ಬಳ್ಳಾರಿ: ಕಂದಾಯ ಇಲಾಖೆಯ ಸಿಬ್ಬಂದಿ ಹಾಡಿದ ಹಾಡಿಗೆ ಬಳ್ಳಾರಿ ಜಿಲ್ಲಾಧಿಕಾರಿ ಕುಣಿದು ಕುಪ್ಪಳಿಸಿ ಎಂಜಾಯ್ ಮಾಡಿದ್ದಾರೆ.
ಜಿಲ್ಲಾ ಮಟ್ಟದ ಕಂದಾಯ ದಿನಾಚರಣೆಯ ನಿಮಿತ್ತ ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಇಲಾಖೆಯ ಸಿಬ್ಬಂದಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ’ ಎಂಬ ಹಾಡನ್ನು ಹಾಡಿದ್ದಾರೆ.
ಈ ಹಾಡು ಹಾಡುತ್ತಿದ್ದಂತೆಯೇ ಕಾರ್ಯಕ್ರಮ ವೀಕ್ಷಣೆ ಮಾಡುತ್ತಿದ್ದ ಜಿಲ್ಲಾಧಿಕಾರಿ ರಾಮಪ್ರಸಾತ್ ಮನೋಹರ್ ವೇದಿಕೆಯ ಮೇಲೆ ಹತ್ತಿ ಕುಣಿಯುವ ಮೂಲಕ ತಾವು ಕೂಡ ಪವರ್ ಸ್ಟಾರ್ ಅಭಿಮಾನಿ ಎಂದು ತೋರಿಸಿಕೊಟ್ಟರು.
ಇಲಾಖೆಯ ಸಿಬ್ಬಂದಿಗಳಿಗಾಗಿ ದಿನವಿಡೀ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳ್ಳಾರಿ ಜಿಲ್ಲಾಧಿಕಾರಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಸಿಬ್ಬಂದಿ ಜೊತೆ ಬೆರೆತು ಸಂಭ್ರಮಿಸಿದ್ದು ವಿಶೇಷವಾಗಿತ್ತು.
https://www.youtube.com/watch?v=3KBS4_WzRzA