವರ್ಷದ ಅಪ್ಪಿ ಶೇರಿಗಾರ್ತಿ, ಆಕೆಯ ಮಗಳು 36 ವರ್ಷದ ಶಕುಂತಳಾ, 9 ವರ್ಷದ ಮೊಮ್ಮಗಳು ದೀಪಿಕಾ ಮತ್ತು ಇನ್ನೊಬ್ಬ ಮಗ 30 ವರ್ಷದ ಗೋವಿಂದನನ್ನು ಭೀಭತ್ಸವಾಗಿ ಕೊಲ್ಲಲಾಗಿತ್ತು. ಅದೇ ಮನೆಯಲ್ಲಿ ಉಂಡು ಮಲಗಿದ್ದ ಪ್ರವೀಣ್ ಕೊಲೆ ಆರೋಪಿಯಾಗಿದ್ದ. ನಂತರ ಕಂಬಿ ಏನಿಸುತ್ತಿದ್ದ. ಇದೀಗ ಸುದೀರ್ಘ 23 ವರ್ಷಗಳ ಕಾಲ ಬೆಳಗಾವಿ ಜೈಲಿನಲ್ಲಿದ್ದ ಪ್ರವೀಣನನ್ನು ಈ ಬಾರಿಯ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗುತ್ತಿದೆ ಎನ್ನುವ ಸುದ್ದಿ ಇದೆ. ಆದರೆ ನಾಲ್ವರನ್ನು ಭೀಕರವಾಗಿ ಕೊಂದಿದ್ದ ಪ್ರವೀಣ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲೇಬಾರದು. ಆತ ಜೈಲಿನಿಂದ ಹೊರಬಂದಲ್ಲಿ ನಮ್ಮನ್ನೂ ಸಾಯಿಸುತ್ತಾನೆ ಎಂಬ ಭೀತಿಯಿದೆ ಎಂದು ಆತನ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ

PRAVEEN VAMJURU CASE 1

ಕೃತ್ಯ ನಡೆದು ಒಂದೇ ವಾರದಲ್ಲಿ ಆಗಿನ ಎಸ್‍ಐ ಜಯಂತ್ ಶೆಟ್ಟಿ ನೇತೃತ್ವದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಹತ್ತಿರದ ಸಂಬಂಧಿಕರನ್ನೇ ಚಿನ್ನಕ್ಕಾಗಿ ಕೊಂದಿದ್ದ ಕ್ರೌರ್ಯಕ್ಕಾಗಿ ಆರೋಪಿಗೆ ಮಂಗಳೂರಿನ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಗಲ್ಲು ಶಿಕ್ಷೆಯನ್ನು ಬಳಿಕ ಸುಪ್ರೀಂ ಕೋರ್ಟ್ ಜೀವಾವಧಿಗೆ ಇಳಿಸಿತ್ತು. ಇದೀಗ ಸನ್ನಡತೆ ಆಧಾರದಲ್ಲಿ ಪ್ರವೀಣ್‍ನನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ ಪ್ರವೀಣ್‍ನ ಹೆಂಡತಿ ಸೇರಿದಂತೆ ಕುಟುಂಬಸ್ಥರು ಮಂಗಳೂರಿನ ಪೊಲೀಸ್ ಕಮಿಷನರ್‌ ಶಶಿ ಕುಮಾರ್‌ರನ್ನು  ಭೇಟಿಯಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜೈಲಿನಿಂದ ಆತ ಹೊರಬಂದಲ್ಲಿ ನಮ್ಮ ಜೀವಕ್ಕೂ ಅಪಾಯವಿದೆ. ಹಣ, ಆಸ್ತಿಗಾಗಿ ಆತ ಏನು ಮಾಡುವುದಕ್ಕೂ ಹೇಸದ ವ್ಯಕ್ತಿ ಎಂದು ಹೇಳಿದ್ದಾರೆ. ಹೀಗಾಗಿ ಪೊಲೀಸ್ ಕಮೀಷನರ್ ಸಂತ್ರಸ್ತರ ಹೇಳಿಕೆಗಳನ್ನು ಪಡೆದು ಪ್ರವೀಣ್‍ನ ಬಿಡುಗಡೆಗೆ ವಿರೋಧವಿದೆ ಎಂದು ವರದಿ ತಯಾರಿಸಿ ಸರ್ಕಾರಕ್ಕೆ ರವಾನಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನದ ಹಣ ಕದಿಯುವುದಕ್ಕೂ ಮುನ್ನ ದೇವಿ ವಿಗ್ರಹಕ್ಕೆ ನಮಸ್ಕರಿಸಿದ ಅರೆನಗ್ನ ಕಳ್ಳ

PRAVEEN VAMJURU CASE 2

ಆದರೆ ಬೆಳಗಾವಿ ಜೈಲಿನ ಅಧಿಕಾರಿಗಳು ಈಗಾಗಲೇ ಪ್ರವೀಣ್‍ನ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಮತ್ತೆ ತಡೆ ಹೇರುತ್ತಾರೆಯೇ ಎನ್ನುವ ಬಗ್ಗೆ ಕುಟುಂಬಸ್ಥರಲ್ಲೂ ಆತಂಕ ಇದೆ.

Live Tv
[brid partner=56869869 player=32851 video=960834 autoplay=true]

TAGGED:MangaluruPraveen KumarVamanjoorಜೈಲುಪ್ರವೀಣ್ಮಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
27 minutes ago
RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
44 minutes ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
1 hour ago
NAMMA METRO 1
Bengaluru City

IPL 2026 | ಏ.15, 24ರ ರಾತ್ರಿ 2 ಗಂಟೆವರೆಗೆ `ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

Public TV
By Public TV
2 hours ago
Noida Protest 1
Latest

ನೋಯ್ಡಾ ಕಾರ್ಮಿಕರ ಪ್ರತಿಭಟನೆಗೆ ರಾತ್ರೋ ರಾತ್ರಿ ಪ್ಲ್ಯಾನ್‌ – ಪಾಕಿಸ್ತಾನ ಲಿಂಕ್‌ ಬಗ್ಗೆ ತನಿಖೆ, 300 ಜನ ಅರೆಸ್ಟ್‌

Public TV
By Public TV
2 hours ago
Basangouda Patil Yatnal
Districts

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?