ಬೆಂಗಳೂರು: ನಗರದ ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪೃಥ್ವಿ ರಾಜ್ ರೆಡ್ಡಿ(31) ಸೂಸೈಡ್ ಮಾಡಿಕೊಂಡ ವೈದ್ಯ. ಹೆಬ್ಬಾಳದ ಗೋದ್ರೆಜ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಇವರು 11ನೇ ಮಹಡಿಯಿಂದ ಹಾರಿ ಜೀವ ಕಳೆದುಕೊಂಡಿದ್ದಾರೆ. ಪೃಥ್ವಿರಾಜ್, ಮೂರು ತಿಂಗಳ ಹಿಂದೆಯಷ್ಟೇ ವೈದ್ಯೆಯನ್ನ ಮದುವೆ ಆಗಿದ್ದರು. ಗಂಡ-ಹೆಂಡತಿ ಇಬ್ಬರು ಕೂಡ ವಿಕ್ಟೊರಿಯಾ ಆಸ್ಪತ್ರೆಯಲ್ಲೆ ವೈದ್ಯರಾಗಿ ಕೆಲಸ ಮಾಡಿಕೊಂಡಿದ್ದರು. ಇದನ್ನೂ ಓದಿ: ಸ್ವಯಂ ಪ್ರೇರಿತನಾಗಿ ಡ್ರಗ್ಸ್ ಸೇವಿಸಿಲ್ಲ, ಬೆಂಗಳೂರು ಪೊಲೀಸ್ ಒಳ್ಳೆಯವರು : ಬಾಲಿವುಡ್ ನಟ ಸಿದ್ಧಾಂತ್ ಕಪೂರ್
ಇವರು ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಪೃಥ್ವಿರಾಜ್ ಡೆತ್ ನೋಟ್ ಬರೆದಿದ್ದಾರೆ. ಮೊಬೈಲ್ ನಲ್ಲಿ ತೆಲುಗು ಭಾಷೆಯಲ್ಲಿ ಡೆತ್ ನೋಟ್ ಬರೆದಿದ್ದಿಟ್ಟಿದ್ದಾರೆ. ಹೀಗಾಗಿ ಅವರ ಮೊಬೈಲ್ ವಶಕ್ಕೆ ಪಡೆದು ತನಿಖೆ ಮಾಡಲಾಗುತ್ತಿದೆ.
ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.