ಕೋಲ್ಕತ್ತಾ: ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ್ ನಲ್ಲಿ ನಡೆದಿದೆ.
ಈ ಘಟನೆ ಸೋಮವಾರ ಖರ್ಗಾಪುರ ಚೌರಿಂಗಿಯಲ್ಲಿ ನಡೆದಿದ್ದು, ಮೋದಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿಲ್ಲ ಅಂತ ಸಿಟ್ಟುಗೊಂಡ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾರೆ.
#WATCH: BJP workers attack Civic police volunteers at Chowringhee crossing in Kharagpur, earlier today, reportedly after the party workers couldn't attend Prime Minister's rally in Midnapore due to heavy traffic on the route. #WestBengal pic.twitter.com/BM1LIqwh1Z
— ANI (@ANI) July 16, 2018
ಸೋಮವಾರ ಮಿಡ್ನಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಯಿತ್ತು. ಹೀಗಾಗಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ತೆರಳುತ್ತಿದ್ದರು. ಈ ವೇಳೆ ಕಾರ್ಯಕರ್ತರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಸಾಧ್ಯವಾಯಿತು. ಹೀಗಾಗಿ ಸಿಟ್ಟಗೊಂಡ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಅಲ್ಲಿಂದ ಪಲಾಯನ ಮಾಡಲು ಯತ್ನಿಸಿದ್ದಾರೆ. ಇದರಿಂದ ಮತ್ತಷ್ಟು ಸಿಟ್ಟುಗೊಂಡ ಕಾರ್ಯಕರ್ತರು ಅವರ ಮೇಲೆ ದಾಳಿ ನಡೆಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸೋಮವಾರ ನಡೆದ ಮೋದಿ ಕಾರ್ಯಕ್ರಮದ ವೇಳೆ ಟೆಂಟ್ ಕುಸಿದು 90 ಮಂದಿ ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಪ್ರಧಾನಿಯವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.